ಮೋದಿಗೆ ಅಧಿಕಾರ ಬೇಕಂದ್ರೆ ಸಾಯಲಿ ಬಿಡಿ: ಸಚಿವ ರಾಯರೆಡ್ಡಿ ವಿವಾದ!
Team Udayavani, Apr 21, 2017, 6:27 PM IST
ಕೊಪ್ಪಳ:ಪ್ರಧಾನಿ ನರೇಂದ್ರ ಮೋದಿ ಅವರು ಕಾರಿನ ಕೆಂಪು ದೀಪ ತೆಗೆದರಷ್ಟೇ ಸಾಕಾಗಲ್ಲ, ಅವರು ಭದ್ರತೆಯನ್ನೂ ತ್ಯಜಿಸಲಿ. ನನಗೂ ಭದ್ರತೆ ಬೇಡ ಎಂದು ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಪ್ರಧಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪ್ರಧಾನಿಯವರು ಭದ್ರತೆಯನ್ನೂ ತ್ಯಜಿಸಲಿ ಎಂದು ಸಚಿವರು ಹೇಳಿದಾಗ, ಅವರಿಗೆ ಬೆದರಿಕೆ ಇದೆಯಲ್ಲ ಎಂದು ಸುದ್ದಿಗಾರರೊಬ್ಬರು ಪ್ರಶ್ನಿಸಿದಾಗ, ಅಧಿಕಾರ ಬೇಕೆಂದರೆ ಸಾಯಲಿ ಬಿಡಿ ಎಂದು ತಿಳಿಸಿದ್ದಾರೆ ಎಂದು ಮಾಧ್ಯಮದ ವರದಿ ವಿವರಿಸಿದೆ.
ಕೊಪ್ಪಳಕ್ಕೆ ಶುಕ್ರವಾರ ಭೇಟಿ ನೀಡಿದ್ದ ಉನ್ನತ ಶಿಕ್ಷಣ ಸಚಿವರಿಗೆ ಸುದ್ದಿಗಾರರು ಕೆಂಪು ಗೂಟದ ಕಾರಿಗೆ ಅಂತ್ಯ ಹಾಡಿರುವ ಕೇಂದ್ರದ ನೀತಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆ ಅವರಿಗೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಅವರು, ‘ಯಾರು ಅಧಿಕಾರದಲ್ಲಿ ಇರಬೇಕು ಎಂದು ಬಯಸುತ್ತಾರೋ, ಅವರು ಸಾಯಲು ಸಿದ್ದವಾಗಿರಬೇಕು,’ ಎಂದು ಹೇಳಿದ್ದರು.
ನಾನು ಇದನ್ನು ಹೇಳಿದ್ದು ಮೋದಿಗಲ್ಲ, ಪರಿಸ್ಥಿತಿ ಆ ರೀತಿ ಇದೆ ಎಂದು ಹೇಳಿರುವುದಾಗಿ ಹೇಳಿ ರಾಯರೆಡ್ಡಿ ಅವರು ಸಮಜಾಯಿಷಿ ಎಂಬಂತೆ ಅಲ್ಲಿಂದ ಹೊರಟು ಹೋಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ