Illegal: ಕಂಕರ್ ಅಕ್ರಮ ಸಾಗಾಟ; ಅಧಿಕಾರಿಗಳ ದಾಳಿ; ಎರಡು ಲಾರಿ ವಶಕ್ಕೆ, ಕೇಸ್ ದಾಖಲು
Team Udayavani, Sep 9, 2023, 2:52 PM IST
ಗಂಗಾವತಿ: ಗಣಿ, ಭೂ ವಿಜ್ಞಾನ ಇಲಾಖೆಯ ಪರವಾನಿಗೆ ಇಲ್ಲದೆ ಅಕ್ರಮವಾಗಿ ಲಾರಿಗಳ ಮೂಲಕ ಕಂಕರ್ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಎರಡು ಲಾರಿಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿ, ಕೇಸ್ ದಾಖಲಿಸಿದ ಘಟನೆ ತಾಲೂಕಿನ ವೆಂಕಟಗಿರಿ ಭಾಗದಲ್ಲಿ ನಡೆದಿದೆ.
ವೆಂಕಟಗಿರಿಯ ಸಾಯಿಬಾಬಾ ಕ್ರಷರ್ ಮಿಷನ್ ನಿಂದ ಪರವಾನಗಿ ಇಲ್ಲದೆ ಎರಡು ಲಾರಿಗಳಲ್ಲಿ ಕಂಕರ್ ತುಂಬಿಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಮಾಹಿತಿಯ ಮೇರೆಗೆ ಗಣಿ ಭೂವಿಜ್ಞಾನ ಇಲಾಖೆಯ ಅಧಿಕಾರಿ ಸನಿಯತ್ ಹಾಗೂ ಇತರೆ ಸಿಬ್ಬಂದಿ ವರ್ಗದವರು ದಾಳಿ ನಡೆಸಿ ತಲಾ 25 ಸಾವಿರ ರೂ. ಗಳನ್ನು ದಂಡ ವಿಧಿಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
ಮಲ್ಲಾಪೂರ ಭಾಗದಲ್ಲಿ ಅಕ್ರಮವಾಗಿ ದ್ರಾಕ್ಷಿ ಬೆಳೆಯ ಕಲ್ಲು ಕಂಬಗಳನ್ನು ನಿಷೇಧಿತ ಬೆಟ್ಟಗಳಲ್ಲಿ ಒಡೆದು ಎಡದಂಡೆಯ ಕಾಲುವೆ ಮೇಲೆ ಬೃಹತ್ ಗಾತ್ರದ ಲಾರಿಗಳು ಮತ್ತು ಟ್ರಕ್ಸ್ ಗಳಲ್ಲಿ ಸಾಗಾಣಿಕೆ ಮಾಡುವ ಮೂಲಕ ಕಾಲುವೆ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ.
ವೆಂಕಟಗಿರಿ, ಮಲ್ಲಾಪೂರ ಭಾಗದಲ್ಲಿ ವ್ಯಾಪಕ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಗಣಿ ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಬೆರಳೆಣಿಕೆಯಷ್ಟು ದಾಳಿ ಮತ್ತು ಕೇಸ್ ದಾಖಲಿಸುತ್ತಾರೆಂಬ ಅರೋಪ ಕೇಳಿ ಬರುತ್ತಿದೆ.
ಅಕ್ರಮ ಕಲ್ಲು ಗಣಿಗಾರಿಕೆ, ಅಕ್ರಮ ಮರಳು ಸಾಗಾಣಿಕೆ ತಾಲೂಕಿನಲ್ಲಿ ನಡೆಯುತ್ತಿದ್ದು ಇದನ್ನು ತಡೆಯುವ ಕಾರ್ಯ ಟಾಸ್ಕ್ ಫೋರ್ಸ್ ಕಮಿಟಿ ಮಾಡುತ್ತಿಲ್ಲ. ಟಾಸ್ಕ್ ಫೋರ್ಸ್ ಕಮಿಟಿಯಲ್ಲಿ ಕಂದಾಯ, ಪೊಲೀಸ್, ಲೋಕೋಪಯೋಗಿ ಇಲಾಖೆ, ತಾ.ಪಂ, ಪಿಡಿಓಗಳು, ಅರಣ್ಯ ಇಲಾಖೆಯ ಅಧಿಕಾರಿಗಳಿದ್ದರೂ ಕಾರ್ಯಾಚರಣೆ ನಡೆಯುತ್ತಿಲ್ಲ ಎಂಬ ಅರೋಪ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!