ನಿರ್ಲಕ್ಷ್ಯಕ್ಕೆ ಸಾಕ್ಷಿ ಹುಚ್ಚರಾಯನಗುಡಿ

| ಪುರಾತನ ದೇಗುಲ ಈಗಲೂ ಗಟ್ಟಿಮುಟ್ಟು | ಗೋಪುರ ಮಾತ್ರ ಶಿಥಿಲ

Team Udayavani, Feb 24, 2021, 4:51 PM IST

ನಿರ್ಲಕ್ಷ್ಯಕ್ಕೆ ಸಾಕ್ಷಿ  ಹುಚ್ಚರಾಯನಗುಡಿ

ಕುಷ್ಟಗಿ: ಸ್ಮಾರಕ ದೇಗುಲವನ್ನು ಛಾಯಾಗ್ರಾಹಕ ಸಂಘದವರು 2016ರಲ್ಲಿ ಸ್ವಚ್ಛಗೊಳಿಸಿದ ಸಂದರ್ಭದಲ್ಲಿ ಸ್ಥಿತಿ ಹೀಗಿತ್ತು. ದೇಗುಲದ ಸದ್ಯದ ಸ್ಥಿತಿ ಹೀಗಿದೆ.(ಬಲಚಿತ್ರ)

ಕುಷ್ಟಗಿ: ಪಟ್ಟಣದ ಹೊರವಲಯದ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-50, ಮೇಲ್ಸೇತುವೆ ಪಕ್ಕದಲ್ಲಿರುವ ಪ್ರಾಚೀನ ಸ್ಮಾರಕ ದೇಗುಲ “ಹುಚ್ಚರಾಯನ ಗುಡಿ’ ಸಂರಕ್ಷಣೆ ಇಲ್ಲದೇ ಮುಳ್ಳುಕಂಟಿಗಳು ಆವರಿಸಿ ನಿರ್ಲಕ್ಷ್ಯಕ್ಕೀಡಾಗಿದೆ.

17ನೇ ಶತಮಾನದ ಶೈವ ಪರಂಪರೆಯ ಸ್ಮಾರಕ ಇದೆನ್ನಲಾಗಿದ್ದು, ಇದಕ್ಕೆ ಹುಚ್ಚರಾಯನ ಗುಡಿ ಹೆಸರು ಹೇಗೆ ಬಂತೆನ್ನುವುದು ಗೊತ್ತಿಲ್ಲ. ಇದರ ಬಗ್ಗೆ ಸ್ಪಷ್ಟ ಪುರಾವೆಗಳಿಲ್ಲ. ಈಗಲೂ ಗಟ್ಟಿಮುಟ್ಟಾಗಿರುವ ಈ ದೇಗುಲದ ಗೋಪುರ ಭಾಗ ಮಾತ್ರ ಕಾಲಕ್ರಮೇಣ ಶಿಥಿಲಾವಸ್ಥೆಗೀಡಾಗಿದ್ದು, ಮೂಲಸ್ವರೂಪ ಕಳೆದುಕೊಂಡಿದೆ.

ಈ ದೇಗುಲ ಪ್ರದೇಶದಲ್ಲಿ ಛಾಯಾಗ್ರಾಹಕ ಸಂಘದವರು 2016ರಲ್ಲಿ ಶ್ರಮದಾನ ಶಿಬಿರ ನಡೆಸಿ ಗಮನಾರ್ಹ ಕಾರ್ಯ ಕೈಗೊಂಡಿದ್ದರು. ನಂತರದ ದಿನಗಳಲ್ಲಿ ಈ ದೇಗುಲ ಬಗ್ಗೆ ಯಾರೂ ಕಾಳಜಿ ವಹಿಸಿಲ್ಲ.

ಸದ್ಯದ ಪರಿಸ್ಥಿತಿಯಲ್ಲಿ ಹೀಗೊಂದು ಸ್ಮಾರಕ ದೇಗುಲ ಇತ್ತೆನ್ನುವುದು ಮರತೇ ಹೋಗಿದೆ. ಈ ಸ್ಮಾರಕ ದೇಗುಲದ ಅಕ್ಕಪಕ್ಕದಲ್ಲಿ ಚರಂಡಿ ಹರಿಯುತ್ತಿದ್ದು, ದೇಗುಲವನ್ನು ಮುಳ್ಳುಕಂಟಿಗಳು ಮರೆಯಾಗಿಸಿವೆ. ಈ ದೇಗುಲದತ್ತ ತೂರಿ ಹೋಗುವಷ್ಟು ದಾರಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ವಿಷಜಂತುಗಳ ಭೀತಿಗೆ ಯಾರೂ ಅಲ್ಲಿಗೆ ಹೋಗಲು ಧೈರ್ಯ ಮಾಡಿಲ್ಲ.

ಐತಿಹಾಸಿಕ ದೇಗುಲ ಮುಳ್ಳುಕಂಟಿಯಲ್ಲಿ ಮುಚ್ಚಿ ಹೋಗಿ ಯಾರೂ ಗಮನ ಹರಿಸುತ್ತಿಲ್ಲ. ಇದಕ್ಕಿಂತ ಬೇಸರದ ಸಂಗತಿ ಇನ್ನೊಂದಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಸ್ಥಳಿಯರಾದ ಪಾಂಡುರಂಗ ಅವರು.

ಇದು ಸರ್ಕಾರದ ಆಸ್ತಿ. ಇದರ ಬಗ್ಗೆ ಪುರಾತತ್ವ ಇಲಾಖೆ ಗಮನ ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿರುವುದು ಇಂದಿನ ಅನಿವಾರ್ಯತೆಯಾಗಿದೆ. ಇದು ಖಾಸಗಿಯವರ ಸ್ವತ್ತಲ್ಲ. ಶಾಸಕರು, ಪುರಸಭೆ ಅಧ್ಯಕ್ಷರು, ತಹಶೀಲ್ದಾರರು ಇತ್ತ ಗಮನ ಹರಿಸಿ ಸಂರಕ್ಷಣೆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಪಾಂಡುರಂಗ ಅವರು ಒತ್ತಾಯಿಸುತ್ತಾರೆ.

ಪಟ್ಟಣದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ಐತಿಹಾಸಿಕ ಸ್ಮಾರಕ ದೇಗುಲದ ಸುತ್ತಲೂ ಮುಳ್ಳು ಕಂಟಿ ಬೆಳೆದಿದ್ದು, ಬುಧವಾರ ಬೆಳಗ್ಗೆ ಜೆಸಿಬಿಯಿಂದ ತೆರವುಗೊಳಿಸಿ ಸ್ವಚ್ಛಗೊಳಿಸಲಾಗುವುದು. ಮುಂದೆ ವರಲಕ್ಷ್ಮೀ (ವರಲೆಕ್ಕವ್ವ) ಸ್ಮಾರಕ ದೇಗುಲದಂತೆ ಈ ದೇಗುಲವನ್ನೂ ಅಭಿವೃದ್ಧಿಗೊಳಿಸಲು ಯೋಜಿಸಲಾಗಿದೆ.  -ಗಂಗಾಧರಸ್ವಾಮಿ ಹಿರೇಮಠ, ಅಧ್ಯಕ್ಷರು, ಪುರಸಭೆ ಕುಷ್ಟಗಿ

 

­-ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.