ನೂತನ ಗಣಿ ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರಿಗೆ ಅಕ್ರಮ ಗಣಿ ಸವಾಲು

ತಾಲೂಕಿನಲ್ಲಿ ಇನ್ನೂ ನಡೆಯುತ್ತಿದೆ ಅಕ್ರಮ ಕಲ್ಲು-ಮರಳು ದಂಧೆ­ಸರಳವಾಗಿ ಮರಳು ಸಿಗುವಂತಾಗಲಿ

Team Udayavani, Aug 9, 2021, 9:06 PM IST

ghdtuy

ವರದಿ: ಕೆ. ನಿಂಗಜ್ಜ

ಗಂಗಾವತಿ: ಇತ್ತೀಚಿನ ವರ್ಷಗಳಲ್ಲಿ ಅಕ್ರಮ ಕಲ್ಲು-ಮರಳು ಗಣಿಗಾರಿಕೆ ದಂಧೆ ಜಿಲ್ಲೆಯಲ್ಲಿ ವ್ಯಾಪಕವಾಗಿದ್ದು, ಇದರಿಂದ ಪರಿಸರಕ್ಕೆ ಹಾನಿಯಾಗುವ ಜತೆಗೆ ಸರಕಾರಕ್ಕೆ ರಾಜಧನವೂ ನಷ್ಟವಾಗುತ್ತಿದೆ.

ರಾಜ್ಯ ಸರಕಾರದ ಆದೇಶದಂತೆ ಪ್ರತಿ ತಾಲೂಕಿನಲ್ಲಿ ಅಕ್ರಮ ಕಲ್ಲು-ಮರಳು ಗಣಿಗಾರಿಕೆ ದಂಧೆ ತಡೆಯಲು ಟಾಸ್ಕ್ಫೋರ್ಸ್‌ಗಳನ್ನು ವಿವಿಧ ಇಲಾಖೆಗಳ ಅಧಿ ಕಾರಿಗಳ ನೇತೃತ್ವದಲ್ಲಿ ಮಾಡಲಾಗಿದ್ದರೂ ಪ್ರಮುಖವಾಗಿ ಕಂದಾಯ ಮತ್ತು ಪೊಲೀಸ್‌ ಇಲಾಖೆ ಮೇಲೆ ಸಂಘ ಸಂಸ್ಥೆಗಳು ಮತ್ತು ಉನ್ನತ ಅಧಿ ಕಾರಿಗಳು ಒತ್ತಡ ಹಾಕುತ್ತಿದ್ದಾರೆ. ಇದರಿಂದ ಕಂದಾಯ ಇಲಾಖೆ ಅಧಿಕಾರಿಗಳು ವರ್ಗಾವಾಗಿದ್ದು ಕೆಲವರು ಸಸ್ಪೆಂಡ್‌ ಆಗಿದ್ದಾರೆ. ಇನ್ನುಳಿದ ಇಲಾಖೆಯವರು ಅಕ್ರಮ ತಡೆಯುವಲ್ಲಿ ವಿಫಲರಾಗಿದ್ದಾರೆಂಬ ಮಾತು ವ್ಯಾಪಕವಾಗಿದೆ.

ತಾಲೂಕಿನ ವೆಂಕಟಗಿರಿ ಹೋಬಳಿ ಹಾಗೂ ಮಲ್ಲಾಪುರ, ಸಂಗಾಪುರ, ಉಡುಮಕಲ್‌ ಭಾಗದಲ್ಲಿ ಕೆಲವರು ಜಿಲ್ಲಾಡಳಿತದಿಂದ ಪರವಾನಗಿ ಪಡೆದು ಕಲ್ಲು ಕ್ವಾರಿ ಗಣಿಗಾರಿಕೆ ನಡೆಸುತ್ತಿದ್ದರೆ ಸುಮಾರು 15-20 ಕಡೆ ಅಕ್ರಮವಾಗಿ ಗಣಿಗಾರಿಕೆ ಮತ್ತು ಕಲ್ಲಿನ ಕ್ರಷರ್‌ ರಾಜಾರೋಷವಾಗಿ ನಡೆಯುತ್ತಿವೆ. ಕ್ರಮ ವಹಿಸಬೇಕಾದ ಗಣಿ ಭೂವಿಜ್ಞಾನ ಮತ್ತು ಅರಣ್ಯ ಇಲಾಖೆಯವರು ಅಕ್ರಮ ತಡೆಯುವಲ್ಲಿ ಸಂಪುರ್ಣ ವಿಫಲರಾಗಿದ್ದಾರೆ. ಕೆಲ ಅ ಧಿಕಾರಿಗಳು ತಡೆಯಲು ಹೋದರೆ ಸ್ಥಳೀಯ ಬಿಜೆಪಿ ಕಾಂಗ್ರೆಸ್‌ ನಾಯಕರು ಅ ಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಬರುತ್ತಿದ್ದಾರೆ. ಕೆಲವು ಕಲ್ಲು ಕ್ವಾರಿಗಳ ಪರವಾನಗಿ ನವೀಕರಣವಾಗಿಲ್ಲ.

ಇನ್ನೂ ನಿಗದಿ ಮಾಡಿದ ಸ್ಥಳವಲ್ಲದೇ ಅನ್ಯ ಸ್ಥಳದಲ್ಲಿ ಕಲ್ಲು ಕ್ವಾರಿ ಮತ್ತು ಕ್ರಷರ್‌ ನಡೆಸುತ್ತಿದ್ದಾರೆ. ಇದರಿಂದಾಗಿ ಬೃಹತ್‌ ಕಲ್ಲಿನ ಗುಡ್ಡ ನೆಲಸಮವಾಗಿವೆ. ಆಗೋಲಿ, ವೆಂಕಟಗಿರಿ, ಉಡುಮಕಲ್‌, ಬಂಡ್ರಾಳ, ಗಡ್ಡಿ, ಬೆಣಕಲ್‌, ವಿಠಲಾಪುರ, ಮಲ್ಲಾಪುರ ರಾಂಪುರ, ಸಂಗಾಪುರ, ಬಂಡಿಬಸಪ್ಪ ಕ್ಯಾಂಪ್‌ ಮತ್ತು ಗೂಗಿಬಂಡಿ(ರಾಮದುರ್ಗಾ) ಹೀಗೆ ಹಲವು ಗ್ರಾಮಗಳಲ್ಲಿ ನಿರಂತರವಾಗಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ.

ನಂದಿಹಳ್ಳಿ, ಕಕ್ಕರಗೋಳು, ಹೆಬ್ಟಾಳ, ಮುಸ್ಟೂರು ಸೇರಿ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ದಂಧೆ ತಡೆಯಲು ಜಿಲ್ಲಾಡಳಿತ ಹಟ್ಟಿ ಚಿನ್ನದ ಗಣಿಯವರಿಗೆ ಮರಳು ತೆಗೆದು ಯಾರ್ಡ್‌ ಮೂಲಕ ಮಾರಾಟ ಮಾಡಲು ಅನುಮತಿ ನೀಡಿದ್ದರೂ ಹಟ್ಟಿ ಚಿನ್ನದ ಗಣಿಯವರು ಇದುವರೆಗೂ ಈ ಕಾರ್ಯ ಮಾಡುತ್ತಿಲ್ಲ. ಇದರಿಂದ ರಾತ್ರೋರಾತ್ರಿ ಇಲ್ಲಿಯ ಮರಳು ದಂಧೆಕೋರರು ಲಾರಿ, ಟ್ರಾÂಕ್ಟರ್‌ ಮೂಲಕ ಮರಳು ಸಾಗಿಸುತ್ತಿದ್ದಾರೆ.

ವಾರ, ತಿಂಗಳಿಗೊಮ್ಮೆ ಪೊಲೀಸ್‌ ಹಾಗೂ ಗಣಿ, ಭೂವಿಜ್ಞಾನ ಮತ್ತು ಕಂದಾಯ ಇಲಾಖೆಯವರು ದಾಳಿ ಮಾಡಿ ಅರಳು ವಶಕ್ಕೆ ಪಡೆದು ಸ್ಥಳದಲ್ಲೇ ದಂಡ ಹಾಕಿ ಬಿಡುತ್ತಿದ್ದಾರೆ. ಇನ್ಮೂ ಗಂಗಾವತಿ ದೇವಘಾಟ, ಚಿಕ್ಕಜಂತಗಲ್‌ ತುರುಮಂದಿ ಬಯಲು ಮತ್ತು ಗೂಗಿಬಂಡಿ ಕ್ಯಾಂಪ್‌ ಹತ್ತಿರ ಅಕ್ರಮ ಮರಳು ದಂಧೆ ನಡೆಯುತ್ತಿದೆ. ರಸ್ತೆ ಸೇರಿ ವಿವಿಧ ಕಾಮಗಾರಿ ಮತ್ತು ಮನೆಗಳನ್ನು ನಿರ್ಮಾಣ ಮಾಡಲು ಕಲ್ಲು-ಮರಳು ಅಗತ್ಯವಾಗಿದ್ದು, ಇದನ್ನು ಸರಕಾರ ಜನತೆಗೆ ಕಾನೂನು ಬದ್ಧವಾಗಿ ಸಿಗುವಂತೆ ಮಾಡಬೇಕು. ನಿಯಮಗಳನ್ನು ಪಾಲಿಸಿ ಪರಿಸರ ಸಂರಕ್ಷಣೆ ಜೊತೆಗೆ ಅಗತ್ಯ ಮರಳು ಮತ್ತು ಕಲ್ಲು ಗಣಿಗಾರಿಕೆ ಒದಗಿಸಬೇಕಿದ್ದು, ನೂತನ ಗಣಿ ಭೂವಿಜ್ಞಾನ ಸಚಿವರಾಗಿರುವ ಹಾಲಪ್ಪ ಆಚಾರ್‌ ಯಾವ ಕ್ರಮ ಕೈಗೊಳ್ಳಲಿದ್ದಾರೆ ಕಾಯ್ದು ನೋಡಬೇಕಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.