ಅಕಾಲಿಕ ಆಲಿಕಲ್ಲು ಮಳೆಗೆ ಭತ್ತದ ಬೆಳೆ ಸಂಪೂರ್ಣ ನಾಶ; ರೈತರ ಗದ್ದೆಗೆ ಸಂಸದ ಶಾಸಕರ ಭೇಟಿ
Team Udayavani, Apr 8, 2020, 10:47 AM IST
ಗಂಗಾವತಿ: ತಾಲ್ಲೂಕಿನಾದ್ಯಂತ ಸೋಮವಾರ ಸಂಜೆ ಸುರಿದ ಆಲಿಕಲ್ಲು ಮಳೆ ಗಾಳಿಗೆ ಬೆಳೆದು ನಿಂತ ಭತ್ತದ ಬೆಳೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ಇದರಿಂದ ರೈತರ ಬದುಕು ಸಂಕಷ್ಟಕ್ಕೆ ಗುರಿಯಾಗಿದೆ. ಅಚ್ಚುಕಟ್ಟು ಪ್ರದೇಶದ 80 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದ್ದು ಇದರಿಂದ ರೈತರಿಗೆ ಸಂಕಷ್ಟವುಂಟಾಗಿದೆ. ಈಗಾಗಲೇ ಕಟಾವಿಗೆ ಬಂದಿದ್ದ ಭತ್ತ ನಾಶವಾಗಿದೆ.
ಸಂಸದ ಶಾಸಕರ ಭೇಟಿ: ಅಕಾಲಿಕ ಮಳೆಯಿಂದ ನೆಲಕ್ಕುರುಳಿದ ಭತ್ತದ ಗದ್ದೆ ಪ್ರದೇಶಕ್ಕೆ ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ ಬಿಜೆಪಿ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ ಉದಯವಾಣಿ ಜತೆ ಮಾತನಾಡಿ ಅಕಾಲಿಕ ಮಳೆಯಿಂದ ರೈತರಿಗೆ ನಷ್ಟವುಂಟಾಗಿದ್ದು ಪ್ರತಿ ಎಕರೆ ಪರಿಹಾರ ನೀಡಬೇಕಿದ್ದು ಕಂದಾಯ ಕೃಷಿ ಇಲಾಖೆ ಜಂಟಿ ಸರ್ವೆ ನಡೆಸಿದ ನಂತರ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ