ಮಳೆಗಾಗಿ ಪ್ರಾರ್ಥಿಸಿ ಇಂದ್ರಜಿತ್‌ ಕಾಳಗ ಬಯಲಾಟ


Team Udayavani, Jul 2, 2019, 9:17 AM IST

kopala-tdy-1..

ಕುಕನೂರ: ಮಳೆಗಾಗಿ ಪ್ರಾರ್ಥಿಸಿ ಪಟ್ಟಣದ ಜಗದ್ಗುರು ಅನ್ನದಾನೇಶ್ವರ ಶಾಖಾಮಠದಲ್ಲಿ ಇಂದ್ರಜಿತ್‌ ಕಾಳಗ ಬಯಲಾಟ ಪ್ರದರ್ಶನಗೊಂಡಿತು.

ಕುಕನೂರ: ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳವಾಗಿವೆ ಎಂದು ತಾಲೂಕ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವುಕುಮಾರ ನಾಗಲಾಪುರ ಹೇಳಿದರು.

ಪಟ್ಟಣದ ಶ್ರೀ ಜಗದ್ಗುರು ಅನ್ನದಾನೀಶ್ವರ ಶಾಖಾಮಠದಲ್ಲಿ ವರುಣನ ಕೃಪೆಗಾಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಬಯಲಾಟ ಸಂಘದಿಂದ ಹಮ್ಮಿಕೊಂಡ ಇಂದ್ರಜಿತ್‌ ಕಾಳಗ ಎಂಬ ಬಯಲಾಟ ಮತ್ತು ಹಿರಿಯ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.

ಜನಪದ ಕಲೆಗಳು ಮನುಷ್ಯನಷ್ಟೇ ಪ್ರಾಚೀನವಾದವು. ಪರಿಸರ ಪರಿವೀಕ್ಷಣೆಯಿಂದ ಅನುಕರಣೆಯಿಂದ ಅರಿತದ್ದನ್ನು ಒಂದೆಡೆ ದಾಖಲಿಸಬೇಕೆಂಬ ಮನುಷ್ಯ ಸಹಜ ಗುಣದಿಂದ ಇಂಥ ಕಲೆಗಳು ಅಸ್ತಿತ್ವಕ್ಕೆ ಬಂದಿವೆ. ಮಳೆಗಾಗಿ ಬಯಲಾಟ ಆಡುವ ಮೂಲಕ ಶ್ರೀ ಅನ್ನದಾನೀಶ್ವರ ಬಯಲಾಟ ಕಲಾವಿದರ ಕಾರ್ಯ ಶ್ಲಾಘನೀಯವಾದದ್ದು. ಇಂತಹ ಕಾರ್ಯಕ್ಕೆ ಶ್ರೀಮಠದ ಪೂಜ್ಯರ ಮಾರ್ಗದರ್ಶನವೇ ಪ್ರೇರಣೆ ಎಂದರು.

ಹಿರಿಯರಾದ ಲಕ್ಷ್ಮಣ ಬೆದವಟ್ಟಿ ಮಾತನಾಡಿ, ಕುಕನೂರ ಹಿರಿಯ ಕಲಾವಿದರು ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೆ ಆದ ಅಪಾರ ಕೊಡಗೆ ನೀಡಿದ್ದಾರೆ. ಅದರ ಹಾದಿಯಲ್ಲಿ ಅನ್ನದಾನೀಶ್ವರ ಬಯಲಾಟ ಸಂಘದವರು ನಡೆಯುತ್ತಿರುವುದು ಕುಕನೂರು ಪಟ್ಟಣಕ್ಕೆ ಹೆಮ್ಮೆಯ ವಿಷಯ ಎಂದರು.

ನೇತೃತ್ವ ವಹಿಸಿ ಮಾತನಾಡಿದ ಶ್ರೀ ಮಹಾದೇವ ದೇವರು, ಪ್ರಾಚೀನ ಕಲೆಯನ್ನು ಮಳೆಗಾಗಿ ಪ್ರದರ್ಶನ ಮಾಡುವ ಮೂಲಕ ಇಲ್ಲಿಯ ಕಲಾವಿದರು ಕಲೆಯನ್ನು ಉಳಿಸುವ ಕಾರ್ಯದ ಜೊತೆಗೆ ರೈತರ ಬದುಕನ್ನ ಹಸನಮಾಡುವ ಕಾರ್ಯ ಮಾಡಿದ್ದಾರೆ ಎಂದರು.

ಹಿರಿಯ ಕಲಾವಿದರಾದ ಕಳಕಪ್ಪ ಬೋರಣ್ಣನವರ, ರಾಮಣ್ಣ ಬಾರಕೇರ, ಹನುಮಂತಪ್ಪ ಹೊರಗಿನಮನಿ,ಲಕ್ಷ್ಮಣ ಬೆದವಟ್ಟಿ , ಯಲ್ಲಪ್ಪ ಚುಕ್ಕನಕಲ್ಲ ಅವರನ್ನ ಸನ್ಮಾನಿಸಲಾಯಿತು. ಮಹಾಂತೇಶ ಹೂಗಾರ ಮಾತನಾಡಿದರು. ಪಪಂ ಸದಸ್ಯ ಅಡವಿ ಬಸವರಾಜ ನಿರೂಪಿಸಿದರು.

ಹಿರಿಯರಾದ ಕಾಶೀಂಸಾಬ್‌ ತಲಕಲ್, ಗದಿಗೆಪ್ಪ ಪವಾಡಶೆಟ್ಟಿ, ಪಪಂ ಸದಸ್ಯ ಹನುಮಂತ ಹಂಪನಾಳ, ಪ್ರಶಾಂತ ಕಲ್ಮಠ, ಸಿದ್ದಣ್ಣ ಉಳಾಗಡ್ಡಿ, ಸಿದ್ದಲಿಂಗಯ್ಯ ಬಂಡಿಮಠ, ಶೇಖಪ್ಪ ಶಿರೂರ, ಲಕ್ಷ ್ಮಣ ಕಾಳಿ, ರಾಮಣ್ಣ ಬೆದವಟ್ಟಿ, ಚನ್ನಪ್ಪ ಅಂಡಿ, ನಾಗಪ್ಪ ಬಡಿಗೇರ, ಈರಪ್ಪ ಕೂಡ್ಲೂರು, ಜಗದೀಶಯ್ಯ ಕಳ್ಳಿಮಠ ಮತ್ತು ಇಟಗಿ ಗ್ರಾಮದ ಕಲಾವಿದರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.