ರಸ್ತೆ ದುರಸ್ತಿಗೆ ಒತ್ತಾಯಿಸಿ ಕನ್ನಡ ಸೇನೆ ಪ್ರತಿಭಟನೆ
Team Udayavani, Oct 1, 2019, 3:00 PM IST
ಗಂಗಾವತಿ: ತಾಲೂಕಿನ ಶ್ರೀ ರಾಮನಗರದಿಂದ ಕೋಟಯ್ಯ ಕ್ಯಾಂಪ್ ಮೂಲಕ ಕನಕಗಿರಿ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಹದಗೆಟ್ಟಿದ್ದು, ಹಲವು ದಿನಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಕನ್ನಡ ಸೇನೆ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ನಿಂತು ಶಾಸಕರು, ಸಂಸದರವಿರುದ್ಧ ಘೋಷಣೆ ಕೂಗಿದರು. ಸಂಘಟನೆಯ ಮುಖಂಡ ಭಾಸ್ಕರರೆಡ್ಡಿ ಮಾತನಾಡಿ, ಈ ರಸ್ತೆ ಶ್ರೀ ರಾಮನಗರ ಮತ್ತು ಕನಕಗಿರಿಗೆ ಸಂಪರ್ಕ ಕಲ್ಪಿಸುತ್ತದೆ. ಹಲವು ವರ್ಷಗಳಿಂದ ಹದಗೆಟ್ಟ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಿಸಬೇಕು. ಈ ರಸ್ತೆಯಲ್ಲಿ ಸರಕಾರಿ ಆಸ್ಪತ್ರೆ, ಶಾಲಾ-ಕಾಲೇಜು ಹಾಗೂ ಹತ್ತು ಹಲವು ಹಳ್ಳಿಗಳಿದ್ದು ಜನ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ