ಮಹಿಳಾ ಪದವಿ ಕಾಲೇಜಿಗೆ ಹೆಚ್ಚಿದ ಬೇಡಿಕೆ

4 ಸಾವಿರಕ್ಕೂ ಅಧಿಕ ವಿದ್ಯಾರ್ಥಿನಿಯರಿಂದ ಅಭ್ಯಾಸ, ಗಂಗಾವತಿ ಜನರ ಕನಸು ನನಸಾಗುವ ಸಾಧ್ಯತೆ

Team Udayavani, Mar 13, 2021, 4:34 PM IST

ಮಹಿಳಾ ಪದವಿ ಕಾಲೇಜಿಗೆ ಹೆಚ್ಚಿದ ಬೇಡಿಕೆ

ಗಂಗಾವತಿ: ದಶಕದಿಂದ ಗಂಗಾವತಿ ನಗರ ಶೈಕ್ಷಣಿಕವಾಗಿ ಪ್ರಗತಿ ಹೊಂದುತ್ತಿದ್ದು, ಸದ್ಯ ನಗರದಲ್ಲಿ ಆರು ಪದವಿ ಮಹಾವಿದ್ಯಾಲಯಗಳಿವೆ. ಇವುಗಳಲ್ಲಿಶೇ.50ರಷ್ಟು ವಿದ್ಯಾರ್ಥಿನಿಯರಿದ್ದಾರೆ. ಈಗಾಗಲೇವಿದ್ಯಾರ್ಥಿ ಸಂಘಟನೆಗಳು ದಶಕಗಳಿಂದ ಗಂಗಾವತಿಗೆಪ್ರತ್ಯೇಕ ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯ ಮಂಜೂರಿ ಮಾಡುವಂತೆ ಮನವಿ ಮಾಡುತ್ತಿದ್ದರೂ ಸರಕಾರ ನಿರ್ಲಕ್ಷ್ಯ ವಹಿಸಿದೆ. ಈ ಮಧ್ಯೆ ರಾಜ್ಯದಲ್ಲಿ ಶೀಘ್ರವೇ 20 ಸರಕಾರಿ ಮಹಾವಿದ್ಯಾಲಯಗಳನ್ನು ಮಂಜೂರಿ ಮಾಡುವ ಕುರಿತು ಉನ್ನತ ಶಿಕ್ಷಣ ಇಲಾಖೆ ಆಸಕ್ತಿ ಹೊಂದಿದ್ದು, ಈಗಾಗಲೇ ಪ್ರಸ್ತಾವನೆ ಸಲ್ಲಿಸಿರುವಂತೆ ಗಂಗಾವತಿ ನಗರಕ್ಕೆ ಒಂದು ಮಹಿಳಾಸರಕಾರಿ ಮಹಾವಿದ್ಯಾಲಯ ದೊರಕುವ ಸಾಧ್ಯತೆ ಇದೆ.

ನಗರದಲ್ಲಿ ಕೊಲ್ಲಿನಾಗೇಶ್ವರರಾವ್‌ ಸರಕಾರಿಮಹಾವಿದ್ಯಾಲಯ, ಕಲ್ಮಠ ಮಹಿಳಾಮಹಾವಿದ್ಯಾಲಯ, ಸಂಕಲ್ಪ ಮಹಾವಿದ್ಯಾಲಯ,ಜಿಎಚ್‌ಎನ್‌ ಮಹಾವಿದ್ಯಾಲಯ, ಜೆಎಸ್‌ಎಸ್‌ ಮಹಾವಿದ್ಯಾಲಯ, ಶ್ರೀರಾಮುಲು ಮಹಾವಿದ್ಯಾಲಯ ಮತ್ತು ಶ್ರೀರಾಮನಗರ,ಕಾರಟಗಿ ಮತ್ತು ಕನಕಗಿರಿಯಲ್ಲಿ ಸರಕಾರಿ ಪದವಿಮಹಾವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟು 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ತಾಲೂಕಿನಲ್ಲಿಒಟ್ಟು 16 ಪಿಯುಸಿ ಕಾಲೇಜು ಗಳಿದ್ದು,  ಪ್ರತಿ ವರ್ಷವೃತ್ತಿಪರ ಕೋರ್ಸ್‌ಗೆ ಇದರಲ್ಲಿ ಶೇ. 16ರಷ್ಟುವಿದ್ಯಾರ್ಥಿಗಳು ಹೋಗುತ್ತಿದ್ದು, ಉಳಿದವರು ಪದವಿ ಕೋರ್ಸ್‌ಗೆ ಸೇರಿ ಕಲೆ, ವಾಣಿಜ್ಯ, ವಿಜ್ಞಾನವಿಭಾಗದ ಪದವಿ ಅಭ್ಯಾಸ ಮಾಡು ತ್ತಿದ್ದಾರೆ. ಕೋ ಎಜ್ಯುಕೇಶನ್‌ನಲ್ಲಿ ಕಲಿಯಲು ಆಸಕ್ತಿ ಇಲ್ಲದೇ ಮತ್ತು ಪಾಲಕರ ನಿರಾಕರಣೆಯ ಫಲವಾಗಿ ಶೇ.14ರಷ್ಟುವಿದ್ಯಾರ್ಥಿನಿಯರು ಪಿಯುಸಿಗೆ ತಮ್ಮ ವಿದ್ಯಾಭ್ಯಾಸನಿಲ್ಲಿಸುತ್ತಿದ್ದಾರೆ ಎಂದು ಸಮೀಕ್ಷೆ ಯೊಂದು ಹೇಳಿದ್ದುಇದನ್ನು ಪರಿಗಣಿಸಿ 2014-15ರಲ್ಲಿ ಉನ್ನತ ಶಿಕ್ಷಣಇಲಾಖೆ ಪ್ರತಿ ತಾಲೂಕಿನಲ್ಲಿ ವಿದ್ಯಾರ್ಥಿಗಳು ಮತ್ತುವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ವಸತಿ ಸಹಿತ ಪದವಿ ಕಾಲೇಜು ಆರಂಭಿಸುವ ಯೋಜನೆ ರೂಪಿಸಿತ್ತು.

ಅನುಷ್ಠಾನ ಮಾಡುಯವ ವೇಳೆ ವಿಧಾನಸಭೆ ಚುನಾವಣೆ ಬಂದ ಕಾರಣ ತಾಲೂಕಿಗೊಂದು ಪದವಿ ಮಹಾವಿದ್ಯಾಲಯ ಯೋಜನೆ ನನೆಗುದಿಗೆಬಿದ್ದಿದೆ. ಇದೀಗ ತಾಲೂಕಿಗೊಂದು ಮಹಿಳಾ ಪದವಿ ಮಹಾವಿದ್ಯಾಲಯ ಆರಂಭ ಮಾಡಲು ರಾಜ್ಯ ಸರಕಾರ ಜಿಲ್ಲೆಗಳಿಂದ ವರದಿ ಕೇಳಿದ್ದು ಶೀಘ್ರ 20 ತಾಲೂಕುಗಳಲ್ಲಿ ಮಹಿಳಾ ಪದವಿ ಕಾಲೇಜು ಆರಂಭಿಸಲಾಗುತ್ತಿದೆ.

ಗಂಗಾವತಿ ನಗರಕ್ಕೆ ಸರಕಾರಿ ಮಹಿಳಾ ಮಹಾವಿದ್ಯಾಲಯದ ಅವಶ್ಯಕತೆ ಇದ್ದು, ಈಗಾಗಲೇ ಉನ್ನತ ಶಿಕ್ಷಣ ಸಚಿವ ಡಾ|ಅಶ್ವಥನಾರಾಯಣ ಅವರು ಗಂಗಾವತಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮನವಿ ಸಲ್ಲಿಸಲಾಗಿದೆ. ತಾಲೂಕಿನಲ್ಲಿ ಹೆಣ್ಣುಮಕ್ಕಳು ಪದವಿ ವಿದ್ಯಾಭ್ಯಾಸ ಮಾಡಲು ಪ್ರತ್ಯೇಕ ಮಹಿಳಾ ಪದವಿ ಕಾಲೇಜು ಇದ್ದರೆ ಅನುಕೂಲವಾಗುತ್ತದೆ. ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯವಾಗಲಿದೆ. ಇದೇ ವರ್ಷ ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯ ಆರಂಭಿಸಲು ಮತ್ತೂಮ್ಮೆ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುತ್ತದೆ.  –ಪರಣ್ಣ ಮುನವಳ್ಳಿ, ಶಾಸಕರು

ಪ್ರತಿ ತಾಲೂಕಿನಲ್ಲಿ ಮಹಿಳಾ ಪದವಿಮಹಾವಿದ್ಯಾಲಯದ ಅಗತ್ಯವಿದ್ದು,ಈಗಾಗಲೇ ಶಾಸಕರು, ಸಂಸದರಿಗೆ ಈ ಕುರಿತುಮನವರಿಕೆ ಮಾಡಲಾಗಿದೆ. ಪ್ರಸ್ತುತ ಗಂಗಾವತಿಗೆಪ್ರತ್ಯೇಕ ಮಹಿಳಾ ಮಹಾವಿದ್ಯಾಲಯಆರಂಭಿಸಲು ಶಾಸಕರು ಪ್ರಸ್ತಾವನೆ ಸಲ್ಲಿಸಿದ್ದಾರೆ.ಉನ್ನತ ಶಿಕ್ಷಣ ಸಚಿವರಿಗೆ ಮತ್ತೂಮ್ಮೆ ಪತ್ರ ಬರೆಯುವಂತೆ ಶಾಸಕರು, ಸಂಸದರಿಗೆ ಮನವಿ ಮಾಡಲಾಗುತ್ತದೆ. ಪದವಿ ಮಹಾವಿದ್ಯಾಲಯ ಮಂಜೂರಿ ಮಾಡುವ ಮೂಲಕ ಹೆಣ್ಣು ಮಕ್ಕಳು ಪದವಿವರೆಗೆ ವಿದ್ಯಾಭ್ಯಾಸ ಮಾಡಲು ಅನುಕೂಲವಾಗುತ್ತದೆ. ಇದೇ ಶೈಕ್ಷಣಿಕ ವರ್ಷದಿಂದ ಮಹಿಳಾ ಪದವಿ ಕಾಲೇಜು ಆರಂಭಮಾಡಬೇಕು.  ಶಿವಾನಂದ ಮೇಟಿ, ಸದಸ್ಯರು ವಿದ್ಯಾವಿಷಯಕ್‌ ಪರಿಷತ್‌ ಶ್ರೀಕೃಷ್ಣದೇವರಾಯ ವಿವಿ

 

-ಕೆ. ನಿಂಗಜ್ಜ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.