ಮಾನವೀಯತೆ ಮರೆತ ಕನಕಗಿರಿ ಶಾಸಕ
Team Udayavani, Apr 21, 2019, 4:16 PM IST
ಕೊಪ್ಪಳ: ಗಂಗಾವತಿ ತಾಲೂಕಿನ ಗುಂಡೂರು ಕ್ರಾಸ್ ಬಳಿ ಮಹಿಳೆ ಅಪಘಾತದಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದರೂ ಸ್ಥಳದಲ್ಲಿಯೇ ಇದ್ದ ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು ಮಾನವೀಯತೆ ಮರೆತು ಅಲ್ಲಿಂದ ಪ್ರಚಾರಕ್ಕೆ ತೆರಳಿದ ಪ್ರಸಂಗ ನಡೆದಿದೆ. ಶಾಸಕರ ಈ ವರ್ತನೆಗೆ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ.
ಸಿಂಧನೂರು ತಾಲೂಕಿನ ಮುಳಗೇರಿ ನಿವಾಸಿ ಎಂ. ಸೀತಮ್ಮ ಹಾಗೂ ರವೀಂದ್ರ ಎನ್ನುವವರು ಜಾಲಿಹಾಳದಿಂದ ಬೈಕ್ನಲ್ಲಿ ಶ್ರೀರಾಮನಗರಕ್ಕೆ ಪ್ರಯಾಣಿಸುತ್ತಿದ್ದರು. ಗುಂಡೂರು ಕ್ರಾಸ್ ಬಳಿ ಬೈಕ್ ಟೈಯರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮಹಿಳೆ ಸೀತಮ್ಮ ರಸ್ತೆ ಮೇಲೆ ಬಿದ್ದು ತೆಲೆಗೆ ತೀವ್ರತರ ಪೆಟ್ಟಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಳು. ಆ ವೇಳೆ ಅದೇ ಮಾರ್ಗದಲ್ಲಿ ಹೊರಟಿದ್ದ ಕನಕಗಿರಿ ಬಿಜೆಪಿ ಶಾಸಕ ಮಹಿಳೆಯನ್ನು ರಸ್ತೆ ಪಕ್ಕದ ನೆರಳಿಗೆ ಮಲಗಿಸಿ ಅಲ್ಲಿಂದ ಪ್ರಚಾರಕ್ಕೆ ತೆರಳಿದ್ದಾರೆ. ಕೂಡಲೇ ಆಂಬ್ಯುಲೆನ್ಸ್ ಸೇರಿ ವಾಹನದಲ್ಲಿ ಆ ಮಹಿಳೆಯನ್ನು ಆಸ್ಪತ್ರೆಗೆ ತಕ್ಷಣ ಸಾಗಿಸಿ ಚಿಕಿತ್ಸೆ ಕೊಡಿಸಬಹುದಿತ್ತು. ಅದೆಲ್ಲವನ್ನೂ ಮರೆತು ಒಬ್ಬ ಜನಪ್ರತಿನಿಧಿಯಾಗಿ
ಮಹಿಳೆಯನ್ನು ಗಿಡದ ಕೆಳಗೆ ಬಿಟ್ಟು ಪ್ರಚಾರಕ್ಕೆ ತೆರಳಿದ್ದಕ್ಕೆ ಸ್ಥಳೀಯರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಕೊನೆಗೂ ಸ್ಥಳೀಯರೇ ಆ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದರೂ ಬದುಕುಳಿಯಲಿಲ್ಲ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು