ಕೀನ್ಯಾದಲ್ಲಿ ಕೊಪ್ಪಳ ಜಿಪಂ ಸಿಇಒ ಶೌಚ ಕ್ರಾಂತಿ ಪಾಠ


Team Udayavani, Jul 7, 2018, 6:00 AM IST

koppal-zilla-panchayat.jpg

ಕೊಪ್ಪಳ: ಶೌಚಾಲಯ ನಿರ್ಮಾಣದಲ್ಲಿ ರಾಷ್ಟ್ರಮಟ್ಟದಲ್ಲಿ ಕ್ರಾಂತಿಗೆ ಮುನ್ನುಡಿ ಬರೆದ ಕೊಪ್ಪಳ ಜಿಲ್ಲಾ ಪಂಚಾಯತ್‌
ಸಿಇಒ ವೆಂಕಟ ರಾಜಾ ಅವರು ಜು.9ರಿಂದ ಕೀನ್ಯಾ ದೇಶದಲ್ಲಿ ನಡೆಯುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ
ಸ್ವಚ್ಛತೆ ಹಾಗೂ ಆರೋಗ್ಯದ ಕುರಿತು ಉಪನ್ಯಾಸ ನೀಡಲು ಭಾರತ ಸರ್ಕಾರದ ಏಕೈಕ ಪ್ರತಿನಿಧಿಯಾಗಿ
ಆಯ್ಕೆಯಾಗಿದ್ದಾರೆ.

ಶೌಚಾಲಯ ನಿರ್ಮಾಣಕ್ಕಾಗಿ ಉಪವಾಸ ಕುಳಿತಿದ್ದ ಡಣಾಪುರದ ಮಲ್ಲಮ್ಮ ಸೇರಿ ನೂರಾರು ವಿದ್ಯಾರ್ಥಿಗಳ
ಪತ್ರ ಚಳವಳಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ಮಲ್ಲಮ್ಮನಲ್ಲಿನ ಜಾಗೃತಿಯ ಮನೋಭಾವ ಅರಿತ ಪ್ರಧಾನಿ
ನರೇಂದ್ರ ಮೋದಿ ಅವರೇ ತಮ್ಮ ಮನ್‌ ಕಿ ಬಾತ್‌ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದರು.

ಇದರ ಜತೆಗೆ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಕೊಪ್ಪಳ ಜಿಪಂ ಹಗಲು ರಾತ್ರಿ ಎನ್ನದೇ ಕೆಲಸ ಮಾಡಿದೆ.
ವಿವಿಧ ಪ್ರಯೋಗ ನಡೆಸಿ ಜನರಲ್ಲಿ ಸ್ವಚ್ಛತೆ ಹಾಗೂ ಆರೋಗ್ಯದ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಇಲ್ಲಿನ ಯಶಸ್ವಿ ಕಥೆ ಕುರಿತು ಸ್ವಚ್ಛ ಭಾರತ್‌ ಮಿಷನ್‌ ಹಾಗೂ ಯುನೆಸೆಫ್‌ ಸಹಯೋಗದಲ್ಲಿ ನಡೆಯುವ ರಾಷ್ಟ್ರಮಟ್ಟದ
ಸಮ್ಮೇಳನದಲ್ಲಿ ಕೊಪ್ಪಳ ಜಿಪಂ ಸಿಇಒ ವೆಂಕಟರಾಜಾ ಅವರು ವಿಷಯ ಮಂಡಿಸಲಿದ್ದಾರೆ. ಹಿಂದುಳಿದ ಜಿಲ್ಲೆಯಲ್ಲಿನ
ಯಶೋಗಾಥೆ ಅಂಶಗಳನ್ನು ಗಮನಿಸಿದ ಯುನೆಸೆಫ್‌, ವೆಂಕಟರಾಜಾ ಅವರನ್ನು ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ
ಆಯ್ಕೆ ಮಾಡಿದೆ.

ಕಿನ್ಯಾ ದೇಶದಲ್ಲಿ ನಡೆಯುವ ಸಮ್ಮೇಳನ: ಯು.ಕೆ. ಲೋಗೋಬ್ರೋ ವಿಶ್ವವಿದ್ಯಾಲಯ ಪ್ರತಿ ವರ್ಷವೂ
ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸುತ್ತದೆ. ಈ ಬಾರಿ 41ನೇ ಸಮ್ಮೇಳನ ಇದಾಗಿದ್ದು, ಜು.9ರಿಂದ 13ರವರೆಗೆ 5 ದಿನಗಳ ಕಾಲ ಕಿನ್ಯಾ ದೇಶದ ನಾಕೂರು ಪ್ರದೇಶದ ಎಗರಟನ್‌ ವಿವಿಯಲ್ಲಿ ನಡೆಸಲು ಉದ್ದೇಶಿಸಿದೆ.

ಸುಮಾರು 40 ದೇಶಗಳಿಂದ 400 ವಿವಿಧ ತಜ್ಞರು, ವಿಷಯ ಪರಿಣತರು ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ
ಹಿಂದುಳಿದ ಜಿಲ್ಲೆಯಲ್ಲಿ ಸರ್ಕಾರ ಹಾಗೂ ಆಡಳಿತ ವರ್ಗವು ಸಾರ್ವಜನಿಕರೊಂದಿಗೆ ಆರೋಗ್ಯ ಹಾಗೂ ಸ್ವಚ್ಛತೆಯ ಬಗ್ಗೆ ಹೇಗೆ ಜಾಗೃತಿ ಮೂಡಿಸಿದೆ. ಹಿಂದುಳಿದ ಜಿಲ್ಲೆಯಲ್ಲಿ ಏನು ಸಮಸ್ಯೆ ಇದ್ದವು ಎನ್ನುವ ಕುರಿತು ಸಿಇಒ ವೆಂಕಟರಾಜಾ ಸಮ್ಮೇಳನದಲ್ಲಿ ವಿವರಿಸಲಿದ್ದಾರೆ.

ದೇಶದ ಏಕೈಕ ಪ್ರತಿನಿಧಿ: ಅಭಿವೃದಿಟಛಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ
ಸೇರಿ ಆರೋಗ್ಯದ ಬಗ್ಗೆ ಜಾಗೃತಿ, ಯಶಸ್ವಿಯ ಕುರಿತು ವಿಶ್ವಮಟ್ಟದ ವಿವಿಧ ಸಂಸ್ಥೆಗಳು ಸಮ್ಮೇಳನದಲ್ಲಿ ಕೇಂದ್ರ
ಸರ್ಕಾರದ ಸ್ವಚ್ಛ ಭಾರತ ಮಿಷನ್‌ ಹಾಗೂ ಯೂನೆಸೆಫ್‌ನಿಂದ ಫೆಬ್ರವರಿಯಲ್ಲಿ ನಡೆದಿದ್ದ ಸಮ್ಮೇಳನದಲ್ಲಿ
ವೆಂಕಟರಾಜಾ ವಿವರಣೆ ಮಂಡಿಸಿದ್ದರು. ಹಾಗಾಗಿ ಕೊಪ್ಪಳ ಜಿಲ್ಲೆ ಹಿಂದುಳಿದಿದ್ದು, ಅಲ್ಲಿನ ಯಶೋಗಾಥೆಯ
ಕುರಿತು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಕೇಂದ್ರ ಸರ್ಕಾರದ ಏಕೈಕ ಪ್ರತಿನಿಧಿಯಾಗಿ ಅವರನ್ನು ಉಪನ್ಯಾಸ
ನೀಡಲು ಆಯ್ಕೆ ಮಾಡಿದೆ.

ಕೀನ್ಯಾ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಸಮ್ಮೇಳನನಲ್ಲಿ ಆರೋಗ್ಯ ಹಾಗೂ ಸ್ವಚ್ಛತೆಯ ಬಗ್ಗೆ ಉಪನ್ಯಾಸ ನೀಡಲು ತೆರಳುತ್ತಿದ್ದೇನೆ. ಜು.9ರಿಂದ 13ರವರೆಗೆ ಸಮ್ಮೇಳನ ನಡೆಯಲಿದ್ದು, ವಿವಿಧ ದೇಶಗಳ ಜನರು ಪಾಲ್ಗೊಳ್ಳಲಿದ್ದಾರೆ. ಅಲ್ಲಿ ನಮ್ಮ ಜಿಲ್ಲೆಯಲ್ಲಿನ ಯಶೋಗಾಥೆ ಹಾಗೂ ಸಮಸ್ಯೆಗಳ ಕುರಿತು ವಿವರಣೆ ನೀಡಲಿದ್ದೇನೆ.
– ವೆಂಕಟರಾಜಾ, ಕೊಪ್ಪಳ ಜಿಪಂ ಸಿಇಒ

– ದತ್ತು ಕಮ್ಮಾರ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.