ಏತ ನೀರಾವರಿ ಯೋಜನೆ ಪರಿಷ್ಕೃರಣೆಗೆ ಕರಡಿ ಒತ್ತಾಯ


Team Udayavani, Jun 8, 2020, 6:42 AM IST

ಏತ ನೀರಾವರಿ ಯೋಜನೆ ಪರಿಷ್ಕೃರಣೆಗೆ ಕರಡಿ ಒತ್ತಾಯ

ಕೊಪ್ಪಳ: ಈ ಹಿಂದೆ ಯೋಜಿಸಿದ ತಾಲೂಕಿನ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯು ಈ ಭಾಗದ ಹೆಚ್ಚಿನ ರೈತರಿಗೆ ಅನುಕೂಲವಾಗದೇ ಇರುವ ಕಾರಣಕ್ಕೆ ಈ ಯೋಜನೆಯನ್ನು ಪರಿಷ್ಕೃತಗೊಳಿಸಿ ಹೆಚ್ಚು ರೈತರಿಗೆ ನೀರು ಒದಗಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಅಮರೇಶ ಕರಡಿ ಒತ್ತಾಯಿಸಿದ್ದಾರೆ.

ತಾಲ್ಲೂಕಿನ ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆಯ ಪ್ರದೇಶಕ್ಕೆ ಭೇಟಿ ನೀಡಿ ಜಾಕ್ವೆಲ್‌ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಈ ಹಿಂದೆ ತಯಾರಿಸಲಾದ ಯೋಜನೆಯಂತೆ ಬೆಟಗೇರಿ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗುವಂತೆ ಇರಲಿಲ್ಲ. ಕೆಲವು ಗ್ರಾಮಗಳಿಗೆ ಮಾತ್ರ ಅನುಕೂಲವಾಗುವಂತೆ ಯೋಜನೆ ಸಿದ್ಧಪಡಿಸಲಾಗಿತ್ತು. ಇದರಿಂದಾಗಿ ಈ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಹಾಗೂ ಅಂತಹ ಹಳ್ಳಿಗಳಿಗೆ ನೀರು ದೊರಕದಂತಾಗಿದೆ. ಈ ಹಿನ್ನೆಲೆಯಲ್ಲಿ ರೈತಪರ ಬಿಜೆಪಿ ಸರ್ಕಾರ ಕೂಡಲೇ ಈ ಯೋಜನೆ ಪರಿಷ್ಕೃತಗೊಳಿಸಿ ಬೆಟಗೇರಿ ಭಾಗದ ರೈತರಿಗೂ ಅನುಕೂಲವಾಗುವಂತೆ ಯೋಜನೆ ರೂಪಿಸಿ ಎಲ್ಲ ರೈತರಿಗೂ ಸೌಲಭ್ಯ ಸಿಗುವಂತಾಗಬೇಕು ಎಂದು ಮನವಿ ಮಾಡಿದ್ದಾರೆ.

ಪರಿಷ್ಕೃತ ಯೋಜನೆಯಿಂದಾಗಿ ಬೆಟಗೇರಿ ಭಾಗದ 3 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ಈ ಏತನೀರಾವರಿ ಯೋಜನೆಯಡಿ ನೀರು ದೊರಕುತ್ತದೆ. ಈ ಹಿಂದೆ ಇದೇ ಗ್ರಾಮಕ್ಕೆ ನೀರು ದೊರಕುವಂತೆ ಯೋಜನೆ ಮಾಡಲಾಗಿತ್ತು. ಹೆಸರಿಗೆ ಮಾತ್ರ ಬೆಟಗೇರಿ ಯೋಜನೆ ಇತ್ತು. ಆದರೆ ನೀರು ದೊರಕದೇ ಮುಂದಿನ ಗ್ರಾಮಕ್ಕೆ ನೀರು ಸಿಗುವಂತೆ ಈ ಹಿಂದಿನವರು ಮಾಡಿದ್ದರು. ಆ ಮೂಲಕ ಬೆಟಗೇರಿ ಭಾಗದ ರೈತರಿಗೆ ಅನ್ಯಾಯ ಮಾಡಲಾಗಿತ್ತು. ಇದೀಗ ನಮ್ಮ ಸರ್ಕಾರ ಆಡಳಿತದಲ್ಲಿದ್ದು, ಈ ಭಾಗದ ಎಲ್ಲ ರೈತರಿಗೂ ಅನುಕೂಲವಾಗುವಂತೆ ಪರಿಷ್ಕೃತ ಯೋಜನೆ ರೂಪಿಸಿ ಕಾಮಗಾರಿ ಪೂರ್ಣಗೊಳಿಸಿದರೆ ಈ ಭಾಗದ ಭೂಮಿ ನೀರಾವರಿ ಪ್ರದೇಶವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಅವರು ಗಮನಹರಿಸಿ ರೈತರ ಹಿತ ಕಾಪಾಡಬೇಕೆಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್‌ ಮೈನಳ್ಳಿ, ಎಪಿಎಂಸಿ ಸದಸ್ಯರಾದ ಬಸವರಾಜ ಈಶ್ವರಗೌಡ್ರ, ಬಿಜೆಪಿ ಮುಖಂಡರಾದ ವೀರೇಶ ಸಜ್ಜನ್‌, ಶರಣಪ್ಪ ಮತ್ತೂರು ಮತ್ತು ಭೀಮಣ್ಣ ಬೆಟಗೇರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.