ಕಾಮಗಾರಿ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿಸಿ ಹಣ ಲೂಟಿ ಮಾಡಿದ ಪಟ್ಟಣ ಪಂಚಾಯತ್: ಕನಕಪ್ಪ ಆರೋಪ
Team Udayavani, Feb 15, 2024, 9:14 AM IST
ಕನಕಗಿರಿ: ಪಟ್ಟಣ ಪಂಚಾಯಿತಿ ವಿವಿಧ ಕಾಮಗಾರಿಗಳ ಹೆಸರಿನಲ್ಲಿ ಬೋಗಸ್ ಬಿಲ್ ಸೃಷ್ಟಿಸಿ ಸರ್ಕಾರದ ಅನುದಾನ ಹಾಗೂ ಸಾರ್ವಜನಿಕರ ತೆರಿಗೆ ಹಣವನ್ನು ಲೂಟಿ ಮಾಡಲಾಗಿದೆ ಎಂದು ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ. ಕನಕಪ್ಪ ದೂರಿದರು.
ಇಲ್ಲಿನ ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಎನ್.ಎ ಹಾಗೂ ಪ್ರಾಧಿಕಾರಗೊಳ್ಳದ ಭೂ ಮಾಲೀಕರ ಜಾಗದಲ್ಲಿಯೂ ಸಿಸಿ ರಸ್ತೆ, ಚರಂಡಿ ಇತರೆ ಕಾಮಗಾರಿ ಮಾಡಿ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಹಳೆಯ ಎಂಜಿನಿಯರ್ ನಿವಾಸದ ಪರಿಸರದಲ್ಲಿನ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ವರ್ಗಾವಣೆ ಮಾಡಲಾಗಿದೆ ಇಂಥ ಅನೇಕ ಅಕ್ರಮಗಳು ಪಂಚಾಯಿತಿಯಲ್ಲಿ ನಡೆದಿವೆ ಎಂದು ದೂರಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೊನಿ ಅಭಿವೃದ್ಧಿ ಹೆಸರಿನಲ್ಲಿಯೂ ಸಾಕಷ್ಟು ಹಣವನ್ನು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸೇರಿಕೊಂಡು ಕೊಳ್ಳೆ ಹೊಡೆದಿದ್ದಾರೆ, ಮೇಲಾಧಿಕಾರಿಗಳು ಒಂದು ದಿನ ಸಹ ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಿದರು. ರಾಜಬೀದಿಯ ಡಾಂಬರೀಕರಣ ಕಾಮಗಾರಿಗೆ 2.2 ಕೋಟಿ ರೂಪಾಯಿ ಮಂಜೂರು ಆಗಿ ಕೆಲಸ ನಡೆಯುತ್ತಿದ್ದು ಅವೈಜ್ಞಾನಿಕವಾಗಿದೆ, ಕ್ರಿಯಾಯೋಜನೆ ಪ್ರಕಾರ ಕೆಲಸ ನಡೆಯುತ್ತಿಲ್ಲ, ತೇರು ಸಂಚರಿಸುವ ಜಾಗದಲ್ಲಿ ಪುಟಪಾತ್ ಏಕೆ ಬೇಕು ಎಂದು ಅವರು ಪ್ರಶ್ನಿಸಿದರು.
ಮೂಲೆ ಸೇರಿದ ವಾಹನಗಳು :
ಪಟ್ಟಣ ಪಂಚಾಯಿತಿಯ ಕೆಲಸಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಧೂಳು ತೆಗೆಯುವ ವಾಹನ, ಶೌಚಾಲಯ ಸ್ವಚ್ಛಗೊಳಿಸುವ ದುಬಾರಿ
ವಾಹನಗಳನ್ನು ಖರೀದಿ ಮಾಡಿದ್ದರೂ ಅವುಗಳೆಲ್ಲವು ಮೂಲೆ ಸೇರಿವೆ, ಸಾರ್ವಜನಿಕರ ಕೆಲಸಗಳಿಗೆ ಬಳಕೆ ಆಗುತ್ತಿಲ್ಲ ಎಂದು ಆಪಾದಿಸಿದರು. ವಾಹನಗಳ ಖರೀದಿಯಲ್ಲಿಯೂ ಅವ್ಯವಹಾರವಾಗಿದೆ ಎಂದು ದೂರಿದರು.
ಇದೇ ಸ್ಥಳದಲ್ಲಿ ಒಂದು ವರ್ಷದ ಹಿಂದೆ ನಡೆದ ಪೈಪ್ ಲೈನ್ ಕಾಮಗಾರಿಯನ್ನು ಡಾಂಬರೀಕರಣದ ಹೆಸರಿನಲ್ಲಿ ಈಗ ಕಿತ್ತಿ ಹಾಕಿ ಸರ್ಕಾರದ 25 ಲಕ್ಷ ರೂಪಾಯಿ ಅನುದಾನವನ್ನು ಹಾಳು ಮಾಡಲಾಗಿದೆ ಎಂದು ತಿಳಿಸಿದರು, ಹಾಳು ಮಾಡಿದ ಹಣವನ್ನು ಅಧಿಕಾರಿಗಳಿಂದ ವಸೂಲಿ ಮಾಡಬೇಕೆಂದು ಆಗ್ರಹಿಸಿದರು.
ಪಟ್ಟಣದ ಎಲ್ಲಾ ವಾರ್ಡ್ ಗಳಿಗೂ ಶುದ್ದ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ, ಸಾರ್ವಜನಿಕರಿಗೆ ಫಾರ್ಮ್ -3 ಸುಲಭವಾಗಿ ಸಿಗುತ್ತಿಲ್ಲ, ಹಣ ನೀಡಿದರೆ ಮಾತ್ರ ಬೇಗನೆ ಸೌಲಭ್ಯ ನೀಡಲಾಗುತ್ತಿದೆ ಇದರಿಂದ ಬಡವರು ಆಡಳಿತದ ವಿರುದ್ದ ರೋಸಿ ಹೋಗಿದ್ದಾರೆ ಎಂದು ಹೇಳಿದರು.
ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಸಾರ್ವಜನಿಕರ ಸಭೆ ಕರೆಯದೆ ವಾರ್ಷಿಕ ಬಜೆಟ್ ರೂಪಿಸಿದ್ದಾರೆ, ತಮಗೆ ಬೇಕಾದ ಕ್ರಿಯಾಯೋಜನೆ ರೂಪಿಸಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿದರು. ಆರೋಗ್ಯ ನಿರೀಕ್ಷಕರನ್ನು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನಾಗಿ ಮಾಡಲಾಗಿದ್ದು ಅಭಿವೃದ್ಧಿ ಕೆಲಸಗಳು ಶೂನ್ಯವಾಗಿವೆ,
ತೆರಿಗೆ ಹಣ ಹೆಚ್ಚಳವಾಗಿದ್ದರೂ ಹಳೆಯ ಗ್ರಾಮ ಪಂಚಾಯಿತಿ ವ್ಯವಸ್ಥೆಯ ರೀತಿಯಲ್ಲಿ ಆಡಳಿತ ನಡೆಯುತ್ತಿದೆ ಎಂದು ತಿಳಿಸಿದರು. ಮುಖ್ಯಾಧಿಕಾರಿ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: Victory Rally: ರ್ಯಾಲಿ ವೇಳೆ ಸಾಮೂಹಿಕ ಗುಂಡಿನ ದಾಳಿ 1 ಮೃತ್ಯು, 21 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು