ಮೂಲಸೌಲಭ್ಯ ವಂಚಿತ ವಾಚನಾಲಯ


Team Udayavani, Oct 19, 2019, 3:20 PM IST

kopala-tdy-1

ಯಲಬುರ್ಗಾ: ಪಟ್ಟಣದಲ್ಲಿರುವ ತಾಲೂಕು ಕೇಂದ್ರದ ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಕೊರತೆಯಿಂದ ಓದುಗರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.

1984ರಲ್ಲಿ ಗ್ರಂಥಾಲಯ ಪಟ್ಟಣದಲ್ಲಿ ಆರಂಭಗೊಂಡಿದೆ. 1994ರಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಗ್ರಂಥಾಲಯಕ್ಕೆ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಿರಿಯ ನಾಗರಿಕರು ಪತ್ರಿಕೆ, ಪುಸ್ತಕ ಓದಲು ಬರುತ್ತಾರೆ. ಆದರೆ ಕಟ್ಟಡ ಇಕ್ಕಟ್ಟಿನಿಂದ ಕೂಡಿದೆ. ಕೇವಲ 30×20 ಅಳತೆ ಕಟ್ಟಡವಿದೆ. ಓದುಗರಿಗೆ ಸ್ಥಳದ ಅಭಾವ ಕಾಡುತ್ತಿದೆ. ನಿತ್ಯ 200 ಜನರು ಆಗಮಿಸುತ್ತಿದ್ದು, ಇವರಿಗೆ ಕುಳಿತುಕೊಳ್ಳಲು ಕೇವಲ 32 ಕುರ್ಚಿಗಳು ಮಾತ್ರ ಇವೆ. ಇನ್ನುಳಿದಂತೆ ಹಲವಾರು ಜನತೆ ಹೊರಗೆ ಕುಳಿತು ಅಭ್ಯಾಸ ಮಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಗ್ರಂಥಾಲಯದಲ್ಲಿ 5 ಅಲ್ಮೆರಾ, 7 ರ್ಯಾಕ್‌, 32 ಕುರ್ಚಿಗಳು ಇವೆ. ಗ್ರಂಥಾಲಯದಲ್ಲಿ ಸುಮಾರು 10 ಸಾವಿರ ಪುಸ್ತಕಗಳಿವೆ. ಕನ್ನಡ ದಿನಪತ್ರಿಕೆಗಳನ್ನು ಹಾಕಿಸಲಾಗುತ್ತಿದೆ.

ಸೌಲಭ್ಯಗಳಿಲ್ಲ: ಗ್ರಂಥಾಲಯಕ್ಕೆ ಫ್ಯಾನ್‌, ಕುಡಿಯುವ ನೀರಿನ ವ್ಯವಸ್ಥೆ, ಸ್ಥಳ ಅಭಾವ, ಶೌಚಾಲಯ ಸೇರಿದಂತೆ ಹಲವಾರು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ.

ನಿರ್ವಹಣೆ ಕೊರತೆ: ಗ್ರಂಥಾಲಯ ನಿರ್ವಹಣೆ ಕೊರತೆಯಿಂದ ಬಳಲುತ್ತಿದೆ. ಸುಣ್ಣ ಬಣ್ಣ ಕಂಡಿಲ್ಲ, ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ದುರಸ್ತಿ ಕಾರ್ಯ ಕೈಗೊಳ್ಳಬೇಕಿದೆ. ಸಮಯಕ್ಕೆ ಸರಿಯಾಗಿ ಗ್ರಂಥಾಲಯ ಬಾಗಿಲು ತೆರೆಯುವುದಿಲ್ಲ. ಮೇಲ್ವಿಚಾರಕು ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಪುಸ್ತಕಗಳು ಧೂಳು ತಿನ್ನುತ್ತಿವೆ. ಮೇಲ್ವಿಚಾರಕ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಬಹಳಷ್ಟು ಯುವಕರು ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಆಸಕ್ತಿ ತಳೆದಿದ್ದು, ಗ್ರಂಥಾಲಯದತ್ತ ಮುಖ ಮಾಡುತ್ತಿದ್ದಾರೆ. ಆದರೆ ಗ್ರಂಥಾಲಯ ಮೂಲ ಸೌಕರ್ಯ ಕೊರತೆಯಿಂದ ಓದುಗರು ನಿರಾಸೆ ಅನುಭವಿಸುವಂತಾಗಿದೆ. ಗ್ರಂಥಾಲಯಗಳ ಪುನಶ್ಚೇತನಕ್ಕೆ ಸಂಬಂಧಿ ಸಿದ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಈ ಬಗ್ಗೆ ಯಾರೊಬ್ಬರೂ ಸ್ಪಂದಿಸಿಲ್ಲ. ಹಾಗಾಗಿ ಗ್ರಂಥಾಲಯ ಕೇಳುವವರೇ ಇಲ್ಲದಂತಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ 25ಕ್ಕೂ ಹೆಚ್ಚು ಗ್ರಾಮಗಳಿಂದ ವಿದ್ಯಾರ್ಥಿಗಳು ಆಗಮಿಸುತ್ತಾರೆ

ಸದಸ್ಯತ್ವ ದರ ಹೆಚ್ಚು: ಗ್ರಂಥಾಲಯ ಸದಸ್ಯತ್ವ ಪಡೆಯಲು 100 ರೂ. ನಿಗದಿ ಮಾಡಿದ್ದಾರೆ. ಈ ಮೊದಲು 10 ರೂ. ಇತ್ತು, ಮತ್ತೆ 10 ರೂ.ಗೆ ಸದಸ್ಯತ್ವ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇವರೆಗೂ 239 ಸದಸ್ಯತ್ವ ನೋಂದಣಿ ಮಾಡಿಸಿದ್ದಾರೆ. ಒಟ್ಟಾರೆಯಾಗಿ ಗ್ರಂಥಾಲಯಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ, ಇಂಗ್ಲಿಷ್‌ ದಿನಪತ್ರಿಕೆಗಳು, ಸಾಹಿತ್ಯಕ ಪುಸ್ತಕಗಳ ಬೇಡಿಕೆ ಇದೆ. ಪುಸ್ತಕ ಸಂಗ್ರಹಣೆಗೆ ಇನ್ನೊಂದು ಕಟ್ಟಡ ಅವಶ್ಯಕತೆ ಇದೆ. ಮತ್ತೆ ಒಂದು ಕಟ್ಟಡ ಅವಶ್ಯಕತೆ ಈ ಗ್ರಂಥಾಲಯಕ್ಕೆ ಇದೆ. ತಾಲೂಕು ಕೇಂದ್ರದಲ್ಲೇ ಇರುವ ಗ್ರಂಥಾಲಯ ದುಸ್ಥಿತಿ ಈ ರೀತಿಯಾದರೆ ಗ್ರಾಮೀಣ

ಪ್ರದೇಶಗಳ ಗ್ರಂಥಾಲಯಗಳ ದುಸ್ಥಿತಿ ಹರೋಹರ ಎನ್ನುವಂತಾಗಿದೆ. ಯಲಬುರ್ಗಾ ಹಿಂದುಳಿದ ತಾಲೂಕು ಆಗಿದ್ದು, ವಿದ್ಯಾವಂತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರಿಂದ ಸೌಲಭ್ಯ ಕಲ್ಪಿಸಲು ಮುಂದಾಗುವಂತೆ ಓದುಗರು ಆಗ್ರಹಿಸಿದ್ದಾರೆ.

 

-ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.