ಜಗಜೀವನರಾಮ್ ಭವನ ನಿರುಪಯುಕ್ತ
Team Udayavani, Nov 20, 2019, 2:37 PM IST
ಕುಷ್ಟಗಿ: ಪಟ್ಟಣದ ಹೊರವಲಯದಲ್ಲಿರುವ ಡಾ|ಬಾಬು ಜಗಜೀವನರಾಮ್ ಭವನ ಉದ್ಘಾಟನೆ ಭಾಗ್ಯ ಕಂಡರೂ ನಿರುಪಯುಕ್ತವಾಗಿದ್ದು, ಸ್ಮಾರಕವಾಗಿ ನಿಂತಿದೆ.
ಸಮಾಜ ಕಲ್ಯಾಣ ಇಲಾಖೆಯ 2 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಈ ಬೃಹತ್ ಭವನವನ್ನು ಕಳೆದ ಜುಲೈ 9ರಂದು ಹಿಂದಿನ ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಇ. ತುಕಾರಾಮ್ ಲೋಕಾ ರ್ಪಣೆಗೊಳಿಸಿದ್ದರು. ಭವನ ಮಂಜೂರಿ ಮಾಡಿದ್ದ ಹಿಂದಿನ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಇದಕ್ಕೆ ಸಾಕ್ಷಿಯಾಗಿದ್ದರು. ಸದರಿ ಭವ್ಯ ಭವನಕ್ಕಾಗಿ ಜಮೀನು ಖರೀದಿ, ನಂತರ ಕಟ್ಟಡ ಕಾಮಗಾರಿಗೆ ತೋರಿದಷ್ಟು ಉತ್ಸುಕತೆಯನ್ನು ಕಟ್ಟಡ ಪೂರ್ಣಗೊಂಡ ಬಳಿಕ ಇಲ್ಲವಾಗಿದೆ.
ಭವನದ ಉದ್ಘಾಟನೆ ಸಮಾರಂಭ ಹೊರತು ಪಡಿಸಿದರೆ ಈವರೆಗೂ ಬಳಕೆಯಾಗದೇ ನಿರುಪಯುಕ್ತವಾಗಿದೆ. ಭವನ ಕಟ್ಟಡ ವಿಶಾಲ ವೇದಿಕೆ, ಸಭಾಂಗಣ, ಬಾಲ್ಕನಿ ವ್ಯವಸ್ಥೆ ಪ್ರತ್ಯೇಕ ಕೊಠಡಿ, ಬೆಳಕಿನ ವ್ಯವಸ್ಥೆ, ನೀರಿನ ವ್ಯವಸ್ಥೆ ಎಲ್ಲವೂ ಇದೆ. ತಹಶೀಲ್ದಾರ್ ಕಚೇರಿ ಹಿಂದುಗಡೆ ಇರುವ ಸದರಿ ಭವನ ಪಟ್ಟಣದ ಹೊರವಲಯದಲ್ಲಿದೆ. ಸಮಾಜ ಕಲ್ಯಾಣ ಇಲಾಖೆ ಅನುಮತಿ ನೀಡಿದರೂ ಭವನ ಬಳಕೆ ಮಾಡಲು ಯಾರೂ ಮುಂದೆ ಬಾರದೇ ಇರುವುದು ಅಚ್ಚರಿ ಮೂಡಿಸಿದೆ. ಸ
ತಾಲೂಕಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಗಳೂ ಸಹ ಈ ಭವನದಲ್ಲಿ ಸರ್ಕಾರ ಕಾರ್ಯಕ್ರಮ, ಮಹನೀಯರ ಜಯಂತಿ ಹಾಗೂ ತರಬೇತಿ ಇತ್ಯಾದಿ ಕಾರ್ಯಕ್ರಮಗಳಿಗೆ ಬಳಸಿಕೊಂಡಿಲ್ಲ. ಮದ್ಯ ವ್ಯಸನಿಗಳು ಕುಡಿದು ಬಾಟಲಿ ಬೀಸಾಡಿದ್ದು ಕಟ್ಟಡದ ಮೇಲುಸ್ತುವಾರಿ ಇಲ್ಲದಂತಾಗಿದೆ.
ಸಮಿತಿಗಾಗಿ ಪ್ರಸ್ತಾವನೆ: ಡಾ|ಬಾಬು ಜಗಜೀವನರಾಮ್ ಭವನ ನಿರ್ವಹಣೆಗೆ ತಾಲೂಕು ಮಟ್ಟದ ಸಮಿತಿ ರಚಿಸಲಾಗಿದ್ದು, ತಹಶೀಲ್ದಾರ್ ಅಧ್ಯಕ್ಷರಾಗಿದ್ದು, ತಾಪಂ ಇಒ, ಜಿಪಂ ಎಇಇ, ಪುರಸಭೆ ಮುಖ್ಯಾಧಿಕಾರಿ, ಲೋಕೋಪಯೋಗಿ ಇಲಾಖೆಯ ಎಇಇ ಸದಸ್ಯರಾಗಿದ್ದಾರೆ. ಮೂವರನ್ನು ನಾಮನಿರ್ದೇಶಿತ ಸದಸ್ಯರಾಗಿ ನೇಮಿಸುವುದು ವಿಳಂಬವಾಗಿದೆ. ಮಾದಿಗ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜ ಮೇಲಿನಮನಿ, ಕೃಷ್ಣಮೂರ್ತಿ ಟೆಂಗುಂಟಿ, ಹನುಮಂತಪ್ಪ ಇಂಡಿ ಅವರ ಹೆಸರನ್ನು ಕಳೆದ ನ.5ರಂದು ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಿಕೊಟ್ಟಿದೆ. ಈ ಸಮಿತಿ ನಾಮನಿರ್ದೇಶಿತ ಸದಸ್ಯರೆಂದು ಅನುಮೋದನೆ ಬಳಿಕ ಸದರಿ ಸಮಿತಿಗೆ ಡಾ| ಬಾಬು ಜಗಜೀವನರಾಮ್ ಭವನ ಹಸ್ತಾಂತರಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ತಾಲೂಕು ಅಧಿಕಾರಿ ದೇವಲ ನಾಯಕ್ ತಿಳಿಸಿದರು.
-ಮಂಜುನಾಥ ಮಹಾಲಿಂಗಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ