ಬತ್ತಿದ ಕೊಳವೆಬಾವಿಯಲ್ಲಿ ಹೆಚ್ಚಿದ ಸೆಲೆ
Team Udayavani, Apr 28, 2019, 3:32 PM IST
ಕುಷ್ಟಗಿ: ತಾಲೂಕಿನಾದ್ಯಂತ ಬರಗಾಲದ ಪರಿಸ್ಥಿತಿ ಭೀಕರವಾಗಿದ್ದು, ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲೂ ಕೆಲ ದಿನಗಳ ಹಿಂದೆ ಇಂತಹದ್ದೇ ಪರಿಸ್ಥಿತಿ ಇತ್ತು. ಆದರೆ ಈಗ ಕೊಳವೆಬಾವಿಗಳಲ್ಲಿ ಗ್ರಾಮಸ್ಥರು ಅಚ್ಚರಿ ಪಡುವಷ್ಟು ನೀರು ಲಭ್ಯವಾಗುತ್ತಿದೆ. ಕೆಲವು ದಿನಗಳ ಹಿಂದೆ ನಿರ್ಮಿಸಿದ ಕೃಷಿ ಹೊಂಡ ಗ್ರಾಮಸ್ಥರ ದಾಹ ತೀರಿಸಿದೆ.
ತಾಲೂಕಿನಲ್ಲಿ ಬರಗಾಲ ತೀವ್ರಗೊಂಡಿದೆ. ಹಂಚಿನಾಳ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿತ್ತು. ಕೆಲ ತಿಂಗಳ ಹಿಂದೆ ಗ್ರಾಮದ ಹೊರವಲಯದ ನಾಲೆಯಲ್ಲಿ ಕೊಳವೆಬಾವಿ ಕೊರೆಯಿಸಿದ್ದು, ಕಡಿಮೆ ಪ್ರಮಾಣದ ಸೆಲೆ ದೊರೆಯಿತು. ಬೇಸಿಗೆ ಇರುವುದರಿಂದ ಕೊಳವೆಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಸಮಸ್ಯೆ ಉಲ್ಭಣಗೊಂಡಿತ್ತು. ಗ್ರಾಮಸ್ಥರು ದೂರದ ಸ್ಥಳಗಳಿಂದ ನೀರು ತರುತ್ತಿದ್ದರು. ಆದರೆ 20 ದಿನಗಳ ಹಿಂದೆ ಗ್ರಾಮ ವ್ಯಾಪ್ತಿಯಲ್ಲಿ ಅಕಾಲಿಕ ಮಳೆ ಸುರಿದಿದೆ. ನಾಲೆಯಲ್ಲಿ ಕೊರೆದಿದ್ದ ಕೊಳವೆಬಾವಿಗೆ ಸಮೀಪ ಕೃಷಿ ಭಾಗ್ಯ ಯೋಜನೆಯಡಿ ಛತ್ರಪ್ಪ ಭಜಂತ್ರಿ ಎಂಬುವವರ ಹೊಲದಲ್ಲಿ 27 ಅಡಿ ಉದ್ದ, 27 ಅಡಿ ಅಗಲ ಹಾಗೂ 10 ಅಡಿ ಆಳದ ಕೃಷಿ ಹೊಂಡ ನಿರ್ಮಿಸಲಾಗಿತ್ತು. ಮಳೆಯಿಂದಾಗಿ ಕೃಷಿ ಹೊಂಡ ಭರ್ತಿಯಾಗಿ, ನಾಲೆಯಲ್ಲೂ ನೀರು ಜಿನುಗಿತು. ಕೃಷಿ ಹೊಂಡ ಭರ್ತಿಯಾಗುತ್ತಿದ್ದಂತೆ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಕೊಳವೆಬಾವಿಯಲ್ಲಿ ಸೆಲೆ ಹೆಚ್ಚಿದ್ದು, ಅಗತ್ಯ ಪ್ರಮಾಣದ ನೀರು ಲಭ್ಯವಾಗುತ್ತಿದೆ ಎಂದು ಸ್ಥಳೀಯರು ಸಂತಸಗೊಂಡಿದ್ದಾರೆ.
ಗ್ರಾಮದ ಹೊರವಲಯದ ನಾನಾ ಕಡೆ ದಿಬ್ಬದಿಂದ ಮಳೆ ನೀರು ಹರಿದು ಬರುತ್ತದೆ. ಗ್ರಾಮಕ್ಕೆ ಹೊಂದಿಕೊಂಡಿರುವ ನಾಲೆಗೆ ಮಳೆ ನೀರು ಹರಿದು ಬರುತ್ತದೆ. 2018-19ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಗ್ರಾಮ ವ್ಯಾಪ್ತಿಯಲ್ಲಿ 28 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಗ್ರಾಮದ ರೈತ ಅನುವುಗಾರ ರಾಮನಗೌಡ ದುಂಬಾಲು ಬಿದ್ದು ಕೃಷಿ ಹೊಂಡ ನಿರ್ಮಿಸಿಕೊಳ್ಳುವಂತೆ ರೈತರ ಮನವೊಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 28 ಕೃಷಿ ಹೊಂಡಗಳು ನಿರ್ಮಾಣವಾಗಿವೆ. ಇತ್ತೀಚೆಗೆ ಅಕಾಲಿಕ ಮಳೆ ಸುರಿದಾಗ ಎಲ್ಲ ಕೃಷಿ ಹೊಂಡಗಳೂ ತುಂಬಿವೆ. ಜಾನುವಾರುಗಳಿಗೆ ಅಡವಿಯಲ್ಲಿ ಕುಡಿಯಲು ನೀರು ಇಲ್ಲದ ಸ್ಥಿತಿ ಇತ್ತು. ಈಗ ಕೃಷಿ ಹೊಂಡದಲ್ಲಿ ನೀರು ನಿಂತಿರುವುದರಿಂದ ಜಾನುವಾರುಗಳು, ಕುರಿ-ಮೇಕೆಗಳಿಗೆ ನೀರು ದೊರೆಯುತ್ತಿದೆ.
ಈ ವಿಷಯ ತಿಳಿಯುತ್ತಿದ್ದಂತೆ ತಾಪಂ ಇಒ ಬಸಣ್ಣ, ಕೃಷಿ ಸಹಾಯಕ ನಿರ್ದೇಶಕ ವೀರಣ್ಣ ಕಮತರ ಮತ್ತು ಸಿಬ್ಬಂದಿ ಗ್ರಾಮಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್