ಬಿಸಲ ಧಗೆ: ತಂಪು ಪಾನೀಯಕ್ಕೆ  ಹೆಚ್ಚಿದ ಬೇಡಿಕೆ


Team Udayavani, Mar 21, 2019, 11:38 AM IST

21-march-20.jpg

ಸಿದ್ದಾಪುರ: ಹೈದ್ರಾಬಾದ್‌ ಕರ್ನಾಟಕ ಭಾಗದ ಜಿಲ್ಲೆಗಳ ನಗರ, ಗ್ರಾಮೀಣ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಕೆಂಡ ಮೈಮೆಲೆ ಸುರಿದುಕೊಂಡ ಉರಿ ಬಿಸಿಲಿನ (ಕಾವು)ತಾಪ ಏರುತ್ತಿದೆ. ಬಿಸಿಲ ತಾಪದಿಂದ ಬೆಂದು ಹೋಗುತ್ತಿರುವ ಜನ ತಂಪು ಪಾನೀಯ, ಎಳನೀರು, ಹಣ್ಣುಗಳು ಸೇರಿದಂತೆ ಜ್ಯೂಸ್‌ ಹಾಗೂ ಐಸ್‌ಕ್ರೀಮ್‌ ಮೊರೆ ಹೋಗುತ್ತಿದ್ದಾರೆ.

ಬಿಸಿಲಿನ ಝಳಕ್ಕೆ ತತ್ತರಿಸಿರುವ ಸಾಕಷ್ಟು ಜನ ಎಳನೀರು ಸೇವಿಸಿದರೆ ಮತ್ತಷ್ಟು ಮಂದಿ ಹಣ್ಣು, ಹಂಪಲು, ತಂಪು ಪಾನೀಯ ಅಂಗಡಿಗಳಿಗೆ ಲಗ್ಗೆ ಇಡುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸದ್ಯ ಬಿಸಿಲಿನ ತಾಪಮಾನ 30ರಿಂದ 39 ಡಿಗ್ರಿ ಸೆಲ್ಸಿಯಸ್‌ ಇದೆ. ಇನ್ನೂ ಈ ಬಿಸಿಲಿನ ದಾಹ ತಣಿಸಿಕೊಳ್ಳಲು ಕೆಲವೆಡೆ ವಯಸ್ಸಾದ ಹಿರಿಯರು ಮರದ ನೆರಳು, ಶಾಲೆಯ ಆವರಣ, ದೇವಸ್ಥಾನ ಆವರಣದಲ್ಲಿ ಆಶ್ರಯ ಪಡೆದುಕೊಳ್ಳುತ್ತಿದ್ದಾರೆ.

ಎಳನೀರಿಗೆ ಬೇಡಿಕೆ ಹೆಚ್ಚುತ್ತಿದ್ದು, ದೊಡ್ಡ ವ್ಯಾಪಾರಿಗಳು ದೂರದ ಮಂಡ್ಯ, ಮೈಸೂರು, ತಿಪಟೂರು, ಮದ್ದೂರಿನಿಂದ ಎಳನೀರು ತರಿಸುತ್ತಿದ್ದಾರೆ. ಇನ್ನು ಸಣ್ಣಪುಟ್ಟ ವ್ಯಾಪಾರಿಗಳು ಸ್ಥಳೀಯವಾಗಿ ಸಿಗುವ ತೆಂಗಿನ ಕಾಯಿಗಳನ್ನು ತಂದು ಸೈಕಲ್‌, ತಳ್ಳುಬಂಡಿಯಲ್ಲಿ ತಂದು ಮಾರಾಟ ಮಾಡುತ್ತಾರೆ. ಇನ್ನು ಗಂಗಾವತಿ-ರಾಯಚೂರ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಬದಿಯ ಗಿಡದ ನೆರಳಲ್ಲಿ ಅರ್ಧ ಕಿ.ಮೀ ಒಬ್ಬರಂತೆ ಎಳ ನೀರು ಮಾರಾಟಗಾರರು ಸಿಗುತ್ತಾರೆ.

ಈ ಹಿಂದೆ 25ರಿಂದ 30 ರೂ. ಗೆ ಮಾರಾಟವಾಗುತ್ತಿದ್ದ ಎಳನೀರು ಇದೀಗ 35ರಿಂದ 40 ರೂ. ವರೆಗೂ ಹೆಚ್ಚಳವಾಗಿದೆ. ಬೆಲೆ ಹೆಚ್ಚಾದರೂ ಜನ ಎಳನೀರು ಕುಡಿಯುವುದನ್ನು ಬಿಟ್ಟಿಲ್ಲ. ದುಬಾರಿಯಾದರು ಸರಿ ನಮಗೆ ಬಿಸಿಲಿನ ತಾಪ ಕಡಿಮೆಯಗಬೇಕು ಎಂಬುದು ನಾಗರಿಕರ ಅನಿಸಿಕೆ. 

ಇನ್ನು ತಂಪುಪಾನೀಯ, ಜ್ಯೂಸ್‌, ಹಣ್ಣುಗಳಿಗೂ ಬೇಡಿಕೆ ಹೆಚ್ಚುತ್ತಿದೆ. ರಸ್ತೆಯ ಹೆದ್ದಾರಿ ಬದಿಯಲ್ಲಿ ಅಲ್ಲಲ್ಲಿ ತಾತ್ಕಾಲಿಕ ಟೆಂಟ್‌ಗಳನ್ನುಹಾಕಿಕೊಂಡು ಲಸ್ಸಿ, ಮಜ್ಜಿಗೆ, ಕಬ್ಬಿನ ಹಾಲು, ಗೋಲಿಸೋಡಾ, ಬಾದಾಮಿ ಹಾಲು, ಕಲ್ಲಂಗಡಿ ಹಣ್ಣು ಹೀಗೆ ಇನ್ನಿತರ ಹಣ್ಣುಗಳನ್ನು ಹಾಗೂ ಐಸ್‌ಕ್ರೀಮ್‌ಗಳನ್ನು ಸಹ ವ್ಯಾಪಾರಿಗಳು ಮರಾಟ ಮಾಡುತ್ತಿದ್ದಾರೆ.

ಬೈಕ್‌ನಲ್ಲಿ ಸಂಚರಿಸುವಾಗ ಬಿಸಿಲು ಹಾಗೂ ಡಾಂಬರ್‌ ರಸ್ತೆಯ ಝಳ ಹೆಚ್ಚಿರುತ್ತದೆ. ಹಾಗಾಗಿ ಬಿಸಿಲಿನಿಂದ ದೇಹದ ಆರೋಗ್ಯ ರಕ್ಷಿಸಿಕೊಳ್ಳಲು ಮತ್ತು ಧಣಿವಾದಾಗ ಹೆದ್ದಾರಿ ಬದಿಯಲ್ಲಿ ಸಿಗುವ ಎಳನೀರು, ಜ್ಯೂಸ್‌ ಕುಡಿಯುವು ಅನಿವಾರ್ಯ.
 ನಾಗರಾಜ, ಬೈಕ್‌ ಸವಾರ 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.