ಜನರ ಸೇವೆಗೆ ನಿಂತ ಕಲಾಲ ಸಹೋದರರು: ಪ್ರತಿಮನೆಗೂ ಕಿಟ್ ವಿತರಣೆ
Team Udayavani, May 29, 2021, 12:38 PM IST
ಗಂಗಾವತಿ: ಜನಿಸಿದ ಊರು ಸ್ವರ್ಗಕ್ಕೆ ಸಮ ಎಂದು ಹೇಳಲಾಗುತ್ತದೆ. ತಾಲೂಕಿನ ಮಲ್ಲಾಪೂರದಲ್ಲಿ ಜನಿಸಿದ ನಾಲ್ವರು ಕಲಾಲ ಸಹೋದರರು ಇಡೀ ಊರಿಗೆ ಆಹಾರದ ಕಿಟ್ ವಿತರಿಸಿ ಸಾರ್ಥಕ ಸೇವೆ ಮಾಡಿದ್ದಾರೆ.
ಮಲ್ಲಾಪೂರ ಗ್ರಾಮದ ಮೂಲ ನಿವಾಸಿಗಳಾದ ಮಂಜುನಾಥ ಕಲಾಲ, ಸಿದ್ದೋಜಿರಾವ್ ಕಲಾಲ, ಮಲ್ಲಿಕಾರ್ಜುನ ಕಲಾಲ, ಪರಶುರಾಮ ಕಲಾಲ ಸಹೋದರರು ತೀವ್ರ ಬಡತನದಿಂದ ದುಡಿಯಲು ಹೊಸಪೇಟೆಯ ಜಿಂದಾಲ್ ತೋರಣಗಲ್ಲು ಗ್ರಾಮಕ್ಕೆ ತೆರಳಿ ಅಲ್ಲಿ ಉದ್ಯಮ ನಡೆಸಿದ್ದಾರೆ. ಆದರೂ ಜನಿಸಿದ ಊರನ್ನು ಕಲಾಲ ಸಹೋದರರು ಎಂದಿಗೂ ಮರೆತಿಲ್ಲ. ಪ್ರತಿವರ್ಷ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ, ಪ್ರೌಢಶಾಲೆಗೆ ಡಿಜಿಟಲ್ ಬೋರ್ಡ್ ಕಂಪ್ಯೂಟರ್ ವಿತರಣೆ ಮಾಡಿದ್ದಾರೆ. ಇದೀಗ ಲಾಕ್ ಡೌನ್ ಸಂಕಷ್ಟದಲ್ಲಿ ಮಲ್ಲಾಪೂರ-ರಾಂಪೂರ ಗ್ರಾಮದ ಪ್ರತಿ ಮನೆಗೂ ಅಕ್ಕಿ ಬೇಳೆ ಸೇರಿ ಆಹಾರದ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಶ್ಲಾಘನೀಯ ಕಾರ್ಯ: ಕಲಾಲ ಸಹೋದರರು ಲಾಕ್ ಡೌನ್ ಸಂದರ್ಭದಲ್ಲಿ ಪ್ರತಿಮನೆಗೂ ರೇಶನ್ ಕಿಟ್ ವಿತರಿಸಿ ಮಾದರಿಯಾಗಿದ್ದಾರೆ. ಹುಟ್ಟಿದ ಊರನ್ನು ಎಂದಿಗೂ ಮರೆಯದ ಕಲಾಲ ಸಹೋದರರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಶಾಸಕ ಪರಣ್ಣ ಮುನವಳ್ಳಿ ಸಾರ್ವಜನಿಕರಿಗೆ ಆಹಾರದ ಕಿಟ್ ವಿತರಿಸಿ ಶ್ಲಾಘಿಸಿದರು.
ಇದನ್ನೂ ಓದಿ:ಕೋವಿಡ್ ನಿಂದ ಮರಣ ಹೊಂದಿದ ಆಶಾ, ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಿ
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ, ಪಿಎಸ್ಐ ಜೆ.ದೊಡ್ಡಪ್ಪ, ಇಒ ಡಾ.ಮೋಹನ ಕುಮಾರ, ಎಚ್.ಸಿ.ಯಾದವ ವಕೀಲ, ಆನಂದಗೌಡ, ಅಂಜಿನಿಗೌಡ, ಸುಂಕಪ್ಪ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ