Independence Day ಭತ್ತದ ನಾಟಿ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದ ಕೊಪ್ಪಳ ಜಿಪಂ ಸಿಇಒ
Team Udayavani, Aug 15, 2023, 9:12 PM IST
ಗಂಗಾವತಿ: ಸ್ವಾತಂತ್ರ್ಯೋತ್ಸವ ನಿಮಿತ್ತ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ನೇತೃತ್ವದ ಅಧಿಕಾರಿಗಳು ತಾಲೂಕಿನ ಕೋಟಯ್ಯ ಕ್ಯಾಂಪ್ನಲ್ಲಿ ಭತ್ತದ ಸಸಿ ನಾಟಿ ಮಾಡಿ ಕೃಷಿಕರನ್ನು ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಭತ್ತವನ್ನು ಅತಿ ಹೆಚ್ಚು ಬೆಳೆಯುತ್ತಾರೆ. ಭತ್ತದಲ್ಲಿ ಹಲವಾರು ತಳಿಗಳಿವೆ.
ವೈಜ್ಞಾನಿಕ ಕೃಷಿ ಮಾಡುವ ಮೂಲಕ ಹೆಚ್ಚು ಇಳುವರಿ ಬರುವ ಮತ್ತು ರೋಗ ನಿರೋಧಕ ಭತ್ತದ ತಳಿಗಳನ್ನು ಬೆಳೆಯಬೇಕು. ಜತೆಗೆ ಡ್ರೋನ್ ಮೂಲಕ ಔಷಧ ಸಿಂಪರಣೆ ಮಾಡಬೇಕು. ಯಾಂತ್ರಿಕೃತ ಭತ್ತದ ನಾಟಿ ಮಾಡುವ ಮೂಲಕ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಬೇಕು.
ದೇಶ ಅಭಿವೃದ್ಧಿಗೆ ಕೃಷಿ ಪೂರಕವಾಗಿದ್ದು, ಕೃಷಿಯಲ್ಲಿ ಆಧುನಿಕತೆಯನ್ನು ರೈತರು ಬಳಸಿಕೊಳ್ಳುವಂತೆ ಕರೆ ನೀಡಿದರು.
ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ, ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್, ಕೃಷಿ ಅಧಿಕಾರಿಗಳು ಮತ್ತು ಆತ್ಮ ಸಿಬ್ಬಂದಿ ರೈತರು ಕೃಷಿ ಇಲಾಖೆಯವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ