ಅಂಜನಾದ್ರಿ ಪ್ರದೇಶದ ಮೂಲಕ್ಕೆ ಧಕ್ಕೆಯಾಗದಂತೆ ಸಮಗ್ರ ಅಭಿವೃದ್ಧಿ: ಸಚಿವ ಬಿ.ಶ್ರೀರಾಮುಲು


Team Udayavani, Feb 1, 2022, 8:57 AM IST

koppala 2

ಗಂಗಾವತಿ: ಕನಾಟಕ ರಾಜ್ಯಕ್ಕೆ ಕೀರ್ತಿ ತಂದಿರುವ ಕಿಷ್ಕಿಂದಾ ಅಂಜನಾದ್ರಿ ಪ್ರದೇಶದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ರಾಜ್ಯ ಮತ್ತು ಕೇಂದ್ರ ಸರಕಾರ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದು ಇಲ್ಲಿಯ ಚಿತ್ರಣವೇ ಬದಲಾಗಲಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಅವರು ತಾಲೂಕಿನ ಇತಿಹಾಸ ಪ್ರಸಿದ್ಧ ಪಂಪಾಸರೋವರಕ್ಕೆ ಭೇಟಿ ನೀಡಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ಹಂಪಿಯಲ್ಲಿ ನಾಲ್ಕು ಪುರಾತನ ದೇಗುಲ ಜೀರ್ಣೋದ್ಧಾರ ಮಾಡಿದ್ದು ಪಂಪಾಸರೋವರ ಹಾಗೂ ಇಲ್ಲಿಯ ದೇಗುಲವನ್ನು ಮೊದಲಿನ ಸ್ವರೂಪದಲ್ಲೇ ನಿರ್ಮಿಸಲಾಗುತ್ತಿದೆ. ವಿಶ್ವದಲ್ಲಿಯೇ ಖ್ಯಾತ ಸ್ಥಳವಾಗಿರುವ ಕಿಷ್ಕಿಂದಾ ಅಂಜನಾದ್ರಿ, ಪಂಪಾಸರೋವರ, ಋಷಿಮುಖ ಪರ್ವತ ಶ್ರೀಚಂದ್ರಮೌಳೇಶ್ವರ ದೇಗುಲಗಳನ್ನು ಪುರಾತತ್ವ ಕೇಂದ್ರ ಸರ್ವೇಕ್ಷಣಾ ಇಲಾಖೆ ಜೀರ್ಣೋದ್ಧಾರ ಮಾಡುವಂತೆ ಪತ್ರ ಬರೆಯಲಾಗಿದೆ.

ಭಾರತದ ಇತಿಹಾಸದಲ್ಲಿ ಅರಸರು ದೇಗುಲ, ಕೆರೆ, ಕಟ್ಟೆ, ರಸ್ತೆ ಹಾಗೂ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕೆಲಸ ಕಾರ್ಯ ಮಾಡಿದ್ದು ರಾಜ್ಯ ಸರಕಾರ ಈಗಲೂ ಇಂತಹ ಕಾರ್ಯ ಮಾಡಲು ಯೋಜನೆ ರೂಪಿಸಿದೆ. ಕೊರೊನಾ ಕಾರಣಕ್ಕಾಗಿ ಸ್ವಲ್ಪ ಮಟ್ಟಿಗೆ ಅಭಿವೃದ್ಧಿ ಕಾರ್ಯದಲ್ಲಿ ವಿಳಂಭವಾಗಿದ್ದು ಮುಂದೆ ಸಮರೋಪಾದಿಯಲ್ಲಿ ಕೆಲಸಗಳು ನಡೆಯಲಿವೆ ಎಂದರು.

ಇಡೀ ಕಿಷ್ಕಿಂದಾ ಪ್ರದೇಶವನ್ನು ಸುತ್ತಾಡಿದ ಶ್ರೀರಾಮುಲು, ಜನಾರ್ಧನರೆಡ್ಡಿ: ಹಂಪಿಯಲ್ಲಿ ಸೋಮವಾರದ ಪೂಜೆ ಮುಗಿಸಿದ ಸಚಿವ ಬಿ.ಶ್ರೀರಾಮುಲು ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಂಸದೆ ಬಿ. ಶಾಂತ ಹಾಗೂ ಅವರ ಬೆಂಬಲಿಗರು ಕೋದಂಡರಾಮ ದೇಗುಲದ ಮುಂದಿರುವ ತುಂಗಭದ್ರಾ ನದಿಯ ಚಕ್ರತೀರ್ಥದಲ್ಲಿ ಹರಿಗೋಲಿನಲ್ಲಿ (ತೆಪ್ಪ) ಋಷಿಮುಖ ಪರ್ವತದಲ್ಲಿರುವ ಶ್ರೀಚಂದ್ರಮೌಳೇಶ್ವರ ಹಾಗೂ ಸುಗ್ರೀವಾ ದೇಗುಲಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.


ಸಂಪ್ರದಾಯ ಸಂಗೀತ ಕಾರ್ಯಕ್ರಮ: ಸ್ಥಳೀಯ ಕಲಾವಿದ ಗಾಳೇಶ ತಂಡದವರು ಋಷಿಮುಖ ಪರ್ವತದ ತಪ್ಪಲಿನಲ್ಲಿ ಆಯೋಜಿಸಿದ್ದ ಸಂಪ್ರದಾಯಿಕ ವಾದ್ಯಗಳ ಸಂಗೀತ ಕಾರ್ಯಕ್ರಮದಲ್ಲಿ ಪ್ರೇಕ್ಷಕರಾಗಿ ಮರಳಿನ ಮೇಲೆ ಕುಳಿತು ಸಚಿವ ಬಿ.ಶ್ರೀರಾಮುಲು ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಂಸದೆ ಬಿ. ಶಾಂತಮ್ಮ ಕಾರ್ಯಕ್ರಮ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಜಿ.ಪಂ.ಮಾಜಿ ಸದಸ್ಯ ಎಚ್.ಎಂ.ಸಿದ್ದರಾಮಯ್ಯಸ್ವಾಮಿ, ಮುಖಂಡ ಕೆಲೋಜಿ ಸಂತೋಷ ಹಾಗೂ ಬಿಜೆಪಿ ಕಾರ್ಯಕರ್ತರಿದ್ದರು. ವೀಕ್ಷಿಸಿದರು.ವಿಜಯನಗರ ಸಾಮ್ರಾಜ್ಯ ಸ್ಥಾಪನೆಯ ಪ್ರೇರಣೆಯಾಗಿದ್ದ ಕಿಷ್ಕಿಂದಾ ಪಂಪಾಸರೋವರ ಸಮಗ್ರ ಅಭಿವೃದ್ಧಿಗೆ ಸಚಿವ ಬಿ.ಶ್ರೀರಾಮುಲು ಪಣ ತೊಟ್ಟಿದ್ದು ಅವರಿಗೆ ಗುರುಗಳಾದ ವಿದ್ಯಾರಣ್ಯ ಹಕ್ಕಬುಕ್ಕರು ಹಾಗೂ ಶ್ರೀಕೃಷ್ಣದೇವರಾಯರ ಆಶೀರ್ವಾದವಿದೆ. ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ಸಚಿವ ಶ್ರೀರಾಮುಲು ಸ್ವಂತ ಹಣ ಖರ್ಚು ಮಾಡಿ ಈಗಾಗಲೇ ಹಂಪಿಯಲ್ಲಿ ಹಲವು ದೇಗುಲ ನಿರ್ಮಿಸಿದ್ದು ಪ್ರಸ್ತುತ ಪಂಪಾಸರೋವರ ಜೀರ್ಣೋದ್ಧಾರ ಮಾಡುತ್ತಿದ್ದು ಪುಣ್ಯದ ಕೆಲಸವಾಗಿದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಉದಯವಾಣಿ ಗೆ ತಿಳಿಸಿದರು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.