ಅಂತೂ ಉಳಿಯಿತು ಕೊಪ್ಪಳ ಮೆಡಿಕಲ್ ಕಾಲೇಜು!

019-20ನೇ ಸಾಲಿಗೆ 150 ಸೀಟ್ ಪ್ರವೇಶ ಲಭ್ಯ ಎಂಸಿಐನಿಂದ ಕಾಲೇಜಿಗೆ ಸಿಕ್ತು ಗ್ರೀನ್‌ ಸಿಗ್ನಲ್ ಕಿಮ್ಸ್‌ ಕೊರತೆ ನಿವಾರಣೆಗೆ ಕ್ರಮ

Team Udayavani, May 29, 2019, 10:58 AM IST

kopala-tdy-2..

ಕೊಪ್ಪಳ: ನಗರದ ಕಿಮ್ಸ್‌ನಲ್ಲಿ ನಿರ್ದೇಶಕ ಡಾ| ಭಂಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೊಪ್ಪಳ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೊಪಳ ಮೆಡಿಕಲ್ ಕಾಲೇಜಿನಲ್ಲಿ ಸೌಕರ್ಯಗಳ ಕೊರತೆ ಎದುರಿಸಿ ಮುಚ್ಚಿ ಹೋಗುವುದೇನೋ ಎನ್ನುವ ಆತಂಕದಲ್ಲಿದ್ದ ಪಾಲಕರಿಗೆ ಎಂಸಿಐ ನಿರಾತಂಕ ಮೂಡಿಸಿದೆ. 2019-20ನೇ ಸಾಲಿಗೆ 150 ಸೀಟುಗಳ ಪ್ರವೇಶಾತಿಗೆ ಗ್ರೀನ್‌ ಸಿಗ್ನಲ್ ಕೊಟ್ಟಿದೆ. ಕಿಮ್ಸ್‌ ಶೇ.93ರಷ್ಟು ಕೊರತೆ ನೀಗಿಸಿದೆ ಎಂದು ನಿರ್ದೇಶಕ ಡಾ| ಭಂಟ್ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿಗೆ ಕೊಪ್ಪಳ ಮೆಡಿಕಲ್ ಕಾಲೇಜು ಹಲವು ಮೂಲ ಸೌಕರ್ಯಗಳನ್ನು ಎದುತಿಸುತ್ತಿತ್ತು. ಎಂಸಿಐ ಸಹಿತ ಕಾಲೇಜಿಗೆ ಭೇಟಿ ನೀಡಿ ಇಲ್ಲಿನ ಬೋಧನಾ ಸಿಬ್ಬಂದಿ ಸೇರಿ ಇತರೆ ಸಮಸ್ಯೆಗಳ ಕುರಿತು 22 ಅಂಶಗಳನ್ನು ಪಟ್ಟಿ ಮಾಡಿ ಬಹುತೇಕ ಮುಚ್ಚುವ ಹಂತಕ್ಕೆ ಬಂದು ತಲುಪಿತ್ತು. ಹಲವು ಪ್ರಯತ್ನಗಳ ಬಳಿಕ ನಾವು ಕಿಮ್ಸ್‌ನಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡುವ ಜೊತೆಗೆ ಎಂಸಿಐ ಸಿದ್ದಪಡಿಸಿದ್ದ 22 ನ್ಯೂನತೆಗಳ ಅಂಶಗಳ ಬಗ್ಗೆ ಗಮನ ನೀಡಿದ ಫಲವಾಗಿ ಶೇ.93ರಷ್ಟು ಸೌಲಭ್ಯಗಳ ಕೊರತೆ ನೀಗಿಸಿದ್ದೇವೆ ಎಂದರು.

ಈ ಹಿಂದೆ ಸರ್ಕಾರ ಘೋಷಣೆ ಮಾಡಿದ್ದ 6 ಮೆಡಿಕಲ್ ಕಾಲೇಜುಗಳಲ್ಲಿ ಕಲಬುರಗಿ ಹಾಗೂ ಕೊಪ್ಪಳ ಎರಡೇ ಮೆಡಿಕಲ್ ಕಾಲೇಜಿಗೆ ಮಾತ್ರ ಎಂಸಿಐ ಪ್ರಸಕ್ತ ವರ್ಷದಲ್ಲಿ 150 ಸೀಟು ಪ್ರವೇಶಾತಿಗೆ ಅಧಿಕೃತ ಗ್ರೀನ್‌ ಸಿಗ್ನಲ್ ನೀಡಿದೆ. ಉಳಿದ ನಾಲ್ಕು ಕಾಲೇಜುಗಳಿಗೆ ಭರವಸೆ ನೀಡಿಲ್ಲ. ಈ ಹಿಂದೆ ಏನೆಲ್ಲ ಬೆಳವಣಿಗೆಗಳು ನಡೆದಿರಬಹುದು. ನಾವು ಬಂದ ಬಳಿಕ ಸ್ವಲ್ಪ ಮಟ್ಟಿಗೆ ಬದಲಾವಣೆ ಮಾಡಿದ್ದೇವೆ ಎಂದರು.

ಕಾಲೇಜಿನಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿವೆ. ಅವೆಲ್ಲವುಗಳನ್ನು ನಾವು ಬಗೆ ಹರಿಸಲಿದ್ದು, ಬೋಧಕ ಸಿಬ್ಬಂದಿಗೆ 2-3 ಬಾರಿ ಸಂದರ್ಶನ ನಡೆಸಿ ನೇಮಕ ಮಾಡಿಕೊಂಡಿದ್ದೇವೆ. ಜೊತೆಗೆ ವಿದ್ಯಾರ್ಥಿಗಳ ಊಟದ ವ್ಯವಸ್ಥೆ, ಕೊಠಡಿ, ಕುಡಿಯುವ ನೀರಿನ ಸಮಸ್ಯೆ ತಕ್ಕ ಮಟ್ಟಿಗೆ ನಿವಾರಣೆ ಮಾಡಿದ್ದೇವೆ. ತುಂಗಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ ಕಾಲೇಜು ಆವರಣದಲ್ಲೇ ಏಳು ಬೋರ್‌ವೆಲ್ ಕೊರೆಯಿಸಿದ್ದು, ಅಲ್ಪ ಪ್ರಮಾಣದ ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಮೆಡಿಕಲ್ ಕಾಲೇಜು ಜಿಲ್ಲಾಸ್ಪತ್ರೆಯ ಸಮನ್ವಯದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸದ್ಯ 700 ಹಾಸಿಗೆಯುಳ್ಳ ಆಸ್ಪತ್ರೆ ನಮಗೆ ಅವಶ್ಯಕತೆಯಿದ್ದು, ಎಂಸಿಐ ನಿಯಮದ ಪ್ರಕಾರ 500 ಬೆಡ್‌ ಇರುವಷ್ಟು ತೋರಿಸಿದ್ದೇವೆ. ಮುಂದಿನ ಎರಡು ವರ್ಷಗಳಲ್ಲಿ ಕಿಮ್ಸ್‌ 2 ಸಾವಿರ ಬೆಡ್‌ ಒಳಗೊಂಡ ಆಸ್ಪತ್ರೆಯಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ| ಎಸ್‌.ಬಿ. ದಾನರಡ್ಡಿ ಸೇರಿದಂತೆ ಕಿಮ್ಸ್‌ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.