
ಸಿದ್ದುಗೆ ಕೋಲಾರ ಕ್ಷೇತ್ರ ಕೊನೇ ಆಯ್ಕೆ: ಸಚಿವ ಹಾಲಪ್ಪ ಆಚಾರ್
Team Udayavani, Mar 20, 2023, 5:21 AM IST

ಕೊಪ್ಪಳ: ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ಕ್ಷೇತ್ರ ಸಿಕ್ಕಿಲ್ಲ. ಕೋಲಾರ ಅವರ ಕೊನೇ ಆಯ್ಕೆಯಾಗಿದೆ. ಆ ಕ್ಷೇತ್ರದಲ್ಲಿ ಸ್ಪರ್ಧಿಸದಂತೆ ಹೈಕಮಾಂಡ್ ಹೇಳಿರೋದು ಸಿದ್ದರಾಮಯ್ಯ ಅಸಹಾಯಕತೆ ತೋರಿಸುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ಎಷ್ಟು ಅಸಹಾಯಕರಾಗಿದ್ದಾರೆ ಎಂಬುದಕ್ಕೆ ಅವರನ್ನು ಕೋಲಾರದಿಂದ ಸ್ಪರ್ಧಿಸದಂತೆ ಹೇಳಿರೋದೇ ಸಾಕ್ಷಿಯಾಗಿದೆ. ಅವರು ಎಲ್ಲಿ ನಿಲ್ಲಬೇಕೆಂಬುವುದು ಅವರೇ ಯೋಚಿಸಬೇಕು. ಮೊದಲು ಎಲ್ಲೆಯೊ ನಿಲ್ಲಬೇಕೆಂದು ಕೊನೆಗೆ ಕೋಲಾರ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದರು. ಅವರು ಸ್ಪರ್ಧೆಯ ಹಿನ್ನೆಲೆಯಲ್ಲಿ ಹತ್ತಾರು ಸಭೆ ನಡೆಸಿದ್ದರು. ಆದರೆ ಹೈಕಮಾಂಡ್ ಅವರಿಗೆ ಸ್ಪ ರ್ಧಿಸದಂತೆ ಹೇಳಿದ್ದಾರೆ ಎಂದರು.
ಕಾಂಗ್ರೆಸ್ ಯಾವಾಗಲೂ ಒಡೆದ ಮನೆ ಎಂಬುವುದು ಸಾಬೀತಾಗಿದೆ. ಕಾಂಗ್ರೆಸ್ ಯಾವಾಗಲೂ ಮುಚ್ಚಿದ ಲಕೋಟೆಯಿಂದ ಬಂದ ಸಂದೇಶದಿಂದ ಅಧಿಕಾರ ಮಾಡಿದೆ. ಇದು ಕಾಂಗ್ರೆಸ್ ಇತಿಹಾಸ. ಇದು ಕಾಂಗ್ರೆಸ್ ಸಂಸ್ಕೃತಿಗೆ ಸಾಕ್ಷಿಯಾಗಿದೆ. ಅಲ್ಲಿ ಕುಟುಂಬ ರಾಜಕಾರಣವಿದೆ. ಅಲ್ಲಿ ಪ್ರಜಾತಂತ್ರ ವ್ಯವಸ್ಥೆಯೇ ಇಲ್ಲ. ಯಲಬುರ್ಗಾದಲ್ಲಿ ಸೀರೆ ಹಂಚಿದ ಪ್ರಕರಣ ಹಾಗೂ ಶಾಲೆಯಲ್ಲಿ ಚುನಾವಣೆ ಪ್ರಚಾರ ಮಾಡಿದ್ದು ಸರಿಯಲ್ಲ. ಕಾಂಗ್ರೆಸ್ ಹಾಗೂ ರಾಯರಡ್ಡಿಗೆ ಬೇರೆ ಕೆಲಸವಿಲ್ಲ. ಅವರಿಗೆ ಅಭಿವೃದ್ಧಿ ವಿಚಾರ ಹೇಳಿಕೊಳ್ಳುವುದಕ್ಕೆ ಏನೂ ಇಲ್ಲ. ಯಾವುದೇ ಕೆರೆ ಅಭಿವೃದ್ಧಿ, ಶಾಲಾ ಅಭಿವೃದ್ಧಿ, ಕೃಷಿ ಸ್ಪಂದನೆ ಮಾಡಿಲ್ಲ. ಕುಂಟು ನೆಪ ಮಾಡಿಕೊಂಡು ಆರೋಪ ಮಾಡೋದೇ ಅವರ ಕೆಲಸವಾಗಿದೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

Pakistan ಇಮ್ರಾನ್ ಖಾನ್ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

Nithin Gopi: 39 ರ ಹರೆಯದಲ್ಲೇ ನಟ ನಿತಿನ್ ಗೋಪಿ ವಿಧಿವಶ