ನಾಲ್ಕೇ ದಿನದಲ್ಲಿ ತುಂಗಭದ್ರೆಗೆ ಬಂತು 14 ಟಿಎಂಸಿ ನೀರು


Team Udayavani, Aug 9, 2019, 12:35 PM IST

kopala-tdy-1

ಕೊಪ್ಪಳ: ತುಂಗಭದ್ರಾ ಜಲಾಶಯ ಚಿತ್ರಣ.

ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಕೇವಲ ನಾಲ್ಕೇ ದಿನದಲ್ಲಿ 14 ಟಿಎಂಸಿ ಅಡಿ ನೀರು ಹರಿದು ಬಂದಿದ್ದು, ಡ್ಯಾಂನ ಒಳ ಹರಿವಿನಲ್ಲಿ 1,02,444 ಕ್ಯೂಸೆಕ್‌ನಷ್ಟು ಹೆಚ್ಚಾಗಿದೆ. ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರದಲ್ಲಿ ಖುಷಿ ತಂದಿದ್ದು, ಭತ್ತ ನಾಟಿಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಕಾಲುವೆಗಳಿಗೆ ನೀರನ್ನೂ ಹರಿ ಬಿಡಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ನೀರಿನ ಭೋರ್ಗರೆತ ಹೆಚ್ಚಾಗಿದೆ. ವಿವಿಧ ಜಲಾಶಯಗಳಿಂದ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹರಿ ಬಿಡಲಾಗುತ್ತಿದೆ. ತುಂಗಭದ್ರಾ ಡ್ಯಾಂನ ಅಧೀನದ ತುಂಗಾ ಮತ್ತು ಭದ್ರಾ ಡ್ಯಾಂನಲ್ಲಿ ನೀರಿನ ಸಂಗ್ರಹವೂ ಹೆಚ್ಚಾಗಿದೆ. ಇನ್ನೂ ಶಿವಮೊಗ್ಗ ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ ಡ್ಯಾಂನಿಂದ ನೀರು ಹರಿ ಬಿಡಲಾಗುತ್ತಿದ್ದು, ತುಂಗಭದ್ರಾ ಡ್ಯಾಂಗೆ ಬುಧವಾರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ತುಂಗಭದ್ರಾ ಜಲಾಶಯ 133 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಆದರೆ ಜಲಾಶಯದ ಒಡಲಲ್ಲಿ 33 ಟಿಎಂಸಿ ಅಡಿ ಹೂಳು ತುಂಬಿಕೊಂಡಿದ್ದರಿಂದ ನೀರು ಸಂಗ್ರಹಣಾ ಸಾಮರ್ಥ್ಯ ಪ್ರಸ್ತುತ 100 ಟಿಎಂಸಿ ಅಡಿಗೆ ಬಂದು ತಲುಪಿದೆ. ಕಳೆದ ಕೆಲವು ವರ್ಷದಿಂದ ರಾಜ್ಯದಲ್ಲಿ ಮಳೆಯ ಅಭಾವದಿಂದ ಡ್ಯಾಂನಲ್ಲೂ ನೀರು ಸಂಗ್ರಹಣೆ ಕಡಿಮೆಯಾಗಿತ್ತು. ಆದರೆ ಕಳೆದ ವರ್ಷ ಕರಾವಳಿ ಭಾಗದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಆಗಸ್ಟ್‌ ಮೊದಲ ವಾರದಲ್ಲೇ ತುಂಗಭದ್ರಾ ಜಲಾಶಯ ಭರ್ತಿಯಾಗಿ ಹರಿದಿತ್ತು. ಒಂದು ಡ್ಯಾಂನಷ್ಟು ನೀರನ್ನು ನದಿ ಪಾತ್ರಗಳಿಗೆ ಹರಿದು ಬಿಡಲಾಗಿತ್ತು. ಅಷ್ಟಾದರೂ ಎರಡನೇ ಬೆಳೆಗೆ ಕಳೆದ ವರ್ಷ ನೀರು ಕೊನೆಯ ಹಂತಕ್ಕೆ ಹರಿಸಲಾಗಲಿಲ್ಲ. ಇದರಿಂದ ರೈತರಲ್ಲಿ ಭಾರಿ ನಿರಾಶೆ ಮೂಡಿಸಿದ್ದಲ್ಲದೇ ನೀರು ನಿರ್ವಹಣೆಯಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಗುಡುಗಿದ್ದರು.

ಪ್ರಸಕ್ತ ವರ್ಷವೂ ರೈತರು ರಾಜ್ಯದೆಲ್ಲೆಡೆ ಮಳೆಯಬ್ಬರ ನೋಡಿ ತುಂಗಭದ್ರಾ ಡ್ಯಾಂ ಈ ಭಾರಿ ಭರ್ತಿಯಾಗಲಿದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಅವರ ನಿರೀಕ್ಷೆಯಂತೆ ಕೇವಲ ನಾಲ್ಕೇ ದಿನದಲ್ಲಿ ಜಲಾಶಯಕ್ಕೆ ಬರೊಬ್ಬರಿ 14 ಟಿಎಂಸಿ ಅಡಿ ನೀರು ಹರಿದು ಬಂದಿದ್ದು ಅಚ್ಚುಕಟ್ಟು ಪ್ರದೇಶದ ರೈತರಿಗೆ ಖುಷಿಯ ಭಾವನೆ ಮತ್ತಷ್ಟು ಇಮ್ಮಡಿಗೊಂಡಿದೆ. ಆಗಸ್ಟ್‌ 5ರಂದು ಡ್ಯಾಂನಲ್ಲಿ 34 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ, ಒಳ ಹರಿವು 16,736 ಕ್ಯೂಸೆಕ್‌ನಷ್ಟಿತ್ತು. ಆ.6ರಂದು 36 ಟಿಎಂಸಿ ಅಡಿಯಷ್ಟಿದ್ದರೆ, ಒಳ ಹರಿವು 23,052 ಕ್ಯೂಸೆಕ್‌ನಷ್ಟಿತ್ತು. ಇನ್ನೂ ಆ.7ರಂದು ಡ್ಯಾಂನಲ್ಲಿ 40 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಒಳ ಹರಿವು 40,781 ಕ್ಯೂಸೆಕ್‌ನಷ್ಟಿತ್ತು. ಗುರುವಾರ ಡ್ಯಾಂನಲ್ಲಿ 48 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ, ಒಳ ಹರಿವಿನಲ್ಲಿ 1,02,444 ಕ್ಯೂಸೆಕ್‌ನಷ್ಟು ಹೆಚ್ಚಾಗಿದೆ. ಸಂಜೆಯ ವೇಳೆ ಡ್ಯಾಂನ ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಾಗಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಚ್ಚುಕಟ್ಟು ರೈತರಿಗೆ ಖುಷಿಯೋ ಖುಷಿ: ತುಂಗಭದ್ರಾ ಡ್ಯಾಂ ನೀರು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಹರಿಯಲಿದ್ದು, ಲಕ್ಷಾಂತರ ರೈತರು ಇದೇ ನೀರನ್ನು ನಂಬಿ ಜೀವನ ಸಾಗಿಸುತ್ತಿದ್ದಾರೆ. ಕಳೆದ ವರ್ಷದಂತೆ ಈ ವರ್ಷ ಡ್ಯಾಂ ಭರ್ತಿಯಾಗಲಿ ಎಂದು ಅಚ್ಚುಕಟ್ಟು ಪ್ರದೇಶದ ರೈತರು ಸಂತಸ ವ್ಯಕ್ತಪಡಿಸುತ್ತಿದ್ದು, ಡ್ಯಾಂನ ನೀರು ನಿರ್ವಹಣೆ ಸರಿಯಾಗಿ ನಡೆಯಲಿ ಎಂದು ಒತ್ತಾಯ ಮಾಡಿದ್ದಾರೆ.

ಕಾಲುವೆಗೆ ನೀರು ಬಿಡುಗಡೆ: ತುಂಗಭದ್ರಾ ಡ್ಯಾಂನಲ್ಲಿ ವಾಡಿಕೆಯಂತೆ 48 ಟಿಎಂಸಿ ಅಡಿ ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ರೈತರ ಮೊದಲ ಬೆಳೆಗೆ ನೀರು ಪೂರೈಸಬೇಕಾದ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಡ್ಯಾಂಗೆ ಪೂಜೆ ಸಲ್ಲಿಸಿ ನೀರು ಹರಿಸಿದ್ದರು. ಜೊತೆಗೆ ಗುರುವಾರ ಡ್ಯಾಂಗೆ ಮತ್ತೆ ಪೂಜೆ ಸಲ್ಲಿಸುವ ಮೂಲಕ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕಾಲುವೆಗೆ ನೀರು ಹರಿಸಿದರು.

 

•ದತ್ತು ಕಮ್ಮಾರ

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.