ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರ ಬಗ್ಗೆ ನಿಗಾ ಇಡದಿದ್ದಕ್ಕೆ ಸೋಂಕಿತ ಸಾವು:ಸಂಬಂಧಿಕರ ಆಕ್ರೋಶ


Team Udayavani, May 4, 2021, 7:44 PM IST

ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರ ಬಗ್ಗೆ ನಿಗಾ ಇಡದಿದ್ದಕ್ಕೆ ಸೋಂಕಿತ ಸಾವು:ಸಂಬಂಧಿಕರ ಆಕ್ರೋಶ

ಕೊಪ್ಪಳ: ಕೊಪ್ಪಳ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಜೊತೆ ಆರೈಕೆಯಲ್ಲಿ ತೊಡಗಿದ್ದ ಸಂಬಂಧಿಗಳನ್ನು ಏಕಾ ಏಕಿ ಆಸ್ಪತ್ರೆಯಿಂದ ಹೊರ ನಡೆಯುವಂತೆ ತಿಳಿಸಿದ ಬೆನ್ನಲ್ಲೇ ಸೋಂಕಿತ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ನಮ್ಮ ಅಣ್ಣನನ್ನ ಆಸ್ಪತ್ರೆಯವರು ಸಾಯಿ ಬಡದ್ ಬಿಟ್ರೋ.. ಯಪ್ಪಾ ಎಂದು ಕಣ್ಣೀರಿಡುತ್ತಲೇ ಆಸ್ಪತ್ರೆಯ ಮುಂದೆ ಬಿದ್ದು ಹೊರಳಾಡಿದ್ದು ನಿಜಕ್ಕೂ ಎಲ್ಲರ ಕರುಳು ಚುರ್ ಎಂದೆನಿಸಿತು.

ಮೊದಲೆಲ್ಲಾ ಜಿಲ್ಲಾ ಕೋವಿಡ್ ಆಸ್ಪತ್ರೆಯೊಳಗೆ ಸೋಂಕಿತರ ಆರೈಕೆಗಾಗಿ ಕೆಲವರನ್ನು ಬಿಡಲಾಗುತ್ತಿತ್ತು. ಆದರೆ ಏಕಾ ಏಕಿ ಮೇಲಾಧಿಕಾರಿಗಳ ಸೂಚನೆಯ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ವರ್ಗವು ಸಂಬಂಧಿಗಳೆಲ್ಲರನ್ನೂ ಹೊರ ನಡೆಯುವಂತೆ ತಿಳಿಸಿದರು.

ಇದಕ್ಕೆ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿ, ಕೋವಿಡ್ ಸೊಂಕಿತರ ಮುಂದೆ ಆಸ್ಪತ್ರೆಯ ವೈದ್ಯರು, ನರ್ಸ್  ಸರಿಯಾದ ಸಮಯಕ್ಕೆ ಹಾಜರಿರಲ್ಲ. ಸೋಂಕಿತರಿಗೆ ಆಕ್ಸಿಜನ್ ಖಾಲಿಯಾಗಿದೆ ಎಂದರೂ ನರ್ಸ್ ಸಮಯಕ್ಕೆ ಸರಿಯಾಗಿ ಬಂದು ಚಿಕಿತ್ಸೆ ನೀಡಲ್ಲ. ನಾವೇ ನಾಲ್ಕಾರು ಬಾರಿ ಹೇಳಿದ ಬಳಿಕ ಬರುತ್ತಾರೆ. ನಾವು ಒಬ್ಬರಾದರೂ ಸೋಂಕಿತರ ಪಕ್ಕದಲ್ಲಿಯೇ ಕೆಲವು ಸಮಯ ಇರುತ್ತೇವೆ. ಏಕಾ ಏಕಿ ನೀವು ನಮ್ಮನ್ನು ಹೊರಗೆ ಕಳುಹಿಸಿದರೆ ಅವರು ಆಕ್ಸಿಜನ್ ಪೈಪ್‌ಗಳನ್ನು ಮುಖದಿಂದ ತೆಗೆದು ಹಾಕುತ್ತಾರೆ. ಆಗ ಸಾವು ನೋವು ಹೆಚ್ಚು ಸಂಭವಿಸುತ್ತವೆ ಎಂದು ಹೇಳಿದರೂ ಸಹಿತ ಆಸ್ಪತ್ರೆಯ ಸಿಬ್ಬಂದಿ ಎಲ್ಲರನ್ನೂ ಹೊರಗೆ ಕಳುಹಿಸಿದರು.

ಆಸ್ಪತ್ರೆಯಲ್ಲಿ ಗದ್ದಲ ಏರ್ಪಟ್ಟಂತೆ ಪೊಲೀಸರು ಧಾವಿಸಿ ಯಾರನ್ನೂ ಒಳಗೆ ಬಿಡಲಿಲ್ಲ. ಇದರಿಂದ ಆಸ್ಪತ್ರೆಯ ಒಳಗೆ ಓರ್ವ ಸೋಂಕಿತನಿಗೆ ಆಕ್ಸಿಜನ್ ಅಳವಡಿಕೆ ಮಾಡಿದ್ದರೂ ಯಾರೂ ಆರೈಕೆ ಮಾಡದೇ, ನಿಗಾ ಇಡದೇ ಇದ್ದಾಗ ಸಾವನ್ನಪ್ಪಿದನು. ಈ ವಿಷಯ ತಿಳಿಯುತ್ತಿದ್ದಂತೆ ಸೋಂಕಿತನ ಸಹೋದರ ಕೋವಿಡ್ ಆಸ್ಪತ್ರೆಯ ಕೊಠಡಿ ಒಳಗೆ ಪ್ರವೇಶಿಸಿ ನನ್ನ ಅಣ್ಣನನ್ನ ಈ ಆಸ್ಪತ್ರೆಯ ವೈದ್ಯರೇ ಸಾಯ್‌ಬಡಿದರು. ನಮ್ಮ ಅಣ್ಣ ಬದುಕುತ್ತಿದ್ದ. ಇಲ್ಲಿ ಚಿಕಿತ್ಸೆಯನ್ನೂ ಸರಿಯಾಗಿ ಕೊಡಲ್ಲ. ಇರುವವರನ್ನೂ ಆರೈಕೆ ಮಾಡಲ್ಲ. ಇಲ್ಲಿಗೆ ಸೋಂಕಿತರನ್ನ ಕರೆ ತಂದರೆ ಅವರ ಹೆಣ ತೆಗೆದುಕೊಂಡು ಹೋಗಬೇಕು ಎಂದೆಲ್ಲಾ ಕಣ್ಣೀರು ಹಾಕಿ ಆಸ್ಪತ್ರೆಯ ಮುಂಭಾಗದಲ್ಲೇ ಬಿದ್ದು ಹೊರಳಾಡಿ ಕಣ್ಣೀರಿಟ್ಟ ಘಟನೆ ನಿಜಕ್ಕೂ ಎಲ್ಲರ ಕಣ್ಣಾಲೆಗಳನ್ನೂ ನೀರು ತರಿಸುವಂತಿತ್ತು. ಮಾಹಿತಿ ತಿಳಿದ ಡಿಸಿ ವಿಕಾಸ್ ಕಿಶೋರ್ ಅವರು ತಕ್ಷಣ ಆಸ್ಪತ್ರೆಗೆ ಆಗಮಿಸಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದರು. ಸೋಂಕಿತರ ಸಂಬಂಧಿಕರು ಡಿಸಿ ಅವರನ್ನು ತರಾಟೆ ತೆಗೆದುಕೊಂಡರಲ್ಲದೇ, ತಮ್ಮ ನೋವು ತೋಡಿಕೊಂಡರು.

ಈ ಕುರಿತು ಉದಯವಾಣಿ ಜೊತೆ ಡಿಸಿ ವಿಕಾಸ್ ಕಿಶೋರ್ ಮಾತನಾಡಿ, ಆಸ್ಪತ್ರೆಗೆ ನಾನು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಆ ಸೋಂಕಿತರು ಆರೋಗ್ಯದ ಸ್ಥಿತಿಯು ತುಂಬ ಕೊನೆಯ ಹಂತಕ್ಕೆ ತಲುಪಿ ಸಾವನ್ನಪ್ಪಿದ್ದಾನೆ. ಎಲ್ಲರನ್ನೂ ಆಸ್ಪತ್ರೆಯ ಒಳಗೆ ಬಿಡಲು ಆಗುವುದಿಲ್ಲ. ನಾಲ್ಕು ಗಂಟೆಗೂ ಹೆಚ್ಚು ಕಾಲ ಸಂಬಂಧಿಕರು ಸೋಂಕಿತರ ಜೊತೆಯೇ ಇದ್ದರೆ ಅವರಿಗೂ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಿಡಲು ಕಷ್ಟವಾಗುತ್ತದೆ. ಆದರೆ ಆಸ್ಪತ್ರೆಯ ಸಿಬ್ಬಂದಿಗಳ ಜೊತೆಗೆ ದಿನಕ್ಕೆ ಮೂರು ಬಾರಿ ಸಂಬಂಧಿಕರನ್ನು ಒಂದೆರಡು ಗಂಟೆಗಳ ಕಾಲ ಆರೈಕೆಗೆ ಕೋವಿಡ್ ಆಸ್ಪತ್ರೆಯೊಳಗೆ ಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.