BJP ಸೇರ್ಪಡೆ ಶೆಟ್ಟರ್‌ ಗೌರವಕ್ಕೇ ಕುತ್ತು: ಶಿವರಾಜ ತಂಗಡಗಿ


Team Udayavani, Jan 26, 2024, 8:50 PM IST

BJP ಸೇರ್ಪಡೆ ಶೆಟ್ಟರ್‌ ಗೌರವಕ್ಕೇ ಕುತ್ತು: ಶಿವರಾಜ ತಂಗಡಗಿ

ಕೊಪ್ಪಳ: ಮಾಜಿ ಸಿಎಂ ಜಗದೀಶ ಶೆಟ್ಟರ್‌ ಮರಳಿ ಬಿಜೆಪಿ ಸೇರ್ಪಡೆಯಾದ ನಂತರ ಕಾಂಗ್ರೆಸ್‌ಗೇನು ಆಗಿಲ್ಲ.  ಆದರೆ ಶೆಟ್ಟರ ಗೌರವ ಕಡಿಮೆಯಾಗಿದೆ ಎಂದು ನನ್ನ ಅನಿಸಿಕೆ. ಮಾಜಿ ಸಿಎಂ ಆಗಿದ್ದವರು ಈ ರೀತಿ ನಡೆದುಕೊಳ್ಳಬಾರದಿತ್ತು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಶೆಟ್ಟರ್‌ ಅವರಂಥ ಹಿರಿಯರು ಈ ರೀತಿ ಮಾಡಬಾರದಿತ್ತು ಎನ್ನುವ ನೋವು ನಮ್ಮನ್ನು ಕಾಡುತ್ತದೆ. ನಮ್ಮಂಥವರು ಮಾಡಬೇಕಾಗಿತ್ತು. ಆದರೆ ಅವರು ಹೋಗಿದ್ದು ನೋವಾಗಿದೆ ಎಂದರು.

ಬರ ಪರಿಹಾರ ಹಣವನ್ನು ಈಗ ರೈತರ ಖಾತೆಗೆ ಹಾಕುತ್ತೇವೆ. ಆದರೆ ಕೇಂದ್ರ ಸರಕಾರವು ಬರ ಪರಿಹಾರ ನೀಡಬೇಕು. ಈ ಕುರಿತು ಸಂಸದರು ಮಾತನಾಡುತ್ತಿಲ್ಲ. ಇದು ನೋವಿನ ಸಂಗತಿ. ಕೇಂದ್ರ ಸರಕಾರಕ್ಕೆ ಬಡವರ ಬಗ್ಗೆ ಕಾಳಜಿಯಲ್ಲ. ಬಡವರಿಗೆ ಅಕ್ಕಿ ಕೊಡಿ ಎಂದರೆ ಕೊಡಲಿಲ್ಲ. ಆದರೆ ಮನೆ ಮನೆಗೆ ಮಂತ್ರಾಕ್ಷತೆ ಕೊಟ್ಟರು. ಸಿಎಂ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದಾಗ ಬರ ಕುರಿತು ಮಾತನಾಡಲು ಅವಕಾಶ ನೀಡಿಲ್ಲ. ಮೋದಿ ಕೇವಲ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಅವರಿಗೆ ರೋಡ್‌ ಶೋಗೆ ಟೈಂ ಇದೆ. ಆದರೆ ಜನರ, ರೈತರ ಸಮಸ್ಯೆ ಕೇಳಲು ಸಮಯವಿಲ್ಲ ಎಂದರು.

ಸಚಿವ ರಾಜಣ್ಣನವರ “ನಾವೇನು ಹೈಕಮಾಂಡ್‌ ಗುಲಾಮರಾ’ ಎಂಬ ಹೇಳಿಕೆ ಬಗ್ಗೆ ಗೊತ್ತಿಲ್ಲ. ಪ್ರಜಾಪ್ರಭುತ್ವ ಏನಾದರೂ ಇದ್ದರೆ ಅದು ಕಾಂಗ್ರೆಸ್ಸಿನಲ್ಲಿ ಮಾತ್ರ. ಕೇಂದ್ರದಲ್ಲಿ 10 ವರ್ಷದ ಆಡಳಿತ ಮಾಡಿದ ಮೋದಿ ತಮ್ಮ ಸಂಸದರೊಂದಿಗೆ ಮಾತನಾಡಿ, ಸಮಸ್ಯೆ ಏನು ಎಂದು ಒಮ್ಮೆಯಾದರೂ ಕೇಳಿದ್ದಾರಾ? ಎಂದು ಪ್ರಶ್ನಿಸಿದರು.

ರಾಹುಲ್‌ ಯಾತ್ರೆಯಿಂದ ಬಿಜೆಪಿಗೆ ನಡುಕ ಹುಟ್ಟುತ್ತಿದೆ. ಅದಕ್ಕಾಗಿ ತಡೆಯುವ ಯತ್ನ ಮಾಡಿದ್ದಾರೆ. ಜನತೆ ನಿಮಗೆ ಮತ ಹಾಕಿದ್ದು ಜನರ ಸೇವೆ ಮಾಡಲು. ಆದರೆ ನನ್ನ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದಲ್ಲ ಎಂದು ರಾಮ ಒಂದಿಲ್ಲ ಒಂದು ದಿನ ಬಿಜೆಪಿಯವರಿಗೆ ಕನಸಿನಲ್ಲಾದರೂ ಬಂದು ಶಾಪ ಕೊಡಬಹುದು ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರು ತಮ್ಮೂರಿನಲ್ಲಿ ರಾಮ ಮಂದಿರ ನಿರ್ಮಿಸಿದ್ದಾರೆ. ರಾಮನ ಬಗ್ಗೆ ಅವರು ವಿರೋಧ ಮಾಡಿಲ್ಲ. ನಾವು ಕೆಲಸ ಮಾಡಿದ್ದೇವೆ. ಪ್ರಚಾರ ತೆಗೆದುಕೊಂಡಿಲ್ಲ. ಆನೆಗೊಂದಿ ಹಾಗೂ ಕನಕಗಿರಿ ಉತ್ಸವಕ್ಕೆ ಪ್ರಸ್ತಾವನೆ ತರಿಸಿಕೊಂಡಿದ್ದೇನೆ. ಈಗಾಗಲೇ 3.50 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಅಂಜನಾದ್ರಿಗೆ ಈಗಾಗಲೇ 100 ಕೋಟಿ ರೂ. ನೀಡಲಾಗಿದೆ. ಇನ್ನೂ 100 ಕೋಟಿ ನೀಡಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.