ಕೊಪ್ಪಳ: ಕೋವಿಡ್ ಗೆ ಕಮ್ಯೂನಿಟಿ ಹೆಲ್ತ್ ಆಫೀಸರ್ ಬಲಿ
Team Udayavani, Sep 4, 2020, 9:15 PM IST
ಕೊಪ್ಪಳ: ಕೊಪ್ಪಳ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ ವಾರದ ಹಿಂದಷ್ಟೆ ಕೋವಿಡ್ ಕರ್ತವ್ಯಕ್ಕೆ ಹಾಜರಾಗಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಯಮನೂರಪ್ಪ ರಾಮಾವತ(30) ಅವರು ಕೋವಿಡ್ ಸೋಂಕಿನಿಂದ ಬಳಲಿ ಎಸ್ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲೆಯ ಹಿರೇ ಸೂಳಿಕೇರಿ ತಾಂಡದ ಗ್ರಾಮದವರಾದ ಇವರು, ಈ ಮೊದಲು ಕೊಪ್ಪಳದಲ್ಲಿ ಅಂಬುಲೆನ್ಸ್ ನಲ್ಲಿ ಹೆಲ್ತ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ 6 ತಿಂಗಳ ಹಿಂದಷ್ಟೆ ಕೊಪ್ಪಳ ಜಿಲ್ಲೆಯಲ್ಲಿ ಕಮ್ಯೂನಿಟಿ ಹೆಲ್ತ್ ಆಫೀಸರ್ ಆಗಿ ನೇಮಕಾತಿಯಗಿ ತರಬೇತಿ ಪೂರೈಸಿದ್ದರು.
ಕಳೆದ ವಾರದ ಹಿಂದಷ್ಟೆ ಅವರನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರ ತಪಾಸಣೆಗೆ ಅವರನ್ನ ನಿಯೋಜನೆ ಮಾಡಲಾಗಿತ್ತು. ಕೇವಲ ಐದು ದಿನ ಮಾತ್ರ ಅವರು ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಸೆ.೦1 ರಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕೂಡಲೇ ಅವರು ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ.02 ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್