ಕೊಪ್ಪಳ: ರಾಜಕಾಲುವೆ ಒತ್ತುವರಿ; ನಗರಸಭೆ ಮೌನ

ಗಡಿಯಾರ ಕಂಬದವರೆಗೂ ಒತ್ತುವರಿ ಈಗಲೂ ನಡೆದಿದೆ. 

Team Udayavani, Jun 3, 2023, 6:27 PM IST

ಕೊಪ್ಪಳ: ರಾಜಕಾಲುವೆ ಒತ್ತುವರಿ; ನಗರಸಭೆ ಮೌನ

ಕೊಪ್ಪಳ: ನಗರದ ಮಧ್ಯ ಭಾಗದಲ್ಲಿ ಹಾದು ಹೋಗಿರುವ ಕಾಲುವೆ ಬಗ್ಗೆ ನಗರಸಭೆ ತುಂಬಾ ನಿರ್ಲಕ್ಷ್ಯ ವಹಿಸಿದೆ. ಸಿರಸಪ್ಪಯ್ಯನಮಠದಿಂದ ರೈಲ್ವೆ ಹಳಿಯವರೆಗೂ ಎರಡೂ ಬದಿ ಹಾಗೂ ಮಧ್ಯದಲ್ಲಿ ಮನೆ, ಶೆಡ್‌ ನಿರ್ಮಿಸಿಕೊಂಡು, ಕಾಲುವೆ ಒತ್ತುವರಿ ಮಾಡಿದ್ದರೂ ನಗರಸಭೆ ಕಣ್ಮುಚ್ಚಿ ಕುಳಿತಿರುವುದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ.

ಕೊಪ್ಪಳದ ರಾಜಕಾಲುವೆ ಈಗ ನಿರ್ಮಾಣ ಮಾಡಿಲ್ಲ. ಹಿಂದೆ ನಿಜಾಮ ಕಾಲಾವಧಿಯಿಂದ ಕಾಲುವೆಯ ನಿರ್ಮಾಣದ ಚಹರೆ ಹೊಂದಿದೆ. ಮೊದಲು ನಗರದ ಜನಸಂಖ್ಯೆ ಕಡಿಮೆ ಪ್ರಮಾಣದಲ್ಲಿದ್ದ ಕಾರಣ ಕಾಲುವೆಯ ಬಗ್ಗೆ ಅಷ್ಟೊಂದು ಕಾಳಜಿ ಯಾರಿಗೂ ಇರಲಿಲ್ಲ. ಆದರೆ ಇತ್ತೀಚೆಗಿನ ವರ್ಷದಲ್ಲಿ ಜನ ಸಾಂಧ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಕಾಲುವೆ ಮಹತ್ವ ಪಡೆದಿದೆ.

ಪ್ರಸ್ತುತ ರಾಜಕಾಲುವೆ ಸಿರಸಪ್ಪಯ್ಯನಮಠದ ಸಮೀಪದಿಂದ ಆರಂಭವಾಗಿ ಕೋಟೆ ರಸ್ತೆ, ಹಸನ್‌ ರಸ್ತೆ ಮಾರ್ಗವಾಗಿ ಪೊಲೀಸ್‌ ಠಾಣೆ ಪಕ್ಕದಲ್ಲಿ ಹಾದು ನೇರ ಹೊಸ ಬಸ್‌ ನಿಲ್ದಾಣದ ಪಕ್ಕದಲ್ಲಿ ಸಾಗಿ ನಂತರದಲ್ಲಿ ರೈಲ್ವೆ ಹಳಿ ದಾಟಿ ಗಣೇಶ ನಗರಕ್ಕೆ ಹೊಂದಿಕೊಂಡಂತೆ ಹಿರೇಹಳ್ಳಕ್ಕೆ ಈ ಕಾಲುವೆ ಸಂಪರ್ಕ ಪಡೆದುಕೊಂಡಿದೆ. ಈ ಕಾಲುವೆಯ ಎರಡೂ ಬದಿಯಲ್ಲಿ ಒತ್ತುವರಿ
ಮಾತ್ರ ಭರ್ಜರಿಯಾಗಿ ನಡೆದಿರುವುದು ಗುಟ್ಟಾಗಿ ಉಳಿದಿಲ್ಲ. ಕಾಲುವೆ ಮಧ್ಯದಲ್ಲಿಯೇ ಪಿಲ್ಲರ್‌ ನಿರ್ಮಿಸಿಕೊಂಡು ಬಹುಪಾಲು ಜನರು ಮನೆ-ಕಾಂಪ್ಲೆಕ್ಸ್‌ಗಳನ್ನು ನಿರ್ಮಿಸಿಕೊಂಡಿರುವುದು ಕಣ್ಮುಂದೆಯೇ ಇದೆ. ಇನ್ನು ಸಿರಸಪ್ಪಯ್ಯನಮಠದ ಹತ್ತಿರದ ದಿಡ್ಡಿಕೇರಿ, ಮಿಟ್ಟಿಕೇರಿ, ಗಡಿಯಾರ ಕಂಬದವರೆಗೂ ಒತ್ತುವರಿ ಈಗಲೂ ನಡೆದಿದೆ.

ಕೆಲ ನಿವಾಸಿಗಳು ಯಾರ ಭಯವೂ ಇಲ್ಲದೆ ಮನೆ, ಶೆಡ್‌ ನಿರ್ಮಿಸಿಕೊಳ್ಳಲು ಪಿಲ್ಲರ್‌ ಅಳವಡಿಕೆ ಮಾಡಿದ್ದಾರೆ. ಕೆಲವರಂತೂ ಚರಂಡಿ ಮಧ್ಯದಲ್ಲಿಯೇ ಮನೆ ನಿರ್ಮಾಣಕ್ಕೂ ಸಜ್ಜಾಗಿದ್ದಾರೆ. ಕೆಲವರು ವಿರೋಧಿಸಿ ನಗರಸಭೆ ಅಧಿಕಾರಿಗಳು, ಸದಸ್ಯರಿಗೆ ಹಲವು ಬಾರಿ ದೂರು ನೀಡಿದರೂ ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ. ಅಚ್ಚರಿ ಎಂಬಂತೆ ಹಿಂದೆ ಮಹೇಂದ್ರ ಛೋಪ್ರಾ, ಲತಾ ವೀರಣ್ಣ ಸಂಡೂರು ಸೇರಿದಂತೆ ಹಲವರು ಅಧ್ಯಕ್ಷರಾಗಿ ಅಧಿಕಾರ ನಿರ್ವಹಿಸುವಾಗ ರಾಜಕಾಲುವೆ ಅಕ್ರಮ ಒತ್ತುವರಿ ಗುರುತಿಸಲು ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡಲಾಗಿತ್ತು.

ಕೆಲವೆಡೆ ಒತ್ತುವರಿ ತೆರವು ಮಾಡುವಂತೆಯೂ ಸೂಚನೆ ನೀಡಲಾಗಿತ್ತು. ಆದರೆ ಅಧಿಕಾರಿ ವರ್ಗ ತೆರವಿಗೆ ಮುಂದಾಗುತ್ತಿದ್ದಂತೆ ರಾಜಕೀಯ ಒತ್ತಡ ತಂದು ತಡೆ ಹಿಡಿಯುವ ಪ್ರಯತ್ನ ಮಾಡಲಾಯಿತು. ಇದರಿಂದ ಇಲ್ಲಿ ಯಾವುದೇ ಕೆಲಸಗಳು ನಡೆದಿಲ್ಲ.

ಮಳೆ ಬಂದಾಗ ಮನೆ ಮನೆಯಲ್ಲಿ ನೀರು: ಪ್ರಸ್ತುತ ಮಳೆಗಾಲ ಆರಂಭವಾಗಿದೆ. ಮಳೆ ಬಂದರೆ ಈ ರಾಜ ಕಾಲುವೆ ಮೂಲಕವೇ ಇಡೀ ಕೊಪ್ಪಳ ನಗರದ ನೀರು ಸಾಗಿ ಹಿರೇಹಳ್ಳಕ್ಕೆ ಸೇರುತ್ತದೆ. ಆದರೆ ಅಲ್ಲಲ್ಲಿ ಮನೆ, ಶೆಡ್‌ ನಿರ್ಮಿಸಿ ಒತ್ತುವರಿ ಮಾಡಿದ್ದರಿಂದ ಮಳೆ ಬಂದಾಗ ನೀರು ಸರಾಗವಾಗಿ ಹರಿಯದೇ ಅಕ್ಕ ಪಕ್ಕದ ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಳಿಸುತ್ತದೆ. ಇಲ್ಲಿ ನಗರಸಭೆ ಅಧಿಕಾರಿಗಳು ಯಾವುದೇ ದಿಟ್ಟ ನಿರ್ಧಾರ ಕೈಗೊಳ್ಳದೇ ಇರುವುದು ಸಾರ್ವಜನಿಕರಲ್ಲಿ ಬೇಸರ ತರಿಸಿದೆ.

ನಮ್ಮ ದಿಡ್ಡಿಕೇರಿ, ಮಿಟ್ಟಿಕೇರಿ ಭಾಗದಲ್ಲಿ ರಾಜಕಾಲುವೆಯನ್ನು ಎಲ್ಲೆಂದರಲ್ಲಿ ಒತ್ತುವರಿ ಮಾಡಲಾಗಿದೆ. ಈ ಬಗ್ಗೆ ನಗರಸಭೆ ಅಧಿ ಕಾರಿಗಳಿಗೆ ಸಂಬಂಧಿಸಿದ ಸದಸ್ಯರಿಗೆ ಹಲವು ಬಾರಿ ಮನವಿ ಮಾಡಿ ತೆರವಿಗೆ ಹೇಳಿದ್ದೇವೆ. ಆದರೆ ಯಾರೂ ಈ ಬಗ್ಗೆ ಸ್ಪಂದಿಸುತ್ತಿಲ್ಲ. ಕಾಲುವೆ ಮಧ್ಯದಲ್ಲಿ ಕೆಲವರು ಮನೆ ನಿರ್ಮಿಸಿಕೊಳ್ಳಲು ಮುಂದಾಗಿ ಸ್ಥಳೀಯ ಜನರಿಗೆ ತೊಂದರೆಯಾಗುವಂತೆ ಮಾಡುತ್ತಿದ್ದಾರೆ.
ನಾಗರಾಜ ವಾಲಿಕಾರ, ಮಿಟ್ಟಿಕೇರಿ ನಿವಾಸಿ.

*ದತ್ತು ಕಮ್ಮಾರ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.