ಕಾರಟಗಿಯಲ್ಲಿ ಹೆಚ್ಚುತ್ತಿದೆ ಸೋಂಕು
Team Udayavani, Aug 1, 2020, 1:24 PM IST
ಕಾರಟಗಿ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರ್ಯಾಪಿಡ್ ಆ್ಯಂಟೀಜೆನ್ ಟೆಸ್ಟ್ ಮಾಡಲಾಗುತ್ತಿದೆ. ಮೂರು ದಿನಗಳಿಂದ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಆ್ಯಂಟೀಜೆನ್ ಟೆಸ್ಟ್ ಆರಂಭಿಸಿದೆ.
ಬುಧವಾರ ಮೊದಲ ದಿನ 5 ತಂಡಗಳಲ್ಲಿ 82 ಜನರ ಪರೀಕ್ಷೆ ನಡೆಸಲಾಗಿದ್ದು, 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಎರಡನೇ ದಿನ 50 ಜನರನ್ನು ಪರೀಕ್ಷಿಸಲಾಗಿ 15 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಎರಡು ದಿನಗಳಲ್ಲಿ 29 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ಶುಕ್ರವಾರ 9 ತಂಡ ರಚಿಸಿ ಪಟ್ಟಣದ ವಿವಿಧ ವಾರ್ಡ್ಗಳಿಗೆ ಕಳುಹಿಸಿದ್ದು 124 ಜನರನ್ನು ಪರೀಕ್ಷಿಸಲಾಗಿದ್ದು, ಒಟ್ಟು 17 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ.
ಅದರಲ್ಲಿ ಮೂವರಿಗೆ ಇತರೆ ಕಾಯಿಲೆಗಳು ಇರುವ ಕಾರಣಕ್ಕೆ ಅವರನ್ನು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ. ಇಲ್ಲಿವರೆಗೂ ಕಾರಟಗಿ ತಾಲೂಕಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಾರಟಗಿಯಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ರ್ಯಾಪಿಡ್ ಆ್ಯಂಟೀಜೆನ್ ಪರೀಕ್ಷೆಗೆ ಮುಂದಾಗಿದ್ದೇವೆ. ಕೋವಿಡ್ ಸೋಂಕು ಇರುವ ವ್ಯಕ್ತಿಗಳನ್ನು ವೇಗವಾಗಿ ಪತ್ತೆ ಹಚ್ಚಲು ಈ ಟೆಸ್ಟ್ ಸಹಕಾರಿಯಾಗಿದೆ. ಅರ್ಧ ಗಂಟೆಯಲ್ಲೇ ಫಲಿತಾಂಶ ಬರುವುದರಿಂದ ಸೋಂಕಿತ ವ್ಯಕ್ತಿ ಬೇರೊಬ್ಬರಿಗೆ ಸೋಂಕು ಹರಡದಂತೆ ತಡೆಯಲು ಸಹಕಾರಿಯಾಗಿದೆ. ಅಲ್ಲದೇ ಕಾರಟಗಿಯಲ್ಲಿ ಸಂಚಾರಿ (ಮೊಬೈಲ್) ಆ್ಯಂಟೀಜೆನ್ ಪರೀಕ್ಷಾ ತಂಡವನ್ನು ಉಳಿಸಿಕೊಂಡು ಚಿಕಿತ್ಸೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ