ಎಚ್. ವಿಶ್ವನಾಥ್ ಅವರಿಗೆ ಪಕ್ಷ ಮುಂದೆ ಸ್ಥಾನಮಾನ ಕೊಡುತ್ತದೆ: ಜಗದೀಶ ಶೆಟ್ಟರ್
Team Udayavani, Jun 18, 2020, 2:17 PM IST
ಕೊಪ್ಪಳ: ಎಚ್ ವಿಶ್ವನಾಥ್ ಅವರಿಗೆ ಟಿಕೆಟ್ ಕೈ ತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷ ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕೊಟ್ಟು ಗೌರವಿಸಲಿದೆ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕೋರ್ ಕಮಿಟಿಯಿಂದ ಇವರ ಹೆಸರೂ ಸೇರಿದಂತೆ ಹಲವರ ಹೆಸರು ಚರ್ಚೆಗೆ ಬಂದಿದ್ದವು. ಪಕ್ಷದ ಹೈಕಮಾಂಡ್ ಒಂದು ನಿರ್ಧಾರ ಮಾಡಿ ಈಗ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಆ ಅಭ್ಯರ್ಥಿಗಳನ್ನ ನಾವು ಒಪ್ಪಲಿದ್ದೇವೆ. ವಿಶ್ವನಾಥ್ ಅವರು ನಮ್ಮನ್ನ ಬೆಂಬಲಿಸಿ ಬಂದಿದ್ದಾರೆ. ಪಕ್ಷ ಅವರನ್ನ ಎಂದೂ ಕೈ ಬಿಡಲ್ಲ. ಅವರಿಗೆ ಸೂಕ್ತವಾಗಿ ಗೌರವಿಸಲಿದೆ ಎಂದರು.
ಹೈಕಮಾಂಡ್ ಮಟ್ಟದಲ್ಲಿ ಏನು ನಡೆದಿದೆ ಎನ್ನುವ ವಿಚಾರವನ್ನ ನಾನು ಬಹಿರಂಗವಾಗಿ ಹೇಳಲು ಇಚ್ಛೆಪಡಲ್ಲ. ಪಕ್ಷ ಒಂದು ನಿರ್ಧಾರ ಕೈಗೊಂಡಿದೆ ಎಂದರೆ ನಾವು ಅದನ್ನ ಒಪ್ಪಲಿದ್ದೇವೆ. ಇದಕ್ಕಿಂತ ಹೆಚ್ಚೇನು ಮಾತಾಡಲ್ಲ ಎಂದರು.
ಇನ್ನೂ ಬಳ್ಳಾರಿ ಜಿಂದಾಲ್ ಕಾರ್ಖಾನೆಯಲ್ಲಿ ಕೋವಿಡ್ ಸೋಂಕು ಹೆಚ್ಚಳ ವಿಚಾರವಾಗಿ ಈಗಾಗಲೆ ಜಿಂದಾಲ್ ನಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಒಳಗೇ ಇರುವಂತೆ ಸೂಚನೆ ನೀಡಿದೆ. ಅಲ್ಲಿ ಒಳಗೆ ಯಾರೂ ಹೋಗುವಂತಿಲ್ಲ. ಅಲ್ಲಿನ ಕಾರ್ಮಿಕರು ಹೊರಗೆ ಯಾರೂ ಬರುವಂತಿಲ್ಲ ಎನ್ನುವ ಸೂಚನೆ ನೀಡಿದೆ. ಡಿಸಿ ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಇನ್ನೂ ಜಿಂದಾಲ್ ಸೇರಿದಂತೆ ಹಲವು ಸ್ಟೀಲ್ ಕಾರ್ಖಾನೆ ಬಂದ್ ಮಾಡಲು ಕಷ್ಟಸಾಧ್ಯ ಏಕೆಂದರೆ ಬಂದ್ ಮಾಡಲು ಆರು ತಿಂಗಳು ಬೇಕು. ಬಂದ್ ಆದ ಬಳಿಕ ಆರಂಭ ಮಾಡಲು ನಾಲ್ಕಾರು ತಿಂಗಳು ಬೇಕು. ಏಕಾಏಕಿ ಬಂದ್ ಮಾಡುವುದು ಕಷ್ಟ. ಆದರೆ ಕೈಗಾರಿಕೆಯೊಳಗೆ ಸೋಂಕು ನಿಯಂತ್ರಣಕ್ಕೆ ಏನೆಲ್ಲ ಕ್ರಮ ಕೈಗೊಳ್ಳಬೇಕು ಅದನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಈ ವೇಳೆ ಸಂಸದ ಸಂಗಣ್ಣ ಕರಡಿ, ಮುಖಂಡ ಅಮರೇಶ ಕರಡಿ ಸೇರಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!