ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ
Team Udayavani, Nov 27, 2021, 7:18 PM IST
ಗಂಗಾವತಿ :ಗೃಹಿಣಿಯನ್ನು ಆತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಶ್ರೀರಾಮನಗರದಲ್ಲಿ ಜರುಗಿದೆ.
ಮೃತ ಮಹಿಳೆ ಮೂಲತಃ ಅಡವಿ ಬಾವಿ ತಾಂಡಾದ ನಿವಾಸಿಯಾಗಿದ್ದು ಕಳೆದ ಹಲವು ವರ್ಷಗಳಿಂದ ಶ್ರೀರಾಮನಗರದಲ್ಲಿ ಮನೆಗೆಲಸ ಮಾಡುತ್ತಿದ್ದಳು. ಶುಕ್ರವಾರ ರಾತ್ರಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ .
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಎಸ್ಪಿ ಟಿ ಶ್ರೀಧರ್ ,ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ , ಪಿ ಐ ಉದಯರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಕ್ರಮ ತಡೆಗೆ ಮನವಿ : ಶ್ರೀರಾಮ ನಗರದಲ್ಲಿ ಅಕ್ರಮ ಮದ್ಯ ಹಾಗೂ ಮಟ್ಕಾ ದಂಧೆ ಹೆಚ್ಚಾಗಿದೆ. ಗ್ರಾಮದಲ್ಲಿ ಕೃಷಿ ಕೂಲಿ ಮಾಡುವ ಪುರುಷರು ಮಹಿಳೆಯರು ಮದ್ಯ ಸೇವಿಸುವ ರಿಂದ ಇಂಥ ಅಪರಾಧ ಚಟುವಟಿಕೆಗಳು ಅನೈತಿಕ ಚಟುವಟಿಕೆಗಳು ಹೆಚ್ಚಾಗಿದ್ದು ಪೋಲಿಸ್ ಇಲಾಖೆಯವರು ಸೂಕ್ತ ಕಾನೂನು ಕ್ರಮ ಕೈಗೊಂಡು ಇವುಗಳನ್ನು ತಡೆಯುವಂತೆ ಗ್ರಾಮಸ್ಥರು ಎಸ್ಪಿಯವರಿಗೆ ಮನವಿ ಮಾಡಿದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ