ಕೋತಿಗಳ ಕಾಟಕ್ಕೆ ನಲುಗಿದ ಯತ್ನಟ್ಟಿ ಗ್ರಾಮಸ್ಥರು!


Team Udayavani, Jan 16, 2020, 2:38 PM IST

16-January-17

ಕನಕಗಿರಿ: ತಾಲೂಕಿನ ಕೊನೆಯ ಭಾಗದ ಯತ್ನಟ್ಟಿ ಗ್ರಾಮಸ್ಥರಿಗೆ ಕಳೆದ ಮೂರು ತಿಂಗಳಿಂದಕೋತಿಗಳ ಕಾಟ ಹೆಚ್ಚಾಗಿದ್ದು, ಇದರಿಂದ ತಮ್ಮ ಕೃಷಿ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದಾರೆ. ಗ್ರಾಮದ ಸುತ್ತಮುತ್ತ ಇರುವ ಜಮೀನಿಗಳಲ್ಲಿ ಹಾಕಲಾಗಿರುವ ವಿವಿಧ ಬೆಳೆಗಳನ್ನು 30 ಕೋತಿಗಳ ಗುಂಪು ಕಳೆದ ಮೂರು ತಿಂಗಳಿಂದ ಹಾಳು ಮಾಡುತ್ತಿವೆ. ಇನ್ನು ಕೋತಿಗಳನ್ನು ಓಡಿಸಲು ಹೋದವರ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿವೆ. ಇದರಿಂದ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗಿ ಬೆಳೆದ ಬೆಳೆಯನ್ನು ಸಂರಕ್ಷಣೆ ಮಾಡಲು ಭಯ ಭೀತರಾಗಿದ್ದಾರೆ.

ಕೋತಿಗಳನ್ನು ಹಿಡಿಯುವಂತೆ ಹಲವಾರು ಬಾರಿ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಕೋತಿಗಳಿಂದ ಗಾಯಗೊಂಡವರಾದ ನಾಗಪ್ಪ, ಶಶಿಧರ.

ಕೋತಿಗಳನ್ನು ಹಿಡಿಯಲು ಅರಣ್ಯ ಇಲಾಖೆಯಲ್ಲಿ ಯಾವುದೇ ಅನುದಾನವಿಲ್ಲ. ಗ್ರಾಮಸ್ಥರೆಲ್ಲ ಕೂಡಿ 5 ಸಾವಿರ ರೂ. ಹಣ ನೀಡಬೇಕು. ಇಲ್ಲವೇ ಗ್ರಾ.ಪಂ ಅನುದಾನವನ್ನು ನೀಡಿದರೆ ಮಾತ್ರ ಕೋತಿಗಳನ್ನು ಹಿಡಿಯಲು ಬೋನಿನ ವ್ಯವಸ್ಥೆ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಇದರಿಂದ ನಮ್ಮಗೆ ದಿಕ್ಕೆ ತೋಚದಂತಾಗಿದೆ ಎನ್ನುತ್ತಾರೆ ಗ್ರಾಮದ ಯುವಕ ಮಹಾಂತೇಶ ಹಿರೇಮಠ.

ಹರಸಾಹಸ: ಜಮೀನುಗಳಿಗೆ ಬೇರೆ ಕೋತಿಗಳನ್ನು ಓಡಿಸಲು ಗ್ರಾಮದ ರೈತರು ಹರಸಾಹಸ ಪಡುತ್ತಿದ್ದಾರೆ. ಜಮೀನುಗಳಲ್ಲಿ ಒಬ್ಬರೇ ಇದ್ದಾಗ ಕೋತಿಗಳ ಗುಂಪು ಮನುಷ್ಯರ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿವೆ. ಇದರಿಂದ ಒಬ್ಬರೇ ತಮ್ಮ ಜಮೀನುಗಳಿಗೆ ಹೋಗಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಕೊಡಲೇ ಸಂಬಂಧಿಸಿ ಅಧಿಕಾರಿಗಳು ಗ್ರಾಮಸ್ಥರ ಮೇಲೆ ದಾಳಿ ಮಾಡುತ್ತಿರುವ ಕೋತಿಗಳನ್ನು ಹಿಡಿದು ಬೇರೆ ಕಡೆ ರವಾನೆ ಮಾಡಬೇಕು ಎಂದು ಯತ್ನಟ್ಟಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಯತ್ನಟ್ಟಿ ಗ್ರಾಮಸ್ಥರ ಮೇಲೆ ಕೋತಿಗಳು ದಾಳಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಕೋತಿಗಳು ರೈತರು ಜಮೀನಿಗೆ ತೆರಳಿದಾಗ ದಾಳಿ ಮಾಡುತ್ತಿವೆ. ಜಮೀನಿನಲ್ಲಿ ಆದ ಘಟನೆಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಗ್ರಾಮಸ್ಥರಿಗೆ ಸಹಾಯ ಮಾಡಲಾಗುವುದು.
ದಸ್ತಗಿರಿಸಾಬ,
ರಡೋಣಿ, ಪಿಡಿಒ.

ಯತ್ನಟ್ಟಿ ಗ್ರಾಮಸ್ಥರು ಮೂರು ಬಾರಿ ಕೋತಿಗಳ ದಾಳಿ ಬಗ್ಗೆ ದೂರು ನೀಡಿದ್ದಾರೆ. ಆದರೆ ಕೋತಿಗಳು ಹಿಡಿಯುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಇಲಾಖೆಯಿಂದ ಯಾವುದೇ ಅನುದಾನವಿಲ್ಲ. ಗ್ರಾಪಂನಲ್ಲಿ ಅನುದಾನವಿದ್ದು, ಗ್ರಾಪಂ ವತಿಯಿಂದ ಕೋತಿಗಳನ್ನು ಹಿಡಿದು ಬೇರೆ ಕಡೆ ರವಾನೆ ಮಾಡಬಹುದು. ಇಲಾಖೆಯಿಂದ ಸಹಕಾರ ನೀಡಲಾಗುವುದು.
ಹನುಮಂತಪ್ಪ,
ಉಪ ವಲಯ ಅರಣ್ಯಾಧಿಕಾರಿ. ಕನಕಗಿರಿ

„ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.