ಸಾಹಿತ್ಯ ಚಟುವಟಿಕೆ ಜೀವಂತವಾಗಿರಿಸಿದೆ ಕಸಾಪ: ಬಿಳಿಎಲೆ

ಸಾಹಿತ್ಯ ಪರಿಷತ್ತಿನ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ ­; ಸಂವಿಧಾನ ವ್ಯವಸ್ಥೆಗೆ ಶರಣರ ಚಟುವಟಿಕೆಗಳೇ ಪ್ರೇರಣೆ

Team Udayavani, Jun 2, 2022, 2:16 PM IST

13

ಕೊಪ್ಪಳ: ಕನ್ನಡ ಸಾಹಿತ್ಯ ಪರಿಷತ್‌ ಸಾಹಿತ್ಯದ ಚಟುವಟಿಕೆಗಳನ್ನು ಇಂದಿಗೂ ಜೀವಂತವಾಗಿರಿಸಿದೆ ಎಂದು ಪ್ರೊ| ಶರಣಬಸಪ್ಪ ಬಿಳಿಎಲೆ ಅವರು ಹೇಳಿದರು.

ನಂದೀಶ್ವರ ಶಾಲೆ ನಂದಿ ನಗರದಲ್ಲಿ ನಡೆದ ಕಸಾಪ ಜಿಲ್ಲಾ, ತಾಲೂಕು ಸಾಹಿತ್ಯ ಪರಿಷತ್‌ನಿಂದ ಕಸಾಪ ದತ್ತಿ ಉಪನ್ಯಾಸ, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಸಾಪದಲ್ಲಿ ಶ್ರಮಿಸಿದ ಹಿರಿಯರ ಆಶಯದಂತೆ, ಅವರ ಚಿಂತನೆ ಜೀವ ತುಂಬುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ತು ಮುಂದಿದೆ. ದತ್ತಿ ಕಾರ್ಯಕ್ರಮ ಆಯೋಜಿಸುವ ಮೂಲಕ ಸಾಹಿತ್ಯ ಚಟುವಟಿಕೆಗಳನ್ನು ಇಂದಿಗೂ ಜೀವಂತವಾಗಿಸಿದೆ. ಇನ್ನೂ ಹೆಚ್ಚು ಹೆಚ್ಚು ದತ್ತಿ ಸ್ಥಾಪಿಸುವ ಮೂಲಕ ಸಾಹಿತ್ಯ ಪರಿಷತ್ತಿನ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ರಾಜೇಶ ಸಸಿಮಠ ಮಾತನಾಡಿ, ವಚನ ಸಾಹಿತ್ಯ ಅನುಭವ ಜನ್ಯವಾದದ್ದು, ಸರ್ವಕಾಲಿಕವಾಗಿ ಜನ ಬದುಕಿನ ಮಜಲುಗಳಲ್ಲಿ ಹಾಸು ಹೊಕ್ಕಾಗಿದೆ. ಎಲ್ಲ ರೀತಿಯ ಸಾಹಿತ್ಯ ಪ್ರಕಾರಗಳಲ್ಲಿ ತನ್ನ ಛಾಪು ಮೂಡಿಸಿರುವ ಮೂಲಕ ಜನ ಜನಿತವಾಗಿವೆ ಎಂದರು.

ಬಿ.ಪಿ. ಮರಿಗೌಡ ಮಾತನಾಡಿ, ಇಂದಿನ ಸಂವಿಧಾನ ವ್ಯವಸ್ಥೆಗೆ ಅನುಭವ ಮಂಟಪದ ಶರಣರ ಚಟುವಟಿಕೆಗಳೇ ಪ್ರೇರಣೆಯಾಗಿದೆ. ವಚನ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ ಬಗೆ ಇಂದಿನ ಸಮಾಜದಲ್ಲಿನ ಮೌಡ್ಯ, ಜಡತೆ ಹೋಗಲಾಡಿಸಲು ಪ್ರೇರಣೆಯಾಗಲಿ ಎಂದರು.

ದಿ. ಮರಿಗೌಡ ಮಲ್ಲನಗೌಡರ ಸ್ಮಾರಕ ದತ್ತಿ ಪ್ರಶಸ್ತಿ ಹಾಗೂ ದಿ. ಅಂದಮ್ಮ ಮಲ್ಲನಗೌಡರ ಸ್ಮಾರಕ ದತ್ತಿ ಪ್ರಶಸ್ತಿಗಳನ್ನು ಈ ವೇಳೆ ಜಿಲ್ಲಾ ಕಸಾಪ ಘಟಕ ಪ್ರಕಟಿಸಿತು. ಮರಿಗೌಡ ಮಲ್ಲನಗೌಡರ ಅವರ ಸ್ಮಾರಕ ಪ್ರಶಸ್ತಿಗೆ 7 ಜನ ಲೇಖಕರು, 9 ಪುಸ್ತಕಗಳನ್ನು ನೋಂದಾಯಿಸಿಕೊಂಡಿದ್ದರು. ಈಶ್ವರ ಹತ್ತಿ ಅವರ ಅನಿಮಲ್‌ ಫಾರ್ಮ್ ಕೃತಿ ಆಯ್ಕೆಗೊಂಡಿದೆ. ದಿ. ಅಂದಮ್ಮ ಮಲ್ಲನಗೌಡರ ಸ್ಮಾರಕ ದತ್ತಿ ಪ್ರಶಸ್ತಿಗೆ 6 ಜನ ಮಹಿಳಾ ಲೇಖಕಿಯರು 7 ಪುಸ್ತಕಗಳನ್ನು ನೋಂದಾಯಿಸಿಕೊಂಡಿದ್ದರು. ಮುಮ್ತಾಜ್‌ ಬೇಗಂ ಅವರ “ಕೊಂದ ಕನಸುಗಳ ಕೇಸು’ ಪುಸ್ತಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.

ಜೊತೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ ಪಾಟೀಲ ಮಾತನಾಡಿ, ಕಸಾಪ ವಿಭಿನ್ನವಾಗಿ ದತ್ತಿ ಉಪನ್ಯಾಸ ಆಯೋಜಿಸಲು ಪ್ರಯತ್ನಿಸುತ್ತಾ ಬಂದಿದೆ. ಆಸಕ್ತರು ಹೆಚ್ಚಿನ ದತ್ತಿಗಳನ್ನು ಸ್ಥಾಪಿಸುವ ಮೂಲಕ ಸಾಹಿತ್ಯ ಚಟುವಟಿಕೆಗಳನ್ನು ನಡೆಸಲು ಸಹಕಾರ ನೀಡಬೇಕು. ಕಾರ್ಯಕ್ರಮದಲ್ಲಿ ನಾಡಗೀತೆಗೆ ಅವಮಾನಿಸಿದವರನ್ನು ಬಂಧಿಸಲು ಆಗ್ರಹಿಸಿದರು.

ಸಮಾರಂಭದಲ್ಲಿ ಚನ್ನಬಸಪ್ಪ ಕಡ್ಡಿಪುಡಿ, ರಮೇಶ ಕುಲಕರ್ಣಿ, ಸಾವಿತ್ರಿ ಮುಜುಂದಾರ, ವೀರಣ್ಣ ಹುರಕಡ್ಲಿ, ಈರಪ್ಪ ಬಿಜಲಿ, ಶಿವಕುಮಾರ ಕುಕನೂರು, ನಂದೀಶ್ವರ ಪ್ರಾಥಮಿಕ ಶಾಲೆಯ ಸುರೇಶ ಉಪಸ್ಥಿತರಿದ್ದರು.

ಈ ವೇಳೆ ಶಂಕ್ರಪ್ಪ ಬಂಗಾರಿ ಅವರು ತಮ್ಮ ಭಾಗದಲ್ಲಿ 880 ಮಹಾಮನೆ ಕಾರ್ಯಕ್ರಮ ಆಯೋಜಿಸಿ ಪ್ರತಿವಾರ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಅವರನ್ನು ಕಸಾಪ ಸನ್ಮಾನಿಸಿತು. ಕೊಪ್ಪಳ ತಾಲೂಕು ಕಸಾಪ ಅಧ್ಯಕ್ಷ ರಾಮಚಂದ್ರಗೌಡ ಗೊಂಡಬಾಳ ಅವರು ಪ್ರಾಸ್ತಾವಿಕ ಮಾತನಾಡಿದರು. ಸಂಗಪ್ಪ ಚಕ್ರಸಾಲಿ ನಿರೂಪಿಸಿದರು. ಮಲ್ಲಿಕಾರ್ಜುನ ಹ್ಯಾಟಿ ಅವರು ಸ್ವಾಗತಿಸಿದರು. ಬಸವರಾಜ ಶಿರಗುಪ್ಪಿಶೆಟ್ಟರ್‌ ವಂದಿಸಿದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.