ಯುವಕನಿಗೆ ಸೋಂಕು: ಮಾರುತಿ ನಗರ ಸೀಲ್ಡೌನ್
Team Udayavani, Jun 25, 2020, 3:37 PM IST
ಕುಷ್ಟಗಿ: ಪಟ್ಟಣ ವ್ಯಾಪ್ತಿಯ 1ನೇ ವಾರ್ಡಿನ ಮಾರುತಿ ನಗರ ಯುವಕನಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಸೀಲ್ಡೌನ್ ಮಾಡಿ ಕಂಟೇನ್ಮೆಂಟ್ ಪ್ರದೇಶವೆಂದು ಪುರಸಭೆ ಘೋಷಿಸಿದ್ದು, ಜನ ಸಂಚಾರಕ್ಕೆ 28 ದಿನಗಳ ದಿಗ್ಬಂಧನ ವಿಧಿಸಲಾಗಿದೆ.
ಪಟ್ಟಣದ ಮೊದಲ ಪ್ರಕರಣ ಇದಾಗಿದೆ. ಸೋಂಕಿತ ಯುವಕ ಬಾಗಲಕೋಟೆ, ಹುನಗುಂದ, ಇಳಕಲ್ಲ ಮೊದಲಾದ ಕಡೆ ಹೋಗಿ ಬಂದಿರುವ ಮಾಹಿತಿ ಇದೆ. ತೀವ್ರ ಗಂಟಲು ನೋವು ಸಹಿಸದೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದ. ಸದರಿ ಯುವಕನ ಗಂಟಲು ದ್ರವ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿ ಪಾಸಿಟಿವ್ ಬಂದಿದ್ದು, ಕಳೆದ ಮಂಗಳವಾರ ಕೊಪ್ಪಳ ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬುಧವಾರ ಬೆಳಗ್ಗೆ ತಹಶೀಲ್ದಾರ್ ಎಂ.ಸಿದ್ದೇಶ, ತಾಲೂಕು ವೈದ್ಯಾ ಧಿಕಾರಿ ಡಾ.ಆನಂದ ಗೋಟೂರು, ಪುರಸಭೆ ಮುಖ್ಯಾಧಿಕಾರಿ ಆಶೋಕ ಭೇಟಿ ನೀಡಿದರು. 77 ಮನೆಗಳ ವ್ಯಾಪ್ತಿಯನ್ನು ಕಂಟೇನ್ಮೆಂಟ್ ಪ್ರದೇಶ ಹಾಗೂ 200 ಮನೆಗಳ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಪುರಸಭೆ ಸದರಿ ಪ್ರದೇಶದಲ್ಲಿ ಪೌರ ಕಾರ್ಮಿಕರು, ಸ್ವಚ್ಛತೆ, ಕ್ರಿಮಿನಾಶಕ ಸಿಂಪಡಣೆ ಕೈಗೊಂಡಿದ್ದು, ಈ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ. ಪ್ರತಿ ಮನೆಯ ಸದಸ್ಯರು ಸ್ವಯಂ ಹೋಂ ಕ್ವಾರಂಟೈನ್ ಮಾಡಿಕೊಂಡಿದ್ದು, ಈ ಪ್ರದೇಶಕ್ಕೆ ಜನ ಹೋಗಲು ಹಿಂಜರಿಕೆ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಯ ಸಮೀಕ್ಷೆ ಕೈಗೊಂಡಿದ್ದು, ಪೊಲೀಸ್ ಗಸ್ತು ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ