ಹಂಚಿನಾಳದಲ್ಲಿ ಹನಿ ನೀರಿಗೂ ಪರದಾಟ


Team Udayavani, Apr 13, 2019, 3:42 PM IST

kopp-2
ತಾವರಗೇರಾ: ಸಮೀಪದ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಮಹಿಳೆಯರು, ಮಕ್ಕಳು ಮೈಲಿ ದೂರದ ತೋಟದ ಜಮೀನಿನಿಂದ ನೀರುವ ತರುವಂತ ಪರಿಸ್ಥಿತಿ ಎದುರಿಗಾಗಿದೆ.
ಹಿರೇಮನ್ನಾಪುರ ಗ್ರಾಪಂ ವ್ಯಾಪ್ತಿಯ ಹಂಚಿನಾಳ ಗ್ರಾಮದಲ್ಲಿ ಸುಮಾರು 150-200 ಕುಟುಂಬಗಳಿವೆ. ಈ ಗ್ರಾಮದಲ್ಲಿರುವ ನೀರಿನ ಟ್ಯಾಂಕ್‌ಗಳು ನೀರುಪಯುಕ್ತವಾಗಿದ್ದು, ಅಂತರ್ಜಲ ಕುಸಿತದಿಂದ ಗ್ರಾಮದ ಕೊಳವೆಬಾವಿಗಳಲ್ಲಿ ಹನಿ ನೀರಿಗಾಗಿ ಹರಸಾಹಸ ಪಡಬೇಕಾಗಿದೆ. ಗ್ರಾಮಸ್ಥರು ಕೊಡ ನೀರಿಗಾಗಿ ಗಂಟೆಗಟ್ಟಲೇ ಕಾಯುವಂತಾಗಿದೆ. ಅಷ್ಟೇ ಅಲ್ಲದೇ ನೀರಿಗಾಗಿ ಜನರು ಕೈ ಕೈ ಮಿಲಾಯಿಸಿದ ಪ್ರಸಂಗಗಳು ನಡೆದಿವೆ.
ನೀರು ತರುವುದೇ ಕಾಯಕ: ಮಹಿಳೆಯರು, ಮಕ್ಕಳು ನೀರಿಗಾಗಿ ಬಂಡಿಯನ್ನು ತಳ್ಳುತ್ತಾ ತಿರುಗಾಡುವದು ಇಲ್ಲಿ ಮಾಮೂಲಿಯಾಗಿದೆ. ತಮ್ಮ ಮನೆಗೆ ನೀರುತರಲು ಜಮೀನುಗಳಿಗೆ ಅಲೆದಾಡುತ್ತಿರುವದು ಅಲ್ಲಲ್ಲಿ ಕಂಡು ಬರುತ್ತಿವೆ. ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ ಎನ್ನುತ್ತಾರೆ ಸಾರ್ವಜನಿಕರು.
ನೀರಿನ ಘಟಕ: ಗ್ರಾಮದಲ್ಲಿ 2-3 ವರ್ಷಗಳ ಹಿಂದೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಲಾಗಿದೆ. ಆದರೆ ತಾಂತ್ರಿಕ ಸಮಸ್ಯೆಯಿಂದ ಈ ನೀರಿನ ಘಟಕ ಸ್ಥಗಿತಗೊಂಡು ವರ್ಷಗಳಾಗಿದ್ದು, ಸಂಬಂಧಪಟ್ಟವರು ದುರಸ್ತಿಗೆ ಮುಂದಾಗಿಲ್ಲ. ಗ್ರಾಮಸ್ಥರಿಗೆ ಫ್ಲೋರಾಯಡ್‌ಯುಕ್ತ ನೀರೇ ಗತಿಯಾಗಿದೆ.
ಸ್ಪಂದಿಸದ ಅಧಿಕಾರಿಗಳು: ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಅನೇಕ ಬಾರಿ ಸಂಬಂಧ ಪಟ್ಟ ಗ್ರಾಪಂ, ಪಿಡಿಒ, ಅಧ್ಯಕ್ಷರಿಗೆ, ತಾಪಂ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಗ್ರಾಮಸ್ಥರಾದ ದೇವಪ್ಪ ಭಜೆಂತ್ರಿ, ಹನುಮಪ್ಪ, ಶರಣಪ್ಪ, ದೊಡ್ಡಪ್ಪ ಹಾಗೂ ಇತರರು.
ಹಂಚಿನಾಳ ಗ್ರಾಮದಲ್ಲಿ ಅಂತರ್ಜಲ ಕುಸಿತದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದು ಗಮನಕ್ಕೆ ಬಂದಿದೆ. ಟ್ಯಾಂಕರ್‌ ಮೂಲಕ ನೀರು ಸರಬುರಾಜು ಮಾಡಲು ಕ್ರಮಕೈಗೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುತ್ತೇನೆ.
 ಕೆ. ಮಹೇಶ, ಜಿಪಂ ಸದಸ್ಯ 
ಗ್ರಾಮದಲ್ಲಿರುವ ಕೈಪಂಪ್‌ ಬೋರವೆಲ್‌ ದುರಸ್ತಿ ಮಾಡಿಸುತ್ತೇನೆ. ಆದಷ್ಟು ಬೇಗ ಗ್ರಾಮಸ್ಥರಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಲಾಗುವುದು.
 ಚಂದುಸ್ವಾಮಿ, ಹಿರೇಮನ್ನಾಪುರ ಗ್ರಾಪಂ ಪಿಡಿಒ
ಎನ್‌. ಶಾಮೀದ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.