ಮಾನವ ಕಳ್ಳ ಸಾಗಾಣಿಕೆ ಕಾನೂನು ಬಾಹಿರ ಚಟುವಟಿಕೆ

ಮಹಿಳೆಯರ, ಮಕ್ಕಳ ಹಕ್ಕುಗಳು, ಕಾನೂನುಗಳ ಕುರಿತು ಜಾಗೃತಿ ಮೂಡಿಸಿ

Team Udayavani, Jan 8, 2022, 5:34 PM IST

ಮಾನವ ಕಳ್ಳ ಸಾಗಾಣಿಕೆ ಕಾನೂನು ಬಾಹಿರ ಚಟುವಟಿಕೆ

ಕೊಪ್ಪಳ: ಜಿಲ್ಲಾಡಳಿತ, ಜಿಪಂ, ಕಾನೂನುಗಳ ಸೇವೆಗಳ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಮಹಿಳಾ ಇಲಾಖೆ, ಯುನಿಸೆಫ್‌, ಮಕ್ಕಳ ರಕ್ಷಣಾ ಘಟಕ ಸೇರಿ ವಿವಿಧ ಸಹಯೋಗದಲ್ಲಿ ನಗರದ ಕೃಷಿ ವಿಸ್ತರಣಾ ಕೇಂದ್ರದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಜರುಗಿತು.

ಹಿರಿಯ ಸಿವಿಲ್‌ ನ್ಯಾಯಾಧೀಶ ದೇವೇಂದ್ರ ಪಂಡಿತ್‌ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಯು ಒಂದು ವ್ಯವಸ್ಥಿತ ಅಪರಾಧವಾಗಿದ್ದು, ಜಾಗತಿಕ ಮಟ್ಟದಲ್ಲಿ ಮಾದಕ ದ್ರವ್ಯ, ಕಳ್ಳ ಸಾಗಾಣಿಕೆ ಮತ್ತು ಶಸ್ತ್ರಾಸ್ತ್ರ ಕಳ್ಳ ಸಾಗಾಣಿಕೆ ಬಳಿಕ ಮಾನವ ಕಳ್ಳ ಸಾಗಾಣಿಕೆಯು 3ನೇ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ.

ಭಾರತ ದೇಶವು ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸುತ್ತಿದ್ದರೂ ಹಲವಾರು ದುರ್ಬಲ ಮಹಿಳೆಯರು ಮತ್ತು ಮಕ್ಕಳು ಮಾನವ ಕಳ್ಳ ಸಾಗಾಣಿಕೆಯ ಜಾಲದಲ್ಲಿ ಸಿಲುಕಿ ಅಮಾನವೀಯ, ಕರುಣಾಜನಕ ಪರಸ್ಥಿತಿಯಲ್ಲಿ ಇಂದು ಶೋಷಣೆಗೆ ಒಳಗಾಗುತ್ತಿದ್ದಾರೆ.

ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಧ್ಯವಾಗದೇ ಇರುವ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಟ್ಟುಕೊಂಡಿರುವ ಮಾನವ ಕಳ್ಳ ಸಾಗಾಣಿಕೆಯು ಒಂದು ದೊಡ್ಡ ಪಿಡುಗಾಗಿದೆ. ಮಾನವ ಕಳ್ಳ ಸಾಗಾಣಿಕೆಯಂಥ ಹೀನ ಕೃತ್ಯದಿಂದ ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಈ ಅನೈತಿಕ ಮಾನವ ಸಾಗಾಣಿಕೆ ತಡೆಗೆ ಪ್ರತಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್‌ ಘಟಕ, ಅಲ್ಲದೇ ಸಂತ್ರಸ್ತರ ಪುನರ್ವಸತಿಗೆ ಸರಕಾರವು ಹಲವು ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೊಳಿಸಿದೆ. ಈ ಸೌಲಭ್ಯ ಅನುಷ್ಠಾನಗೊಳಿಸುವ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಅರ್ಹರಿಗೆ ಸೌಲಭ್ಯ ತಲುಪಿಸಿ ಎಂದರು.

ಜಿಪಂ ಸಿಇಒ ಬಿ. ಫೌಜಿಯಾ ತರುನ್ನುಮ್‌ ಮಾತನಾಡಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಸಮಿತಿಯ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿರುವ ಗ್ರಾಪಂ ಮಟ್ಟದ ಮಕ್ಕಳ ಸಾಗಾಣಿಕೆ ತಡೆ ಸಮಿತಿ ಸಕ್ರಿಯಗೊಳಿಸಿ, ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಿ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕುರಿತು ವಿವಿಧ ಇಲಾಖೆಗಳು ಸಹಭಾಗಿತ್ವದಲ್ಲಿ, ಸಮನ್ವಯತೆಯಲ್ಲಿ ಕಾರ್ಯನಿರ್ವಹಿಸುವ ಅವಶ್ಯಕತೆಯಿದೆ. ಸಮುದಾಯದಲ್ಲಿ ಮತ್ತು ನಿಮ್ಮ ವ್ಯಾಪ್ತಿಯಲ್ಲಿ ಮಹಿಳೆಯರ, ಮಕ್ಕಳ ಹಕ್ಕುಗಳು, ಕಾನೂನುಗಳ ಕುರಿತು ಜಾಗೃತಿ ಮೂಡಿಸಿ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಮಾತನಾಡಿ, ಸಾಗಾಣಿಕೆಗೆ ಒಳಗಾದ ಮಹಿಳೆಯರು ಪುನರ್ವಸತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ವಾಧಾರ ಯೋಜನೆ, ಮತ್ತಿತರೆ ಯೋಜನೆಗಳು ಜಾರಿಯಲ್ಲಿವೆ. ಸಾಗಾಣಿಕೆಗೊಳಗಾದ ಮಕ್ಕಳ ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಈ ಕೇಂದ್ರಗಳಲ್ಲಿ ಆಪ್ತ
ಸಮಾಲೋಚನೆ, ಅಗತ್ಯ ವೈದ್ಯಕೀಯ ನೆರವು ಹಾಗೂ ತಾತ್ಕಾಲಿಕ ಆಶ್ರಯ ಕಲ್ಪಿಸುವುದಲ್ಲದೆ, ಉದ್ಯೋಗ ಆಧಾರಿತ ತರಬೇತಿ ನೀಡಿ, ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಯುನಿಸೆಫ್‌ನ ರಾಘವೇಂದ್ರ ಭಟ್‌, ಹರೀಶ ಜೋಗಿ ತರಬೇತಿ ನೀಡಿದರು. ಜಿಲ್ಲೆಯ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಸ್ತರಣಾಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಲೂಕು ಆರೋಗ್ಯಾಧಿಕಾರಿಗಳು, ಕಾರ್ಮಿಕ ನಿರೀಕ್ಷಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.