ಕೊಪ್ಪಳ: ನೆರೆಪೀಡಿತ ಹಳ್ಳಿಗಳ ಮೇಲೆ ನಿಗಾ ಇಡಿ

ಒಂದೇ ತಿಂಗಳಲ್ಲಿ ಮನೆಹಾನಿ ಮಾಲೀಕರಿಗೆ ಪರಿಹಾರ ಖಾತೆಗೆ ಜಮೆಯಾಗಿದೆ.

Team Udayavani, May 29, 2023, 4:05 PM IST

ಕೊಪ್ಪಳ: ನೆರೆಪೀಡಿತ ಹಳ್ಳಿಗಳ ಮೇಲೆ ನಿಗಾ ಇಡಿ

ಕೊಪ್ಪಳ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಗಳು ಆರಂಭವಾಗಿದ್ದು, ರೈತಾಪಿ ವಲಯವೂ ಮಳೆಯ ನಿರೀಕ್ಷೆಯಲ್ಲಿದೆ. ಆದರೆ ಮಳೆಯ ಅವಾಂತರದ ಬಗ್ಗೆ ಜಿಲ್ಲಾಡಳಿತ ಮೊದಲೇ ಎಚ್ಚೆತ್ತುಕೊಳ್ಳಬೇಕಿದೆ. ಈಗಾಗಲೇ ನೆರೆಪೀಡಿತ ಹಳ್ಳಿಗಳನ್ನು ಗುರುತು ಮಾಡಿದ್ದು, ಅವುಗಳ ಮೇಲೆ ನಿಗಾ ಇರಿಸಿ ಜನ ಜಾಗೃತಿ ಮೂಡಿಸುವ ಕಾರ್ಯವೂ ವೇಗವಾಗಿ ನಡೆಸಬೇಕಿದೆ.

ಜಿಲ್ಲೆಯಲ್ಲಿ ಪ್ರತಿ ವರ್ಷದ ಮುಂಗಾರು ಹಂಗಾಮಿನಲ್ಲಿ ಮಳೆಯ ಅಬ್ಬರಕ್ಕೆ ನಗರ ಸೇರಿ ಗ್ರಾಮೀಣ ಭಾಗದ ಜನ ಜೀವನ ಅಸ್ತವ್ಯಸ್ತವಾಗಿ ಪ್ರಯಾಸ ಪಡುವಂತಾಗುತ್ತಿದೆ. ನಗರಕ್ಕಿಂತ ಗ್ರಾಮೀಣ ಪ್ರದೇಶದಲ್ಲಿಯ ತಗ್ಗು ಪ್ರದೇಶಗಳಿಗೆ ಮಳೆಯ ನೀರು ನುಗ್ಗಿ ಜನರು ತುಂಬಾ ತೊಂದರೆ ಎದುರಿಸಿದರೆ, ಗ್ರಾಮೀಣ ಭಾಗದಲ್ಲಿನ ಹಳ್ಳದ ಹಾಗೂ ನದಿಯ ಪಾತ್ರದ ಹಿನ್ನೀರು ಪ್ರದೇಶದ
ಜನರ ಮನೆಗಳಿಗೆ ನೀರು ನುಗ್ಗಿ ಜೀವನ ನಡೆಸುವುದು ಕಷ್ಟಕರವಾಗುತ್ತಿದೆ.

ಕಳೆದ ನಾಲ್ಕೈದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮಳೆಯ ಅವಾಂತರಕ್ಕೆ ಕೊಪ್ಪಳ ತಾಲೂಕಿನ ಹಿರೇಹಳ್ಳ ಜಲಾಶಯ ಎರಡೂ ಬದಿಯ ಜನರು ಆತಂಕ ಎದುರಿಸಿದ್ದರು. ಇದಲ್ಲದೇ ತುಂಗಭದ್ರಾ ನದಿಪಾತ್ರದ ಹಳ್ಳಿಗಳಲ್ಲಿನ ಜನರು ಸಹಿತ ಡ್ಯಾಂನಿಂದ ನೀರು ಹರಿಬಿಟ್ಟಾಗ ಸಂಕಷ್ಟ ಎದುರಿಸಿದ್ದರು. ಮಳೆಯಿಂದಲೇ ನೆರೆ ಸೃಷ್ಟಿಯಾಗಿ ಬಡವರ ಬದುಕು ಪ್ರಯಾಸ ಪಡುವಂತಾಗಿತ್ತು.

3 ವರ್ಷದಲ್ಲಿ 4644 ಮನೆ ಹಾನಿ: ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ನದಿಪಾತ್ರ, ಹಳ್ಳದ ಪಾತ್ರಗಳಲ್ಲಿ ನೀರಿನ ಸೆಳೆತದಿಂದಾಗಿ ಜಿಲ್ಲೆಯಲ್ಲಿ 4644 ಮನೆಗಳು ಹಾನಿಯಾಗಿವೆ. ಇದರಲ್ಲೂ ಭಾಗಶಹ ಮನೆ ಹಾನಿ, ಪೂರ್ಣ ಮನೆ ಹಾನಿ, ಸ್ವಲ್ಪ ಮನೆ ಹಾನಿಯ ಎಂಬಂತೆ ಎಬಿಸಿ ಕೆಟಗರಿ ಮಾಡಿ ಮನೆಗಳಿಗೆ ಮೂರು ವರ್ಷದಲ್ಲಿ ಬರೊಬ್ಬರಿ 25,64,62,401 ರೂ. ಪರಿಹಾರವನ್ನು ಜಿಲ್ಲಾಡಳಿತ ಸಂತ್ರಸ್ಥ ಕುಟುಂಬಗಳಿಗೆ ವಿತರಣೆ ಮಾಡಿದೆ. ಕಳೆದ ಬಾರಿ ಮನೆ ಹಾನಿಯಾದ
ಒಂದೇ ತಿಂಗಳಲ್ಲಿ ಮನೆಹಾನಿ ಮಾಲೀಕರಿಗೆ ಪರಿಹಾರ ಖಾತೆಗೆ ಜಮೆಯಾಗಿದೆ.

ನೆರೆಹಾನಿಗೆ ಬಾಧಿತ ಗ್ರಾಮಗಳು: ಜಿಲ್ಲಾಡಳಿತವು ಮಳೆ ಹಾಗೂ ನೆರೆ ಹಾನಿಯಿಂದ ಬಾ ಧಿತವಾಗುವ ಹಾಗೂ ಸ್ಥಳಾಂತರಗೊಳಿಸಬಹುದಾದ ಗ್ರಾಮಗಳ ಪಟ್ಟಿ ಮಾಡಿದ್ದು, ಈ ಪೈಕಿ ಗಂಗಾವತಿ ತಾಲೂಕಿನಲ್ಲಿ ಶಾಲಿಗನೂರು, ಕುಂಟೋಜಿ, ಕಕ್ಕರಗೋಳ, ನಂದಿಹಳ್ಳಿ, ಕರಡೋಣ, ಕುಷ್ಟಗಿ ತಾಲೂಕಿನಲ್ಲಿ ಬನ್ನಟ್ಟಿ, ಪುರ್ತಗೇರಿ, ಕಡೂರು, ವಕ್ಕಂದುರ್ಗ, ಕೊಪ್ಪಳ ತಾಲೂಕಿನಲ್ಲಿ ಹಿರೇಸಿಂದೋಗಿ, ಗುನ್ನಳ್ಳಿ, ಕಾಟ್ರಳ್ಳಿ, ಇರಕಲ್‌ಗ‌ಡಾ, ಮಾದಿನೂರು, ಕೋಳೂರು, ಕಾಟ್ರಳ್ಳಿ, ನರೇಗಲ್‌, ಗೊಂಡಬಾಳ ಭಾಗಶಃ ಹಾನಿಯಾಗುವ ಕುರಿತು ಪಟ್ಟಿ ಮಾಡಿದೆ. ಇವುಗಳ ಮೇಲೆ ಜಿಲ್ಲಾಡಳಿತವು ಮಳೆಯಾಗುವ ಮೊದಲೇ ನಿಗಾ ವಹಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ.

ಜಿಲ್ಲಾಡಳಿತ ಮನೆ ಹಾನಿಯಾದ ಮಾಲೀಕರಿಗೆ ಕಳೆದ ಕೆಲ ವರ್ಷಗಳಿಂದ ತೀವ್ರಗತಿಯಲ್ಲಿ ಪರಿಹಾರ ವಿತರಣೆ ಮಾಡುತ್ತಿದೆ. ಅದರಂತೆ ಈ ಬಾರಿ ಮಳೆಯಿಂದ ಮನೆ ಅಥವಾ ಆಸ್ತಿಯು ಹಾನಿಯಾದರೆ ತಕ್ಷಣ ಪರಿಹಾರ ಜನರ ಖಾತೆಗೆ ಹಾಕಿದರೆ ಮನೆ ದುರಸ್ತಿಗೂ ಕುಟುಂಬಕ್ಕೆ ಅನುಕೂಲವಾಗಲಿದೆ.

ಜಿಲ್ಲೆಯಲ್ಲಿ ಮುಂಗಾರು ಮಳೆ ಹಾನಿ ಬಗ್ಗೆ ಮೊದಲೇ ನಿಗಾ ವಹಿಸಿದ್ದೇವೆ. ಮಳೆಯಿಂದ ಜಾಗೃತಿ ಕುರಿತು ಸಿಎಂ ಸಹಿತ
ಕೆಲವೊಂದು ಸೂಚನೆ ಕೊಟ್ಟಿದ್ದಾರೆ. ಮನೆ ಹಾನಿಗೆ ಶೀಘ್ರ ಪರಿಹಾರ ವಿತರಣೆ ಮಾಡುತ್ತಿದ್ದೇವೆ. ಇದಲ್ಲದೇ ಮಾನವ ಹಾನಿಗೆ 24 ಗಂಟೆಯಲ್ಲಿ ಹಾಗೂ ಪ್ರಾಣಿ ಹಾನಿಗೆ 48 ಗಂಟೆಯಲ್ಲಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುತ್ತಿದೆ. ಮಳೆಯ ಬಗ್ಗೆಯೂ ಜಾಗೃತರಾಗಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ.
ಸುಂದರೇಶ ಬಾಬು,
ಕೊಪ್ಪಳ ಜಿಲ್ಲಾಧಿಕಾರಿ

*ದತ್ತು ಕಮ್ಮಾರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.