ಜನಾರ್ದನ ರೆಡ್ಡಿ ಪಕ್ಷಕ್ಕೆ ಇಕ್ಬಾಲ್ ಅನ್ಸಾರಿ ಆಪ್ತರ ಸೇರ್ಪಡೆ
ಕಂಬಳಿ ಹೊದಿಸಿ ಸನ್ಮಾನ ; ಗಂಗಾವತಿಯಲ್ಲಿ ಕಾಂಗ್ರೆಸ್ ಗೂ ಶಾಕ್ ನೀಡುತ್ತಿರುವ ಗಣಿ ಧಣಿ...
Team Udayavani, Jan 2, 2023, 6:26 PM IST
ಗಂಗಾವತಿ: ಗಂಗಾವತಿ ಯಿಂದ ಚುನಾವಣಾ ಆಖಾಡಕ್ಕಿಳಿಯಲು ಸಿದ್ದತೆ ನಡೆಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯ ಆಪ್ತರಲ್ಲಿ ಪ್ರಮುಖರು ಬೆಂಗಳೂರಿನ ರೆಡ್ಡಿ ನಿವಾಸಕ್ಕೆ ತೆರಳಿ ಹಾಲುಮತ ಕುರುಬ ಸಮಾಜದ ಸಂಕೇತವಾಗಿರುವ ಕರಿ ಕಂಬಳಿ ಹೊದಿಸಿ ಸನ್ಮಾನಿಸಿ ಶುಭ ಕೋರಿ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದರು.
ಹಿರಿಯ ಪತ್ರಕರ್ತ ಸೈಯದ್ ಅಲಿ ಹಾಗೂ ಕೆಲ ಮುಸ್ಲಿಂ ಗುರುಗಳ ಸಮ್ಮುಖದಲ್ಲಿ ಕಾಂಗ್ರೆಸ್ ಹಾಗೂ ಹಾಲುಮತ ಕುರುಬ ಸಮಾಜದ ಮುಖಂಡರಾದ ಬೆಣಕಲ್ ಬೆಟ್ಟಪ್ಪ ಹಾಗೂ ಹೊಸಳ್ಳಿ ಶಿವಕುಮಾರ ಅಪಾರ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ರೆಡ್ಡಿ ಪಕ್ಷವನ್ನು ಸೇರುವ ಕುರಿತು ಮಾತುಕತೆ ನಡೆಸಿದರು.
ಜ.03 ರಂದು ಬೂದಗುಂಪಾ ಗ್ರಾಮದಿಂದ ಗಂಗಾವತಿ ವರೆಗೆ ಜನಾರ್ದನರೆಡ್ಡಿ ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಯಲಿದ್ದು ಇದರಲ್ಲಿ ಇನ್ನೊರ್ವ ಕಾಂಗ್ರೆಸ್ ಮುಖಂಡ ಹಾಗೂ ಅನ್ಸಾರಿ ಆಪ್ತ ಅರಸಿನಕೇರಿ ಹನುಮಂತಪ್ಪ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ. ರೆಡ್ಡಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರಲ್ಲಿ ಹಾಲುಮತ ಕುರುಬ ಸಮಾಜದವರೆ ಹೆಚ್ಚಿರುವುದು ರಾಜಕೀಯ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ