ಅಂಜನಾದ್ರಿಗೆ ಭೂಸ್ವಾಧೀನ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ, ಹೆಚ್ಚಿನ ಪರಿಹಾರಕ್ಕೆ ಪಟ್ಟು

2013 ರ ಭೂಸ್ವಾಧೀನ ಕಾಯ್ದೆಯಡಿ ಅಂದಾಜು 42 ಲಕ್ಷ ರೂ.ಪರಿಹಾರ

Team Udayavani, Jun 27, 2022, 8:50 PM IST

ಅಂಜನಾದ್ರಿಗೆ ಭೂಸ್ವಾಧೀನ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ, ಹೆಚ್ಚಿನ ಪರಿಹಾರಕ್ಕೆ ಪಟ್ಟು

ಗಂಗಾವತಿ: ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಕೆಳಗಡೆ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲು ರೈತರ ಭೂಮಿ ಸ್ವಾಧೀನ ಮಾಡಿಕೊಳ್ಳಲು ಸರಕಾರ ನಿರ್ಧರಿಸಿದ್ದು ಸೋಮವಾರ ಆನೆಗೊಂದಿ ಗ್ರಾ.ಪಂ.ಕಚೇರಿಯಲ್ಲಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಶ ಕಿಶೋರ್ ನೇತೃತ್ವದಲ್ಲಿ ರೈತರು ಮತ್ತು ಗ್ರಾಮಸ್ಥರ ಸಭೆ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಶ ಕಿಶೋರ್ ಮಾತನಾಡಿ, 2013 ಕೇಂದ್ರ ಸರಕಾರದ ಭೂಸ್ವಾಧೀನ ಕಾಯ್ದೆಯಡಿ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಕೆಳಗಡೆ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲು ರೈತರ 61 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅಗತ್ಯ ಕಟ್ಟಡಗಳನ್ನು 120 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಬೇಕಿದ್ದು ರೈತರ ಭೂಮಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಕಲ್ಪಿಸಲಾಗುತ್ತದೆ. ಸರಕಾರದ ನಿಯಮಾವಳಿಗಳ ಪ್ರಕಾರ ಅಂದಾಜು 42 ಲಕ್ಷ ರೂ. ಒಂದು ಎಕರೆಗೆ ನಿಗದಿ ಮಾಡಬಹುದಾಗಿದ್ದು ಈ ಪರಿಹಾರ ಭೂಮಿ ಸರ್ವೇ ನಂಬರ್‌ಗಳನ್ನು ಅವಲಂಭಿಸಿರುತ್ತದೆ.ಸದ್ಯ ರೈತರ ಜತೆ ಪ್ರಥಮ ಸಭೆ ನಡೆಸಿ ಭೂಮಿ ಕೊಡುವಂತೆ ಕೋರಲಾಗಿದೆ. ರೈತರು 15 ದಿನಗಳ ಕಾಲಾವಕಾಶ ಕೇಳಿದ್ದು ಜು.15 ರಂದು ಪುನಹ ಎರಡನೇಯ ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ರೈತರು ಭೂಮಿ ಕೊಡಲು ಮೊದಲ ಹಂತದಲ್ಲಿ ಒಪ್ಪದಿದ್ದರೆ 2013 ರ ಕೇಂದ್ರ ಸರಕಾರದ ನಿಯಮದಂತೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸಲಾಗುತ್ತದೆ.ರೈತರ ಎಲ್ಲಾ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರಲಾಗುತ್ತದೆ ಎಂದರು.

ರೈತ ಮುಖಂಡ ಸುದರ್ಶನವರ್ಮಾ ಮಾಡನಾಡಿ, ಭೂಮಿ ಕಳೆದುಕೊಳ್ಳಲು ರೈತರಿಗೆ ಇಷ್ಟವಿಲ್ಲ ಆದ್ದರಿಂದ ಜಿಲ್ಲಾಡಳಿತ ಕೂಡಲೇ ಮುಖ್ಯಮಂತ್ರಿಯವರ ಬಳಿಗೆ ನಿರಾಶ್ರಿತರಾಗುವ ರೈತರನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸಬೇಕು. ಅಭಿವೃದ್ಧಿ ಕಾರ್ಯಕ್ಕೆ ಪ್ರಸ್ತಾವನೆ ಕಳಿಸಿರುವ 61 ಎಕರೆ ಭೂಮಿಯ ಬದಲು ಬಲಭಾಗದ ಭೂಮಿ ಮತ್ತು ಸರಕಾರಿ ಭೂಮಿಯನ್ನು ಮೂಲಸೌಕರ್ಯ ಕಲ್ಪಿಸಲು ಬಳಕೆ ಮಾಡಿಕೊಳ್ಳಬೇಕು ಇದು ಸಾಧ್ಯವಾಗದಿದ್ದರೆ ವೈಜ್ಞಾನಿಕವಾಗಿ ಸದ್ಯ ಆನೆಗೊಂದಿ ಭಾಗದಲ್ಲಿ ಭೂಮಿಗೆ ಹೆಚ್ಚಿನ ಬೇಡಿಕೆ ಇದ್ದು ಅದರಂತೆ ಸರಕಾರ ಭೂಮಿಗೆ ಪರಿಹಾರ ನೀಡಬೇಕು.

ಇದನ್ನೂ ಓದಿ : ನನ್ನ ಕೇಸಲ್ಲೂ ಸುಳ್ಳು ಹೇಳಿದ್ದ ಶ್ರೀಕುಮಾರ್‌: ನಂಬಿ ನಾರಾಯಣನ್‌

ಸಭೆಯಲ್ಲಿ ರಾಜವಂಶಸ್ಥರಾದ ಲಲಿತಾರಾಣಿ, ಶ್ರೀಕೃಷ್ಣದೇವರಾಯ, ಹರಿಹರದೇವರಾಯಲು, ಎಡಿಸಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತ ಬಸವಣ್ಣೆಪ್ಪ, ತಹಸೀಲ್ದಾರ್ ಯು.ನಾಗರಾಜ, ರೈತರಾದ ರಾಮಕೃಷ್ಣಶೆಟ್ಟಿ, ಸುದರ್ಶನವರ್ಮಾ, ಶ್ರೀನಾಥ, ಪ್ರಶಾಂತ, ಮರಿಸ್ವಾಮಿ, ಕುಮಾರ, ಶಿವಕುಮಾರ, ತಿರುಕಪ್ಪ, ನಿಂಗಪ್ಪ, ಮಲ್ಲಪ್ಪ, ರಫಿ, ಕೆ.ವೆಂಕಟೇಶ, ಚಂದ್ರಶೇಖರರೆಡ್ಡಿ ಸೇರಿ ಅನೇಕರಿದ್ದರು.

 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.