ಕುಡಿವ ನೀರಿನ ಯೋಜನೆಗೆ ಗ್ರಹಣ


Team Udayavani, Jan 28, 2019, 10:16 AM IST

28-january-20.jpg

ಕನಕಗಿರಿ: ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಸರ್ಕಾರ ಪ್ರತಿ ವರ್ಷವೂ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದೆ. ಆದರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಇಲ್ಲಿನ ಕುಡಿಯುವ ನೀರಿನ ಯೋಜನೆ 7 ವರ್ಷಗಳಾದರೂ ಅರ್ಧವೂ ಮುಗಿದಿಲ್ಲ.

ಹೌದು. ಹೇರೂರು ಮತ್ತು ಹುಲಿಹೈದರ್‌ ಜಿಪಂ ವ್ಯಾಪ್ತಿಯ 27 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ರಾಜೀವ್‌ ಗಾಂಧಿ ಶುದ್ಧ ಕುಡಿಯುವ ನೀರಿನ ಯೋಜನೆ ಹಳ್ಳ ಹಿಡಿಯುತ್ತಿದೆ. ಬೇಸಿಗೆಯಲ್ಲಿ ಹಲವಾರು ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ ಸಾಮಾನ್ಯವಾಗಿದೆ. ಇದನ್ನರಿತ ಮಾಜಿ ಸಚಿವ ಶಿವರಾಜ ತಂಗಡಗಿ 27 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಗೆ 2012-13ನೇ ಸಾಲಿನಲ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ ಮಹತ್ವದ ಯೋಜನೆಗೆ ಚಾಲನೆ ನೀಡಿದ್ದರು. ಆದರೆ ಭೂಮಿಪೂಜೆ ನೆರವೇರಿಸಿ 7 ವರ್ಷಗಳಾದರೂ ಅರ್ಧದಷ್ಟು ಕಾಗಮಾರಿ ಮುಗಿದಿಲ್ಲ.

ಇದು 21 ಕೋಟಿ ರೂ. ವೆಚ್ಚದಲ್ಲಿ ಹೇರೂರು ಮತ್ತು ಹುಲಿಹೈದರ್‌ ಜಿಪಂ ವ್ಯಾಪ್ತಿಯ 27 ಗ್ರಾಮಗಳಿಗೆ ತುಂಗಭದ್ರಾ ಡ್ಯಾಮ್‌ನಿಂದ ನೀರು ಪೂರೈಸುವ ಯೋಜನೆ ಇದಾಗಿದೆ. ಸುಳೇಕಲ್ಲ ಹತ್ತಿರ 21 ಎಕರೆ ಪ್ರದೇಶದಲ್ಲಿ ಕೆರೆ ನಿರ್ಮಿಸಿ ಎಡದಂಡೆ ಕಾಲುವೆಯಿಂದ ಪೈಪ್‌ಲೈನ್‌ ಮೂಲಕ ಕೆರೆ ತುಂಬಿಸುವುದು, ನಂತರ ನೀರು ಶುದ್ಧೀಕರಿಸಿ ಗ್ರಾಮಗಳಿಗೆ ಪೈಪ್‌ಲೈನ್‌ ಮೂಲಕ ಪೂರೈಸುವ ಯೋಜನೆ ಇದ್ದಾಗಿದೆ. ಆದರೆ ಅಧಿಕಾರಿಗಳು ಮತ್ತು ಗುತ್ತೆದಾರರ ನಿರ್ಲಕ್ಷ್ಯದಿಂದ ಯೋಜನೆ ಅರ್ಧಕ್ಕೆ ನಿಂತಿದೆ. ಕಾಮಗಾರಿಗೆ ನಿಗದಿಪಡಿಸಿದ ಅವಧಿಯೊಳಗೆ ಗ್ರಾಮಗಳಿಗೆ ಪೈಪ್‌ಲೈನ್‌ ಅಳವಡಿಸಲಾಗಿದೆ. ಕೆರೆ ನಿರ್ಮಾಣ, ಟ್ಯಾಂಕ್‌ ನಿರ್ಮಾಣ, ಪಂಪ್‌ಹೌಸ್‌, ಮೇಲ್ಮಟ್ಟದ ಜಲಾಗಾರ ಸೇರಿದಂತೆ ವಿವಿಧ ಕೆಲಸಗಳು ಇನ್ನೂ ಪ್ರಾರಂಭವಾಗಿಲ್ಲ. ಗುತ್ತಿಗೆಯನ್ನು ಬಳ್ಳಾರಿಯ ಶ್ರೀನಿವಾಸ ಕನ್‌ಸ್ಟ್ರಕ್ಷನ್ಸ್‌ನವರು ಪಡೆದಿದ್ದಾರೆ.

ಇಚ್ಛಾಶಕ್ತಿ ಕೊರತೆ: ಈ ಭಾಗದ ಜಿಪಂ ಸದಸ್ಯರು ಒಂದೇ ಒಂದು ಬಾರಿಯೂ ರಾಜೀವ್‌ ಗಾಂಧಿ ಶುದ್ಧ ಕುಡಿಯುವ ನೀರಿನ ಯೋಜನೆಯ ಬಗ್ಗೆ ಜಿಪಂ ಸಾಮಾನ್ಯ ಸಭೆಯಲ್ಲಿ ಚಕಾರ ಎತ್ತಿಲ್ಲ್ಲ. ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಕಾಮಗಾರಿಯು 7 ವರ್ಷಗಾಳದರೂ ಅರ್ಧದಷ್ಟು ಮುಗಿದಿಲ್ಲ. ಇದರಿಂದ ಜನರಿಗೆ ಶುದ್ಧ ಕುಡಿಯುವ ನೀರು ಸಿಗದೇ, ಫ್ಲ್ಲೋರೈಡ್‌ಯುಕ್ತ ನೀರೇ ಗತಿಯಾಗಿದೆ. ಬೇಸಿಗೆ ಸಮೀಪಿಸುತ್ತಿದ್ದು, 27 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತೆ ಉಲ್ಬಣಗೊಳ್ಳಲಿದೆ!

ಯೋಜನೆಗೆ ಒಳಪಡುವ ಗ್ರಾಮ: ಹೇರೂರು, ಗೋನಾಳ್‌, ಬಾಪಿರೆಡ್ಡಿ ಕ್ಯಾಂಪ್‌, ಡಾಕ್ಟರ್‌ ಕ್ಯಾಂಪ್‌, ಕೇಸರಹಟ್ಟಿ, ಕೆಸಕ್ಕಿ ಹಂಚಿನಾಳ, ಕೆಸಕ್ಕಿ ಹಂಚಿನಾಳ ಕ್ಯಾಂಪ್‌, ಗುಳದಾಳ, ಮರಕುಂಬಿ, ಹಣವಾಳ, ಹಣವಾಳ ಕ್ಯಾಂಪ್‌, ಸೊಂಗನಾಳ, ಬಟ್ಟರ ನರಸಾಪುರ, ವಡ್ಡರಹಟ್ಟಿ, ವಡ್ಡರಹಟ್ಟಿ ಕ್ಯಾಂಪ್‌, ಹುಲಿಹೈದರ್‌, ಹೊಸಗುಡ್ಡ, ಕನಕಾಪುರ, ಮಲ್ಲಿಗೆವಾಡ, ನೀರಲೂಟಿ, ಲಾಯದಹುಣಸಿ, ಹನುಮನಾಳ, ಸಿರಿವಾರ, ಗೋಡಿನಾಳ, ಕೆ. ಕಾಟಾಪುರ, ಬೈಲಕ್ಕಂಪುರ, ಹಿರೇಖೇಡಾ, ಚಿಕ್ಕಖೇಡಾ, ವರನಖೇಡ ಗ್ರಾಮಗಳು ಈ ಯೋಜನೆಗೆ ಒಳಪಡಲಿವೆ.

ರಾಜೀವ್‌ ಗಾಂಧಿ ಕುಡಿಯುವ ನೀರಿನ ಯೋಜನೆಗೆ 36 ಎಕರೆ ಭೂಮಿ ಅವಶ್ಯವಿದ್ದು, ಭೂಮಿಯನ್ನು ಮಂಜೂರು ಮಾಡಿಲ್ಲ. ಸದ್ಯ 21 ಎಕರೆ ಭೂವಿ ನೀಡುವುದಾಗಿ ಕಂದಾಯ ಇಲಾಖೆಯವರು ಹೇಳಿದ್ದಾರೆ. ಕಾಮಗಾರಿಗೆ ನಿಗದಿ ಪಡಿಸಿದ ಅನುದಾನವಿದೆ. ಆದರೆ ಕಾಮಗಾರಿ ಬೇಕಾದ ಭೂಮಿ ಮಂಜೂರಾಗಿಲ್ಲ. ಆದ್ದರಿಂದ ಕಾಮಗಾರಿಯನ್ನು ಪ್ರಾರಂಭಿಸಿಲ್ಲ. ಈಗಾಗಲೇ ಪೈಪ್‌ಲೈನ್‌ ಕೆಲಸ, ಮೇಲ್ತೊಟ್ಟಿ ಕೆಲಸ ಕೊನೆಯ ಹಂತದಲ್ಲಿದೆ.
•ಚಿದಾನಂದ, ಕಿರಿಯ ಅಭಿಯಂತರ

ರಾಜೀವ್‌ ಗಾಂಧಿ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿಯ ಕೊರತೆ ಇದ್ದು, ಈಗಾಲೇ 21 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಕೆರೆ ನಿರ್ಮಾಣ ಮಾಡಲು ನೀಲ ನಕ್ಷಾಶೆ ತಯಾರಿಸಿ ಅನುಮೋದನೆ ಕಳಿಸಲಾಗಿದೆ. ಶೀಘ್ರವೇ ಕಾಮಗಾರಿಯನ್ನು ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿದೆ.
•ಬಸವರಾಜ ದಢೇಸುಗೂರು, ಶಾಸಕ

•ಶರಣಪ್ಪ ಗೋಡಿನಾಳ 

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.