ಮಾನವೀಯತೆ ಮರೆತ ಜೆಸ್ಕಾಂ ಅಧಿಕಾರಿ


Team Udayavani, May 5, 2019, 4:10 PM IST

kopp-4

ಕೊಪ್ಪಳ: ನಗರದ ಜೆಸ್ಕಾಂ ಕಚೇರಿ ಆವರಣದಲ್ಲಿ ಇತ್ತೀಚೆಗೆ ಲಾರಿಯಿಂದ ಟಿಸಿ (ವಿದ್ಯುತ್‌ ಪರಿವರ್ತಕ) ಕೆಳಗೆ ಇಳಿಸುವ ವೇಳೆ ಲೈನ್‌ಮನ್‌ ಮೇಲೆ ಬಿದ್ದು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈನ್‌ಮನ್‌ ಚಿಕಿತ್ಸೆಯ ಬಗ್ಗೆ ನಿರ್ಲಕ್ಷ ್ಯ ವಹಿಸಿದ ಜೆಸ್ಕಾಂ ನಡೆ ಖಂಡಿಸಿ ಸಂಬಂಧಿಕರು ಕಚೇರಿ ಮುಂದೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಧಿಕಾರಿಗಳನ್ನು ತರಾಟೆ ತಗೆದುಕೊಂಡರು.

ಜೆಸ್ಕಾಂ ಕಚೇರಿಯಲ್ಲಿ ಲೈನ್‌ಮನ್‌ಆಗಿ ಕಾರ್ಯ ನಿರ್ವಹಿಸುತ್ತಿದ್ದ ಚೋಳಪ್ಪ ಅವರು ಇತರೆ ಸಹದ್ಯೋಗಿಗಳೊಂದಿಗೆ ಇತ್ತೀಚೆಗೆ 700 ಕೆಜಿ ಸಾಮರ್ಥ್ಯದ ಟಿಸಿಯನ್ನು ಲಾರಿಯಿಂದ ಕೆಳಗೆ ಇಳಿಸುತ್ತಿದ್ದಾಗ ಆಯ ತಪ್ಪಿ ಟಿಸಿ ಅವರ ಮೇಲೆ ಬಿದ್ದಿತ್ತು. ಇದರಿಂದ ತೀವ್ರ ಗಾಯಗೊಂಡಿದ್ದ ಚೋಳಪ್ಪ ಅವರನ್ನು ಅವರ ಸಂಬಂಧಿಗಳೇ ಬೆಂಗಳೂರಿಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಸ್ಕಾಂನ ಯಾವೊಬ್ಬ ಅಧಿಕಾರಿ ಸೌಜನ್ಯಕ್ಕೂ ಲೈನ್‌ಮನ್‌ ಆರೋಗ್ಯ ವಿಚಾರಿಸಿರಲಿಲ್ಲ. ಆಸ್ಪತ್ರೆಗೂ ಭೇಟಿ ನೀಡಿರಲಿಲ್ಲ. ಚಿಕಿತ್ಸೆಯ ಕುರಿತು ಯಾವುದೇ ಸಲಹೆ ನೀಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ಲೈನ್‌ಮನ್‌ ಸಂಬಂಧಿಗಳು ಶುಕ್ರವಾರ ಜೆಸ್ಕಾಂ ಕಚೇರಿಗೆ ಆಗಮಿಸಿ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

700 ಕೆಜಿ ಸಾಮರ್ಥ್ಯದ ಟಿಸಿಯನ್ನು ಲೈನ್‌ಮನ್‌ಗಳಿಂದ ಕೆಳಗೆ ಇಳಿಸಲು ಸಾಧ್ಯವಿದೆಯೇ? ಕ್ರೇನ್‌ ಮೂಲಕ ಇಂತಹ ಸಾಮಗ್ರಿಗಳನ್ನು ಕೆಳಗೆ ಇಳಿಸಬೇಕು. ಮನುಷ್ಯರು ಇಂತಹ ಕೆಲಸ ಮಾಡಲು ಸಾಧ್ಯವೇ? ಜೆಸ್ಕಾಂಗೆ ಇಷ್ಟು ಮುಂಜಾಗೃತಿ ಇಲ್ಲವೇ ? ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಗೊತ್ತಿರಲಿಲ್ಲವೇ? ಜೀವ ಹಾನಿಯಾದರೆ ಯಾರು ಹೊಣೆ? ಜೆಸ್ಕಾಂನಲ್ಲಿ ಈ ರೀತಿ ನಿಯಮ ಇದೆಯೇ ? ಎಂದು ಗಾಯಗೊಂಡ ಲೈನ್‌ಮನ್‌ ಸಂಬಂಧಿಕರು ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು.

ಅಲ್ಲದೇ, ನಗರದ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯೆ ಡಾ| ಮಂಗಳಾ ಅವರ ಸಹೋದರನೇ ಲೈನ್‌ಮನ್‌ ಆಗಿದ್ದರಿಂದ ಅವರೇ ಸ್ವತಃ ಜೆಸ್ಕಾಂ ಕಚೇರಿಗೆ ಆಗಮಿಸಿ ಅಧಿಕಾರಿಗಳ ಕಾರ್ಯ ವೈಖರಿಯನ್ನು ಪ್ರಶ್ನೆ ಮಾಡಿ ತೀವ್ರ ತರಾಟೆ ತಗೆದುಕೊಂಡರು. ಎಸಿ ರೂಂನಲ್ಲಿ ಕುಳಿತರೆ ಲೈನ್‌ಮನ್‌ ಸಮಸ್ಯೆ ಅರ್ಥವಾಗಲ್ಲ. ನನ್ನ ಸಹೋದರ ಗಾಯಗೊಂಡು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾನೆ. ನಿಮ್ಮ ಇಲಾಖೆಯ ಒಬ್ಬ ಅಧಿಕಾರಿಯೂ ಆರೋಗ್ಯ ವಿಚಾರಿಸಿಲ್ಲ. ಆತನ ಸ್ಥಿತಿ ಏನಾಗಿದೆ ಎನ್ನುವುದನ್ನು ಕೇಳಿಲ್ಲ? ನಿಮಗೆ ಮಾನವೀಯತೆ ಇದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೆಸ್ಕಾಂ ಕಚೇರಿಯ ನಿರ್ಲಕ್ಷ ್ಯದ ವಿರುದ್ಧ ಬೇಸತ್ತ ಅವರ ಸಂಬಂಧಿಕರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿ ತಿಳಿಯುವವರೆಗೂ ಇಲ್ಲಿಂದ ತೆರಳಲ್ಲ ಎಂದು ಪಟ್ಟು ಹಿಡಿದರು. ಅಲ್ಲದೇ ಜೆಸ್ಕಾಂ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

••ಲಾರಿಯಿಂದ 700 ಕೆಜಿ ಸಾಮರ್ಥ್ಯದ ಟಿಸಿ ಕೆಳಗಿಳಿಸುವಾಗ ನಡೆದ ಅವಘಡ

••ಬೆಂಗಳೂರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಲೈನ್‌ಮನ್‌

••ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಲೈನ್‌ಮನ್‌ ಸಹೋದರಿ

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.