ಅತಂತ್ರ ಸ್ಥಿತಿಯಲ್ಲಿ ವಸತಿ ಶಾಲೆ ಮಕ್ಕಳು

10 -9ನೇ ತರಗತಿಗಳು ಮಾತ್ರ ಆರಂಭ ! ­7-8ನೇ ತರಗತಿ ವಿದ್ಯಾರ್ಥಿಗಳಿಗೆ ತೊಂದರೆ

Team Udayavani, Feb 8, 2021, 7:39 PM IST

koppal hostel students

ಕೊಪ್ಪಳ: ಸರ್ಕಾರ ಶಾಲೆ ತೆರೆಯುವಲ್ಲಿ ನೂರೆಂಟು ಬಾರಿ ಚಿಂತಿಸಿ 10ನೇ ತರಗತಿ ಆರಂಭಿಸಿದೆ. ಉಳಿದೆಲ್ಲವನ್ನು ವಿದ್ಯಾಗಮ ಯೋಜನೆಗೆ ಮೀಸಲಿಟ್ಟಿದೆ. ಇವೆಲ್ಲದರ ಮಧ್ಯೆ ವಸತಿ ಶಾಲೆಯ 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳು ಅತಂತ್ರ ಸ್ಥಿತಿ ಎದುರಿಸುವಂತಾಗಿದೆ. ಇತ್ತ ವಿದ್ಯಾಗಮವೂ ಇಲ್ಲ, ಅತ್ತ ತರಗತಿಗಳೂ ಇಲ್ಲದಂತಾಗಿದೆ.

ಹೌದು. ಸರ್ಕಾರವು ಕೋವಿಡ್‌-19 ಕಾರಣದಿಂದ ಶಾಲೆಗಳನ್ನು ಆರಂಭಿಸಲು ನೂರೆಂಟು ಬಾರಿ ಚಿಂತನೆ ಮಾಡುತ್ತಿದೆ. ಅಚ್ಚರಿಯೆಂಬಂತೆ, ಈಚೆಗೆ ಚಿತ್ರಮಂದಿರ, ಜಾತ್ರೆ, ಸಂತೆ, ಮಾರುಕಟ್ಟೆ ಸೇರಿದಂತೆ ಸಭೆ,  ಸಮಾರಂಭಕ್ಕೂ ವಿನಾಯಿತಿ ನೀಡಿದೆ. ಆದರೆ ಶಾಲೆ ಆಂಭಿಸಲು ಮಾತ್ರ ಕೋವಿಡ್‌ ಕಾರಣ ಹೇಳುತ್ತಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೆಟ್ಟು ಬೀಳಲಿದೆ ಎನ್ನುವ ಆಪಾದನೆ ಪಾಲಕರಿಂದ ಕೇಳಿ ಬಂದಿದೆ.

ಪ್ರಸ್ತುತ ಸರ್ಕಾರವು 10ನೇ ತರಗತಿಯನ್ನು ಆರಂಭಿಸಿದೆ. 6ರಿಂದ 9ನೇ ತರಗತಿವರೆಗೂ ಎಲ್ಲ  ವಿದ್ಯಾರ್ಥಿಗಳಿಗೆ ವೇಳಾಪಟ್ಟಿ ಅನುಸಾರ ವಿದ್ಯಾಗಮ ಯೋಜನೆಯಡಿ ವಿವಿಧ ಚಟುವಟಿಕೆ ಕೈಗೊಳ್ಳುವಂತೆ ಶಾಲೆಗಳಿಗೆ ನಿರ್ದೇಶನ ನೀಡಿದೆ. ಆದರೆ ಸರ್ಕಾರ ವಸತಿ ಶಾಲೆ ವಿದ್ಯಾರ್ಥಿಗಳ ಹಿತ ಕಾಪಾಡುವುದನ್ನೇ ಮರೆತಂತೆ ಕಾಣುತ್ತಿದೆ. ವಸತಿ ಶಾಲೆ ವಿದ್ಯಾರ್ಥಿಗಳ ಸ್ಥಿತಿಯು ನಿಜಕ್ಕೂ ಅತಂತ್ರವಾಗಿದೆ.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಇಲಾಖೆಯಡಿ ಸಾವಿರಾರು ವಸತಿ ಶಾಲೆಗಳಿವೆ. ಈ ವಿದ್ಯಾರ್ಥಿಗಳಿಗೆ 10ನೇ ತರಗತಿಗೆ ಮಾತ್ರ ಪ್ರವೇಶಾತಿಗೆ ಅವಕಾಶ ದೊರೆತಿದೆ. ಅದೂ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡು ನೆಗಟಿವ್‌ ವರದಿಯೊಂದಿಗೆ ಶಾಲೆಗೆ ಹಾಜರಾಗಬೇಕಿದೆ. ಹಲವೆಡೆ ಪಾಲಕರು ಕೋವಿಡ್‌ ಟೆಸ್ಟ್‌ ಮಾಡಿಸಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ಫೆ. 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವಸತಿ ಶಾಲೆಗೆ ಹಾಜರಿಗೆ ಸೂಚಿಸಿದೆ. ಬಹುಪಾಲು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ.

ಇನ್ನು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಈಗಾಗಲೇ ವಿದ್ಯಾಗಮ ನಡೆದಿದ್ದರೆ, ವಸತಿ ಶಾಲೆಯ 7 ಹಾಗೂ 8ನೇ ತರಗತಿ ವಿದ್ಯಾರ್ಥಿಗಳು ವಿದ್ಯಾಗಮ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಇತ್ತ ವಸತಿ ಶಾಲೆಯ ಪಾಠವೂ ಇಲ್ಲ. ಅತ್ತ ವಿದ್ಯಾಗಮವೂ ಇಲ್ಲದಂತಾಗಿದೆ. ಆದರೆ ವಸತಿ ಶಾಲೆ ಶಿಕ್ಷಕರು ವಿದ್ಯಾರ್ಥಿಗಳಿಗೆ ನಿಮ್ಮೂರಿನಲ್ಲಿಯೇ ಸರ್ಕಾರಿ ಶಾಲೆಯ ವಿದ್ಯಾಗಮಕ್ಕೆ ಹಾಜರಾಗಿ ಎಂದು ಹೇಳಿ ಕೈ ತೊಳೆದುಕೊಳ್ಳುತ್ತಿದ್ದಾರೆ. ಕೆಲವರು ಆನ್‌ಲೈನ್‌ ಪಾಠ ಮಾಡುವ ಮಾತನ್ನಾಡುತ್ತಿದ್ದಾರೆ.

ಆಂಗ್ಲ ಮಾಧ್ಯಮದ ಮಕ್ಕಳಿಗೆ ತೊಂದರೆ: ಇನ್ನೂ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮ ಇರುತ್ತದೆ. ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಗಮ ನಡೆಯುತ್ತಿದೆ. ಹೀಗಾಗಿ ವಸತಿ  ಶಾಲೆಯ ವಿದ್ಯಾರ್ಥಿಗಳು ತುಂಬ ತೊಂದರೆ ಎದುರಿಸುತ್ತಿದ್ದಾರೆ. ಪಠ್ಯ ಇರುವುದು ಆಂಗ್ಲ ಮಾಧ್ಯಮದಲ್ಲಿ, ವಿದ್ಯಾಗಮವು ಕನ್ನಡದಲ್ಲಿ ಹಾಗಾಗಿ ಮುಂದೆ ಪರೀಕ್ಷೆ ಎದುರಾದರೆ ಹೇಗೆ ಎನ್ನುವ ಆತಂಕ ಮಕ್ಕಳಲ್ಲಿ ಕಾಡುತ್ತಿದೆ. ಇಂತಹ ಸಮಸ್ಯೆಗಳ ಕುರಿತು ಸರ್ಕಾರ ಹೆಚ್ಚಿನ ಗಮನವನ್ನೇ ಹರಿಸಿಲ್ಲ. ಸುಮ್ಮನೆ ಸರ್ಕಾರಿ ಶಾಲೆಯ ವಿದ್ಯಾಗಮಕ್ಕೆ ತೆರಳಿ ಎಂದು ಹೇಳುತ್ತಿದೆ.

ಇದನ್ನೂ ಓದಿ : 4 ಜಿಪಂ ಗೆಲ್ಲುವ ವಿಶ್ವಾಸವಿದೆ: ಪೂಜಾರಿ

ಪಾಲಕರು ಮಾತ್ರ, ಕೋವಿಡ್‌ಗೆ ಔಷಧ ಬಂದಿದೆ. ಸರ್ಕಾರವು ಶಾಲೆಗಳನ್ನು ಬಿಟ್ಟು ಉಳಿದೆಲ್ಲ ಕಾರ್ಯ ಚಟುವಟಿಕೆ ಆರಂಭ ಮಾಡಿದೆ. ಮಾರುಕಟ್ಟೆ ತೆರೆದಿವೆ. ಚಿತ್ರ ಮಂದಿರಕ್ಕೂ ಅನುಮತಿ ಕೊಟ್ಟಿದೆ. ಜಾತ್ರೆ,  ಸಂತೆಗಳು ನಡೆಯುತ್ತಿವೆ. ಮಕ್ಕಳ ಶಾಲೆ ಆರಂಭಕ್ಕೆ ಮೀನಮೇಷ ಎಣಿಸುವುದು ತರವಲ್ಲ. ಕೂಡಲೇ ಎಲ್ಲ ಶಾಲೆಗಳನ್ನು  ಆರಂಭಿಸಿ ಎನ್ನುವ ಒತ್ತಾಯ ಕೇಳಿ ಬಂದಿದೆ.

 

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.