ಕೊಪ್ಪಳ: ತಾಪಂ ಸದಸ್ಯ ಚಂದ್ರಕಾಂತ ಅಕಾಲಿಕ ನಿಧನ
Team Udayavani, Sep 8, 2020, 9:51 PM IST
ಕೊಪ್ಪಳ: ತಾಲೂಕಿನ ಕುಣಕೇರಿ ತಾಪಂ ಸದಸ್ಯ ಚಂದ್ರಕಾಂತ್ ನಾಯಕ ಅವರು (೩೮) ಮಂಗಳವಾರ ಅಕಾಲಿಕ ನಿಧನರಾಗಿದ್ದಾರೆ. ಬಿಜೆಪಿ ತಾಪಂ ಸದಸ್ಯರಾಗಿ ರಾಜಕೀಯ ಜೀವನ ಕಂಡುಕೊಂಡಿದ್ದ ಅವರು ಎಲ್ಲ ವರ್ಗದ ಜನರ ಒಡನಾಡಿಯಾಗಿದ್ದರು.
ಚಂದ್ರಕಾಂತ್ ಅವರು ಕೆಲ ತಿಂಗಳ ಹಿಂದೆ ಕಾಲಿಗೆ ಪೆಟ್ಟಾಗಿ ಚಿಕಿತ್ಸೆ ಪಡೆದು ಮನೆಯಲ್ಲಿ ತಿಂಗಳಿಗೂ ಹೆಚ್ಚುಕಾಲ ವಿಶ್ರಾಂತಿ ಪಡೆದಿದ್ದರು. ಈಚೆಗಷ್ಟೆ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು. ಆದರೆ ಮಂಗಳವಾರ ಏಕಾ ಏಕಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ಸಂಸದ ಸಂಗಣ್ಣ ಕರಡಿ, ಬಿಜೆಪಿ ಮುಖಂಡರಾದ ಸಿ.ವಿ.ಚಂದ್ರಶೇಖರ, ಅಮರೇಶ ಕರಡಿ, ತೋಟಪ್ಪ ಕಾಮನೂರು ಸೇರಿ ಪಕ್ಷಾತೀತವಾಗಿ ಗಣ್ಯಾತೀತರು ಕಂಬನಿ ಮಿಡಿದಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್