ಹುಬ್ಬಳ್ಳಿ: ಬಾಲಕನಿಗೆ ಬೆತ್ತಲೆ ಪೂಜೆ ಮಾಡಿದ ವಿಕೃತರು

ಶ್ರೀಮಂತರಾಗಬೇಕೆಂದು... ಸಾಲವೆಲ್ಲ ತೀರಲೆಂದು ಹೇಯ ಕೃತ್ಯ

Team Udayavani, Oct 3, 2022, 5:30 PM IST

crime (2)

ಕೊಪ್ಪಳ: ನಿಮ್ಮಪ್ಪನ ಸಾಲ ತೀರಬೇಕೆಂದರೆ ನೀವು ಶ್ರೀಮಂತರಾಗಬೇಕೆಂದರೆ, ನಿಮ್ಮ ಸಾಲವೆಲ್ಲ ತೀರಿ ಹೋಗುತ್ತದೆ ಎಂದು ಪುಸಲಾಯಿಸಿ  ಅಪ್ರಾಪ್ತ ವಯಸ್ಕ ಬಾಲಕನಿಗೆ ಹುಬ್ಬಳ್ಳಿಯ ತಿಮ್ಮ ಸಾಗರದ ವಾಲ್ಮೀಕಿ ಭವನದಲ್ಲಿ ಬೆತ್ತಲೆ ಪೂಜೆ ಮಾಡಿಸಿ ವಿಡಿಯೋ ಮಾಡಿ ಜೀವ ಬೆದರಿಕೆ ಹಾಕಿದ ಹೇಯ ಪ್ರಕರಣ ಬೆಳಕಿಗೆ ಬಂದಿದೆ.

ತಾಲೂಕಿನ ಹಾಸಗಲ್ ಗ್ರಾಮದ ಶರಣಪ್ಪ ತಳವಾರ, ವಿರುಪನಗೌಡ ಗೌಡ್ರ, ಶರಣಪ್ಪ ಓಜಿನಳ್ಳಿ ಎನ್ನುವ ವ್ಯಕ್ತಿಗಳು ಎರಡುವರೆ ತಿಂಗಳ ಹಿಂದೆ ಗ್ರಾಮದ ಚನ್ನಬಸಪ್ಪ ಅಳ್ಳಳ್ಳಿ ಅವರ 15 ವರ್ಷದ ಪುತ್ರ ಸಂದೀಪ (ಹೆಸರು ಬದಲಿಸಿದೆ) ನನ್ನು ಹುಬ್ಬಳ್ಳಿಯಲ್ಲಿ ಜೆಜೆಎಂ ಕೆಲಸಕ್ಕೆ ಕಳುಹಿಸಿಕೊಡು ಎಂದು ಕೇಳಿದ್ದಾರೆ. ಚೆನ್ನಬಸಪ್ಪ ಅವರು ನನ್ನ ಪುತ್ರನು ಇನ್ನೂ ಅಪ್ತಾಪ್ತನಿದ್ದು ಆತನನ್ನು ಕೆಲಸಕ್ಕೆ ಕಳಿಸುವುದಿಲ್ಲ ಎಂದಿದ್ದಾರೆ.

ಕೆಲಸ ಚೆನ್ನಾಗಿದೆ ಕಳಿಸಿಕೊಡು ಎಂದು ಮತ್ತೆ ಪೀಡಿಸಿದ ಕಾರಣ ಆತನನ್ನು ಕಳಿಸಿಕೊಟ್ಟಿದ್ದಾರೆ. ಆ ಬಾಲಕನನ್ನು ಹುಬ್ಬಳ್ಳಿಯ ತಿಮ್ಮಸಾಗರಕ್ಕೆ ಕರೆದುಕೊಂಡು ತೆರಳಿದ್ದ ಮೂವರು ಆರೋಪಿತರು ತಿಮ್ಮಸಾಗರದ ವಾಲ್ಮೀಕಿ ಭವನದಲ್ಲಿ ರಾತ್ರಿ ವೇಳೆ, ನಿಮ್ಮ ಅಪ್ಪನ ಸಾಲ ತೀರಬೇಕೆಂದರೆ, ನಿಮ್ಮ ಸಾಲ ಯಾರೂ ಕೇಳಬಾರದು ಎಂದರೆ ನೀವು ಶ್ರೀಮಂತರಾಗಬೇಕು. ಎಂಎಲ್‌ಎ ಆಗಬೇಕೆಂದರೆ ನೀನು ಬೆತ್ತಲೆ ಪೂಜೆಯನ್ನು ಮಾಡಬೇಕೆಂದು ಬಾಲಕನ ಮನಸ್ಸು ಕೆಡಿಸಿದ್ದಾರೆ. ಬಾಲಕನನ್ನು ಒತ್ತಾಯ ಪೂರ್ವಕ ಬೆತ್ತಲೆ ಮಾಡಿ ಆತನ ಮೈಗೆಲ್ಲಾ
ವಿಭೂತಿ, ಕುಂಕುಮ ಹಚ್ಚಿ, ನಿಂಬೆ ಹಣ್ಣಿನ ಸರವನ್ನು ಕೊರಳಲ್ಲಿ ಹಾಕಿದ್ದಾರೆ. ಬಾಲಕನ ತಲೆಗೆ ಶರಣಪ್ಪ ಎನ್ನುವ ವ್ಯಕ್ತಿ ನಿಂಬೆಹಣ್ಣಿನ ರಸವನ್ನು ಹಿಂಡಿದ್ದಾನೆ. ಬಾಲಕ ಬೆತ್ತಲೆಯಾಗಿರುವಾಗ ಮರ್ಮಾಂಗವನ್ನು ಮುಟ್ಟಿದ್ದಾರೆ. ಇದೆಲ್ಲವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ನೀನು ಹೀಗೆ ಬೆತ್ತಲೆ ಸೇವೆ ಮಾಡುತ್ತಲೇ ಇರಬೇಕು ಹೇಳಿದ್ದಾರೆ. ಹಲವು ಬಾರಿ ಬೆತ್ತಲೆ ವಿಡಿಯೋ ಚಿತ್ರಿಕರಿಸಿದ್ದಾರೆ. ಇದನ್ನು ಯಾರಿಗಾದರೂ ಹೇಳಿದರೆ ನಿನ್ನ ಹಾಗೂ ನಿಮ್ಮಪ್ಪನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ. ಬಾಲಕನ ಬೆತ್ತಲೆ ವೀಡಿಯೋಗಳು ಗ್ರಾಮದ ವ್ಯಕ್ತಿಯೋರ್ವನ ಬಳಿ ಹರಿದಾಡಿವೆ. ತಂದೆ ಚನ್ನಬಸಪ್ಪ ಅಳ್ಳಳ್ಳಿಗೂ ಈ ವಿಷಯ ಗೊತ್ತಾಗಿ ಮಗನನ್ನು ಭಾನುವಾರವಷ್ಟೇ ಊರಿಗೆ ಕರೆಯಿಸಿ ಕೇಳಿದ್ದಾನೆ.

ಆಗ ಮಗನು ತನಗಾಗಿರುವ ನೋವಿನ ಬಗ್ಗೆ ಹೆತ್ತವರ ಮುಂದೆ ಎಲ್ಲವನ್ನೂ ಬಾಯಿ ಬಿಟ್ಟಿದ್ದಾನೆ. ಇದರಿಂದ ತಂದೆ ಚನ್ನಬಸಪ್ಪ ಅಳ್ಳಳ್ಳಿ ಅವರು ಶರಣಪ್ಪ ತಳವಾರ, ವಿರುಪನಗೌಡ ಹಾಗೂ ಶರಣಪ್ಪ ಓಜಿನಳ್ಳಿ ಎನ್ನುವ ಮೂವರ ವಿರುದ್ದವೂ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನನ್ನ ಮಗನ ಬೆತ್ತಲೆ ವಿಡಿಯೋ ಮಾಡಿ ಹರಿ ಬಿಟ್ಟಿದ್ದು, ವಾಮಾಚಾರದಂತೆ ಆತನಿಗೆ ಪೂಜೆ ಮಾಡಲಾಗಿದೆ. ಅಲ್ಲದೇ ಮಗನಿಗೆ ಜೀವ ಬೆದರಿಕೆ ಹಾಕಲಾಗಿದೆ ಎನ್ನುವ ಹಲವು ಕಾರಣ ನೀಡಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಅಪ್ತಾಪ್ತ ಬಾಲಕನನ್ನು ಅತ್ಯಂತ ವಿಕೃತಿಯ ರೀತಿಯಲ್ಲಿ ಬೆತ್ತಲೆ ಪೂಜೆ ಮಾಡಿಸಿದ್ದು ನಿಜಕ್ಕೂ ನಾಗರಿಕೆ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಆ ಬಾಲಕನನ್ನು ವಾಮಾಚಾರಕ್ಕೆ ಬಳಕೆ ಮಾಡಲಾಗಿದೆಯೋ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಸೇರಿದಂತೆ ಕುಟುಂಬ ವರ್ಗ ಒತ್ತಾಯ ಮಾಡಿದೆ.

ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದ ಮೂವರು ಅಪ್ತಾಪ್ತನನ್ನು ಹುಬ್ಬಳ್ಳಿಗೆ ಜೆಜೆಎಂ ಕೆಲಸಕ್ಕೆ ಕರೆದುಕೊಂಡು ಹೋಗಿ ಬೆತ್ತಲೆ ಪೂಜೆ ಮಾಡಿರುವ ವಿಷಯದ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿಷಯ ನಮ್ಮ ಗಮನಕ್ಕೆ ಬಂದಾಕ್ಷಣ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದೇವೆ. ಮೂವರ ಶೋಧ ಕಾರ್ಯ ನಡೆದಿದೆ. ಈ ಪ್ರಕರಣ ಹುಬ್ಬಳ್ಳಿ ಠಾಣಾ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಿದ್ದೇವೆ ಎಂದು ಕೊಪ್ಪಳ ಎಸ್ಪಿ ಅರುಣಾಂಗ್ಷು ಗಿರಿ ಹೇಳಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.