ಅಕ್ರಮ ಗಣಿಗಾರಿಕೆ: ಮಾಲೀಕರಿಗೆ 32 ಕೋಟಿ ದಂಡ


Team Udayavani, Jun 29, 2019, 10:14 AM IST

Udayavani Kannada Newspaper

ಕೊಪ್ಪಳ: ಪಟ್ಟಾ ಕಲ್ಲು ಗಣಿಗಾರಿಕೆ, ಗಾಯರಾಣ ಹಾಗೂ ಪರಂಪೋಕ್‌ನಲ್ಲ್ಲಿ ಅನಧಿಧೀಕೃತ ಗಣಿಗಾರಿಕೆ ನಡೆಸಿದ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್‌ ಸಮಿತಿಯಲ್ಲಿ ವಿವಿಧ ಗಣಿ ಮಾಲೀಕರಿಗೆ 32 ಕೋಟಿ ದಂಡ ವಿಧಿಸುವ ಮೂಲಕ ಜಿಲ್ಲಾಧಿಕಾರಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.

ಈ ಹಿಂದೆ ಜಿಲ್ಲೆಯಲ್ಲಿ ವಿವಿಧ ಭೂ ಮಾಲೀಕರು ತಮ್ಮ ಪಟ್ಟಾ ಜಮೀನಿನಲ್ಲಿ ಅಲಂಕಾರಿಕ ಶಿಲೆ ಪಡೆಯಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಗಣಿಗಾರಿಕೆಗೆ ಪರವಾನಗಿ ಪಡೆದು ಗಣಿಗಾರಿಕೆ ನಡೆಸಿದ್ದರು. ಆದರೆ ಲೈಸೆನ್ಸ್‌ ಮರು ನವೀಕರಣಕ್ಕೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದ ವೇಳೆ ಇಲಾಖೆ ಅವರ ಗಣಿಗಾರಿಕೆ ನಡೆಸಿದ ವ್ಯಾಪ್ತಿಯ ವಿಸ್ತಾರ ಅಳತೆ ಮಾಡಿದ್ದು, ನಿಯಮ ಮೀರಿ ಮಿತಿಯಾಚೆ ಅಕ್ರಮ ಗಣಿಗಾರಿಕೆ ನಡೆಸಿದ್ದರಿಂದ ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿಯಲ್ಲಿ ಕಾಯ್ದೆ ಅನುಸಾರ ದಂಡ ವಿಧಿಸಲಾಗಿದೆ.

ಪರವಾನಗಿ ಮರು ನವೀಕರಣಕ್ಕೆ 10 ಜನ ಭೂ ಮಾಲೀಕರು ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಸ್ಥಳ ತಪಾಸಣಾ ಮಾಡಿ ಜಿಲ್ಲಾಧಿಕಾರಿಗೆ ವರದಿ ಕೊಟ್ಟಿದ್ದು, 10 ಜನರಿಗೆ 4,45,37,176 ದಂಡ ವಿಧಿಸಲಾಗಿದೆ. ಇನ್ನೂ ಸರ್ಕಾರದ ಗಾಯರಾಣ ಜಮೀನಿನಲ್ಲಿ 6 ಜನರು ಅನುಮತಿ ಪಡೆದು ಕಲ್ಲು ಗಣಿಗಾರಿಕೆ ನಡೆಸಿದ್ದರು. ಈ ಪೈಕಿ ಅವರು ಇಲಾಖೆ ನಿಗದಿಪಡಿಸಿದ ವಾರ್ಷಿಕ ಮಿತಿ ಮೀರಿ ಅನಧೀಕೃತ ಗಣಿಗಾರಿಕೆ ನಡೆಸಿದ್ದರಿಂದ ಅವರಿಗೆ ನಿಯಮಾನುಸಾರ 22,32,41,700 ಕೋಟಿ ರೂ. ದಂಡ ವಿಧಿಸಲಾಗಿದೆ. ಜೊತೆಗೆ ಪರಂಪೋಕ್‌ನಲ್ಲಿ ಇಬ್ಬರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಪಡೆದು ಕಲ್ಲುಗಣಿಗಾರಿಕೆ ನಡೆಸಿದ್ದರು. ಅವರೂ ಸಹಿತ ಇಲಾಖೆ ನಿಗದಿಪಡಿಸಿದ ಮಿತಿಯನ್ನೂ ಮೀರಿ ಹೆಚ್ಚುವರಿ ಅನಧಿಧೀಕೃತ ಗಣಿಗಾರಿಕೆ ನಡೆಸಿದ್ದರಿಂದ ಅವರಿಗೂ 5,77,49,700 ದಂಡ ವಿಧಿಸಲಾಗಿದೆ.

ಗಣಿಗಾರಿಕೆ ನಡೆಸಿ ಮುಚ್ಚಿದ್ದಾರೆ: ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಐವರು, ಗಂಗಾವತಿಯಲ್ಲಿ ಓರ್ವ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಇಬ್ಬರು ಕಲ್ಲು ಗಣಿಗಾರಿಕೆ ನಡೆಸಿದ್ದಲ್ಲದೇ, ತಾವು ಮಾಡಿದ ಗಣಿಗಾರಿಕೆಯನ್ನು ಇಲಾಖೆಗೆ ತಿಳಿಯದಂತೆ ಮಾಡಿ ಆ ಗಣಿಗಾರಿಕೆ ಸ್ಥಳದಲ್ಲಿ ತ್ಯಾಜ್ಯ ಹಾಗೂ ಅನುಪಯುಕ್ತ ವಸ್ತು ಸೇರಿದಂತೆ ಮಣ್ಣು ಹಾಕಿ ಮುಚ್ಚಿದ್ದಾರೆ. ಗಣಿಗಾರಿಕೆ ನಡೆಸಿ ಮಣ್ಣಿನಿಂದ ಮುಚ್ಚಿದ ಸ್ಥಳವನ್ನು 15 ದಿನಗಳೊಳಗೆ ತೆರವುಗೊಳಿಸಬೇಕು. ಗಣಿಗಾರಿಕೆ ನಡೆದ ಪ್ರಮಾಣಕ್ಕೆ ದಂಡ ಪಾವತಿಸಬೇಕೆನ್ನುವ ಎಚ್ಚರಿಕೆಯನ್ನೂ ನೀಡಲಾಗಿದೆ.

ದಂಡದ ರಾಜಸ್ವ ಪಾವತಿಸಿ: ಅನಧೀಕೃತ ಗಣಿಗಾರಿಕೆ ನಡೆಸಿದ ಪ್ರಮಾಣಕ್ಕೆ ತಕ್ಕಂತೆ ದಂಡ ಪಾವತಿಸಬೇಕು. ಇಲ್ಲದಿದ್ದರೆ ಮುಂದೆ ಪರವಾನಗಿ ನೀಡದೇ ಇರುವ ಕುರಿತು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಬಾರಿ ಹೊಸದಾಗಿ 5 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ನಾಲ್ಕು ಅರ್ಜಿಗಳಿಗೆ ಅನುಮತಿ ನೀಡಿ ಶಿಫಾರಸು ಮಾಡಲಾಗಿದೆ. ಇನ್ನುಳಿದಂತೆ ಒಂದು ಅರ್ಜಿಯನ್ನು ಮರು ಪರಿಶೀಲನೆ ಮಾಡುವ ಕುರಿತು ಟಾಸ್ಕ್ ಫೋರ್ಸ್‌ ಸಮಿತಿಯಲ್ಲಿ ಚರ್ಚೆಯಾಗಿದೆ.

ಒಟ್ಟಿನಲ್ಲಿ ಜಿಲ್ಲಾದ್ಯಂತ ಅಕ್ರಮ ಗಣಿಗಾರಿಕೆ ನಡೆದ ಬಗ್ಗೆ ಇಲಾಖೆ ಅಧಿಕಾರಿಗಳೇ ಸ್ಥಳ ತಪಾಸಣೆ ಮಾಡಿ ಟಾಸ್ಕ್ ಫೋರ್ಸ್‌ ಸಮಿತಿಗೆ ವರದಿ ನೀಡಿದ್ದು, ವರದಿ ಅನುಸಾರ ಅನಧೀಕೃತ ಕಲ್ಲುಗಣಿಗಾರಿಕೆ ನಡೆಸಿದ್ದಕ್ಕೆ ದಂಡ ಪಾವತಿ ಮಾಡಿದ ಬಳಿಕ ಪರವಾನಗಿ ನವೀಕರಣ ಸಮಿತಿಯಲ್ಲಿ ನಿರ್ಣಯಕ್ಕೆ ಬಂದಿದ್ದು ಈ ವಿಷಯದಲ್ಲಿ ಜಿಲ್ಲಾಧಿಕಾರಿ ದಿಟ್ಟ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ಶ್ಲಾಘನೀಯ.

 

•ದತ್ತು ಕಮ್ಮಾರ

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.