ಶಾಲೆ ಶುರು, ಬಿಸಿಯೂಟ ಸ್ಥಗಿತ!

ಕೋವಿಡ್‌ ನೆಪದಲ್ಲಿ ಬಿಸಿಯೂಟಕ್ಕೆ ಕೊಕ್ಕೆ ,ಗ್ರಾಮೀಣ ಮಕ್ಕಳಿಗೆ ತೊಂದರೆ

Team Udayavani, Feb 27, 2021, 5:59 PM IST

ಶಾಲೆ ಶುರು, ಬಿಸಿಯೂಟ ಸ್ಥಗಿತ!

ದೋಟಿಹಾಳ(ಕೊಪ್ಪಳ): ಸರ್ಕಾರವು ಶಾಲೆ ಆರಂಭಿಸಿದೆ. ಮಕ್ಕಳು ಕ್ರಮೇಣ ಶಾಲೆಗೆ ಆಗಮಿಸಿ ಪಾಠ ಆಲಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ನೆರವಾಗುವ ಬಿಸಿಯೂಟವನ್ನು ಆರಂಭಿಸುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬ ತೊಂದರೆಯಾಗುತ್ತಿದೆ. ಸರ್ಕಾರ ಕೋವಿಡ್‌ ಸೋಂಕು ನಿಯಂತ್ರಣದ ಬಳಿಕ ಎಲ್ಲವನ್ನು ಆರಂಭ ಮಾಡಿದೆ.

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ 6ರಿಂದ 10ನೇ ತರಗತಿವರೆಗೂ ಶಾಲೆ ಆರಂಭವಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಪಾಲಕರು ಬೆಳಗ್ಗೆ ಹೊಲ ಗದ್ದೆಗಳಿಗೆ ದುಡಿಮೆಗೆ ಹೋದವರುಸಂಜೆ ವೇಳೆಗೆ ಮನೆಗೆ ಆಗಮಿಸುತ್ತಾರೆ. ವೇಳೆ ಮಕ್ಕಳು ಪಾಲಕರು ಬರುವವರೆಗೂ  ಶಾಲಾ ಅವಧಿಯಲ್ಲಿ ಶಿಕ್ಷಕರ ಪಾಠ ಆಲಿಸುತ್ತಾರೆ. ಅವರಿಗೆ ಮಧ್ಯಾಹ್ನದ ಊಟದ ಸಮಸ್ಯೆಯೂಎದುರಾಗುವುದು ಸಾಮಾನ್ಯ. ಸರ್ಕಾರ ಇದೆಲ್ಲವನ್ನು ಗಮನಿಸಿ ಈ ಯೋಜನೆ ಆರಂಭಿಸಿದೆ. ಕೋವಿಡ್‌ ಬಳಿಕ ಸರ್ಕಾರ ಇದೊಂದನ್ನು ಸ್ಥಗಿತ ಮಾಡಿ ವಿದ್ಯಾರ್ಥಿಗಳ ಊಟಕ್ಕೆ ತೊಂದರೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಇನ್ನೂ ವಿದ್ಯಾರ್ಥಿಗಳು “ನಮ್ಮ ಮನ್ಯಾಗ ಎಲ್ಲರೂ ಮುಂಜಾನೆ ಐದು ಗಂಟೆಗೆ ಹೊಲಕ್ಕೆ ಹೋಗ್ತಾರಾ. ರಾತ್ರಿ ಮಾಡಿದ ಅನ್ನ ಊಟ ಮಾಡಿ, ಮಧ್ಯಾಹ್ನಕ್ಕೂ ಅದನ್ನೇ ಬತ್ತಿಕಟ್ಟಿಕೊಂಡು ಶಾಲೆಗೆ ಬರ್ತೀವಿ. ಆದರೆಮಧ್ಯಾಹ್ನದ ವೇಳೆಗೆ ನಮ್ಮ ಬುತ್ತಿ ಅನ್ನ ಕೆಟ್ಟು (ಹಳಸಿ) ಹೋಗಿರುತ್ತದೆ. ಇದರಿಂದ ಊಟಕ್ಕೆ ತೊಂದರೆಯಾಗುತ್ತಿದೆ’ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಶಾಲೆಯಲ್ಲಿ ಬಿಸಿಯೂಟ ಇಲ್ಲದ ಕಾರಣ. ನಾವು ರಾತ್ರಿ ಮಾಡಿದಅನ್ನುವನ್ನೇ ಮಧ್ಯಾಹ್ನ ಬುತ್ತಿ ಕಟ್ಟಿಕೊಂಡುಶಾಲೆಗೆ ಬರುತ್ತೇವೆ. ಮಧ್ಯಾಹ್ನದ ಹೊತ್ತಿಗೆಅನ್ನ ಬಿಸಿಲಿಗೆ ಕೆಟ್ಟು ಹೋಗುತ್ತಿದೆ. ಕೆಲವರು ಮನೆಯಿಂದ ಊಟ ತರುವುದಿಲ್ಲ. ಅವರನ್ನುಜೊತೆಯಲ್ಲಿ ಕರೆದುಕೊಂಡು ಊಟಮಾಡುತ್ತೇವೆ. ಸರ್ಕಾರ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಿ.-ಅಮರೇಶ ಚವ್ಹಾಣ, ಶಿವಪ್ಪ ರಾಠೊಡ, ವಿದ್ಯಾರ್ಥಿಗಳು

ಸದ್ಯ ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಆಹಾರ ಧಾನ್ಯ ಮಾತ್ರ ವಿತರಣೆ ಮಾಡಲಾಗುತ್ತಿದೆ. ಆದರೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುತ್ತಿಲ್ಲ. -ಅನಿತಾ, ಜಿಲ್ಲಾ ಅಕ್ಷರದಾಸೋಹ ಅಧಿಕಾರಿ ಕೊಪ್ಪಳ

ಕೇಂದ್ರ ಸರ್ಕಾರ ಕೊರೊನಾ ಹಾವಳಿಯಿಂದ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ಸ್ಥಗಿತ ಮಾಡಲು ಆದೇಶ ನೀಡಿದೆ. ಶಾಲೆಗಳಲ್ಲಿ ಮಕ್ಕಳು ಸಾಮೂಹಿಕವಾಗಿ ಊಟ ಮಾಡುವುದನ್ನು ನಿಲ್ಲಿಸಿದ್ದಾರೆ. ಮಕ್ಕಳ ಸಮಸ್ಯೆಗಳ ಬಗ್ಗೆ ಅ ಧಿಕಾರಿಗಳ ಜತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೋಳ್ಳುತ್ತೇವೆ. -ನಾರಾಯಣಗೌಡ, (ಜೆಡಿಯು) ಮಧ್ಯಾಹ್ನ ಬಿಸಿಯೂಟ ಯೋಜನೆಯ ಅಧಿಕಾರಿ ಬೆಂಗಳೂರು

 

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.