Gangavathi, ಕಡೆ ಬಾಗಿಲು, ಹೊಸಪೇಟೆ: ಅನಧಿಕೃತ ಮೈನ್ಸ್, ಅಕ್ರಮ ಮರಳು ಸಾಗಟ; ಹದಗೆಟ್ಟ ರಸ್ತೆ
ಲಾರಿ ಓಡಾಟಕ್ಕೆ ನಿಷೇಧವಿದ್ದರೂ ಕ್ಯಾರೆ ಎನ್ನದ ಲಾರಿ ಚಾಲಕರು; ಪೊಲೀಸ್ ಇಲಾಖೆ ಮೌನ
Team Udayavani, Aug 4, 2023, 10:33 AM IST
ಗಂಗಾವತಿ: ಗಂಗಾವತಿ, ಕಡೆಬಾಗಿಲು ಮತ್ತು ಹೊಸಪೇಟೆಯ 130 ರಾಜ್ಯ ಹೆದ್ದಾರಿಯಲ್ಲಿ ಭಾರಿ ಗಾತ್ರದ ಲಾರಿಗಳ ಸಂಚಾರಕ್ಕೆ ನಿಷೇಧವಿದ್ದರೂ ಕಳೆದ ಆರು ತಿಂಗಳಿಂದ ಮೈನ್ಸ್ ಮತ್ತು ಅಕ್ರಮ ಮರಳು ತುಂಬಿದ ಲಾರಿಗಳ ಸಂಚಾರದಿಂದ ರಸ್ತೆ ಸಂಪೂರ್ಣ ಹದಗೆಟ್ಟು ತೆಗ್ಗು ಗುಂಡಿ ಬಿದ್ದಿದ್ದು, ಸ್ಥಳೀಯ ವಾಹನ ಚಾಲಕರು ಜಿಲ್ಲಾಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ಈ ರಸ್ತೆಯಲ್ಲಿ ಭಾರಿ ಗಾತ್ರದ ಲಾರಿ ಮತ್ತು ಟ್ರಕ್ ಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದ್ದರೂ ಚಾಲಕರು ಕಳೆದ ಆರು ತಿಂಗಳಿಂದ ಹಗಲು ರಾತ್ರಿ ಇದೇ ರಸ್ತೆಯಲ್ಲಿ ಬೃಹತ್ ಗಾತ್ರದ ಲಾರಿಗಳನ್ನು ಓಡಿಸುತ್ತಿದ್ದರೂ ತಾಲೂಕು ಆಡಳಿತ ಹಾಗೂ ಗ್ರಾಮೀಣ ಪೊಲೀಸರ ಮೌನ ಹಲವು ಅನುಮಾನ ಹುಟ್ಟಿಸಿದೆ.
70-80 ಟನ್ ಭಾರ ತುಂಬಿದ ಮೈನ್ಸ್ ಮತ್ತು ಅಕ್ರಮ ಮರಳು ಲಾರಿ ಮತ್ತು ಟ್ರಕ್ ಗಳ ಓಡಾಟದಿಂದ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಗಳು ಬಿದ್ದಿವೆ.
ಕಿಷ್ಕಿಂಧಾ ಅಂಜನಾದ್ರಿಗೆ ದೇಶ-ವಿದೇಶದ ಪ್ರವಾಸಿಗರು, ಆನೆಗುಂದಿ ಮತ್ತು ಮುನಿರಾಬಾದ್ ಹುಲಿಗಿಯ ಶ್ರೀಹುಲಿಗೆಮ್ಮ ದೇವಿಯ ಕ್ಷೇತ್ರಕ್ಕೆ ಹುಣ್ಣುಮೆ, ಅಮವಾಸ್ಯೆ, ಮಂಗಳವಾರ, ಶುಕ್ರವಾರ ಸಾವಿರಾರು ಭಕ್ತರು, ಪ್ರವಾಸಿಗರು ಇದೇ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದು, ಪ್ರವಾಸಿಗರು ಮತ್ತು ವಾಹನಗಳ ಚಾಲಕರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಶಾಪ ಹಾಕುತ್ತಿದ್ದಾರೆ.
ಹೆಚ್ಚಿದ ಅಪಘಾತಗಳು: ಗಂಗಾವತಿ, ಕಡೆ ಬಾಗಿಲು ಹೊಸಪೇಟೆ, ಹುಲಿಗಿ ಕಡೆ ಹೋಗುವ ರಸ್ತೆಯಲ್ಲಿ ಲಾರಿ ಮತ್ತು ಅಕ್ರಮ ಮರಳು ಟ್ರಕ್ ಗಳ ಸಂಚಾರದಿಂದ ಕಳೆದ ಆರು ತಿಂಗಳಿಂದ ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ.
ಸಾವು-ನೋವುಗಳು ಸಂಭವಿಸಿದ್ದರೂ ಪೊಲೀಸ್ ಇಲಾಖೆ ಈ ರಸ್ತೆಯಲ್ಲಿ ಭಾರಿ ಗಾತ್ರದ ಲಾರಿಗಳ ಸಂಚಾರಕ್ಕೆ ತಡೆಯೊಡ್ಡು, ಹೊಸಪೇಟೆ ಮತ್ತು ರಸ್ತೆ ಅಗಲೀಕರಣ ಕುರಿತು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, ಶೀಘ್ರವೇ ಕಾಮಗಾರಿ ಆರಂಭ ಮಾಡಬೇಕಿದೆ.
ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ: ರಾಜ್ಯ ಸರ್ಕಾರ ಗಂಗಾವತಿ, ಆನೆಗೊಂದಿ, ಮುನಿರಾಬಾದ್ ರಸ್ತೆಯನ್ನು 130 ರಾಜ್ಯ ಹೆದ್ದಾರಿ ಎಂದು ಘೋಷಣೆ ಮಾಡಿದ್ದರೂ ರಾಜ್ಯ ಹೆದ್ದಾರಿಗೆ ಇರಬೇಕಾದ ಸೌಕರ್ಯಗಳನ್ನು ನೀಡಿಲ್ಲ. ಇದರಿಂದಾಗಿ ಅನೇಕ ಅಪಘಾತಗಳು ನಡೆಯುತ್ತಿವೆ.
ಹೆಡ್ನಾಳ್ ಗಂಗಾವತಿ ಮಧ್ಯೆ ರಸ್ತೆ ಬಹಳ ಇಕ್ಕಟ್ಟಾಗಿದ್ದು, ಅಗಲೀಕರಣ ಮಾಡುವ ಕುರಿತು ಈಗಾಗಲೇ ಪ್ರಸ್ತಾವನೆಗಳು ನಡೆದಿದ್ದು, ಕಳೆದ ಎರಡು ವರ್ಷಗಳ ಹಿಂದೆ ಘೋಷಣೆ ಮಾಡಲಾಗಿದೆ.
ಲಾರಿ ಟ್ರಕ್ ಗಳ ಸಂಚಾರ ನಿಷೇಧಕ್ಕೆ ಸೂಚನೆ: ಗಂಗಾವತಿ, ಕಡೆ ಬಾಗಿಲು, ಹೊಸಪೇಟೆ, ಆನೆಗೊಂದಿ ಮಾರ್ಗದಲ್ಲಿ ಭಾರಿ ಗಾತ್ರದ ಲಾರಿ ಮತ್ತು ಅಕ್ರಮ ಮರಳು ತುಂಬಿದ ಟ್ರಕ್ ಗಳ ಓಡಾಟದಿಂದ ಸಂಚಾರ ಸಂಪೂರ್ಣ ಹದಗೆಟ್ಟಿದೆ. ನಿತ್ಯವೂ ಸಾವಿರಾರು ವಾಹನಗಳು ಮತ್ತು ಪ್ರವಾಸಿಗರು ಸಂಚರಿಸುವ ಈ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳನ್ನು ನಿಷೇಧ ಮಾಡಿದ್ದರೂ ಕೂಡಾ ವಾಹನಗಳು ಸಂಚರಿಸತ್ತಿವೆ.
ಈ ರಸ್ತೆಯಲ್ಲಿ ಹೋಗುವುದನ್ನು ಕೂಡಲೇ ತಡೆಯುವಂತೆ ಈಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ರಸ್ತೆ ಅಭಿವೃದ್ಧಿ ಕುರಿತಂತೆ ಈಗಾಗಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿದ್ದು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಯಂತೆ ಈ ರಸ್ತೆಯ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ್ ರೆಡ್ಡಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್