ಅನ್ನದಾತರ ಗಾಯದ ಮೇಲೆ ಬರೆ ಎಳೆದ ಸುಳಿರೋಗ


Team Udayavani, Sep 13, 2018, 4:28 PM IST

13-sepctember-28.jpg

ಕೊಪ್ಪಳ: ಜಿಲ್ಲೆಯಲ್ಲಿ ಬರದ ಭೀಕರತೆ ಅನ್ನದಾತನನ್ನು ಪೆಡಂಭೂತವಾಗಿ ಕಾಡುತ್ತಿದ್ದರೆ, ಇತ್ತ ನೀರಾವರಿ ಪ್ರದೇಶದಲ್ಲಿನ ಬೆಳೆಗಳಿಗೆ ನಾನಾ ರೋಗ ಆವರಿಸುತ್ತಿವೆ. ಜಿಂಕೆ ಹಾವಳಿ ಮತ್ತೊಂದೆಡೆ ಹೆಚ್ಚಾಗಿದೆ. ಇದರಿಂದ ರೈತರ ಜೀವನ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

ಜಿಲ್ಲೆಯಲ್ಲಿ ಮೊದಲೇ ಮಳೆಯ ಸಮರ್ಪಕವಾಗಿಲ್ಲ. ಒಣ ಬೇಸಾಯದಲ್ಲಿ ಬಿತ್ತನೆ ಮಾಡಿದ ರೈತರು ಕೈ ಕೈ ಹಿಸುಕಿಕೊಳ್ಳುವಂತಾಗಿದ್ದು, ಕೃಷಿ ಇಲಾಖೆಯೂ ಈಗಾಗಲೇ ಬೆಳೆಹಾನಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿವೆ. ಈ ಮಧ್ಯೆ ನೀರಾವರಿ ಪ್ರದೇಶದಲ್ಲಿ ಕಡಿಮೆ ನೀರಿನಲ್ಲಿಯೂ ಅಲ್ಲಲ್ಲಿ ಬೆಳೆದಿರುವ ಮೆಕ್ಕೆಜೋಳಕ್ಕೆ ಸುಳಿ ರೋಗದ ಬಾಧೆ ಭಯಾನಕವಾಗಿ ಕಾಡುತ್ತಿದೆ. 

ತಾಲೂಕಿನ ಬೆಟಗೇರಿ, ತಿಗರಿ, ಅನುಕುಂಟಿ, ಅಳವಂಡಿ ಸೇರಿದಂತೆ ಮಸಾರಿ ಹಾಗೂ ಎರೆ ಭಾಗದ ರೈತರು ಸುಳಿ ರೋಗಕ್ಕೆ ಬೆಚ್ಚಿ ಬೀಳುತ್ತಿದ್ದಾರೆ. ಮುಂಗಾರಿನ ಮುಂಚೂಣಿಯಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳ ಬೆಳೆಗೆ ಯಾವುದೇ ಸುಳಿರೋಗ ಬೀಳಲಿಲ್ಲ. ಆದರೆ ಮುಂಗಾರಿನ ಕೊನೆ ಅವಧಿಯಲ್ಲಿ ಬಿತ್ತನೆ ಮಾಡಿದ ಬೆಳೆಗಳಿಗೆ ನಾನಾ ರೋಗದ ಬಾಧೆ ಕಾಡುತ್ತಿವೆ. ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆಗೆ ನೊಣಗಳ ಹಾವಳಿ ಕಾಡುತ್ತಿದ್ದರೆ, ಇತ್ತ ನೀರಾವರಿ ಪ್ರದೇಶದ ಬೆಳೆಗೆ ಸುಳಿರೋಗ ಕಾಡುತ್ತಿದೆ.

ಬೆಟಗೇರಿಯ ರೈತ ಭೀಮಣ್ಣ ಕವಲೂರು ಅವರು ಬಿತ್ತನೆ ಮಾಡಿದ 10 ಎಕರೆಯ ಮೆಕ್ಕೆಜೋಳ ಬೆಳೆಗೆ ಸುಳಿರೋಗ ಬಾಧಿಸಿದ್ದು, ಏಷ್ಟೇ ಔಷಧಿ  ಸಿಂಪರಣೆ ಮಾಡಿದರೂ ರೋಗ ನಿಯಂತ್ರಣಕ್ಕೆ ಬರಲಿಲ್ಲ. ಹೀಗಾಗಿ ಬೆಳೆಯನ್ನೇ ನಾಶಪಡಿಸಿದ ಘಟನೆ ನಡೆದಿದೆ. ಇದಲ್ಲದೇ, ಸಿದ್ದಪ್ಪ ಸಜ್ಜನ್‌, ಗವಿಸಿದ್ದಪ್ಪ ನೆರೆಗಲ್‌ ಸೇರಿದಂತೆ ಹಲವು ರೈತರ ಜಮೀನಿನಲ್ಲೂ ಸುಳಿ ರೋಗದ ಬಾಧೆ ಅಧಿಕ ಪ್ರಮಾಣದಲ್ಲಿ ಗೋಚರವಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡೂವರೆ ತಿಂಗಳಿಂದ ಮಳೆಯ ಸುಳಿವಿಲ್ಲ. ಮುಂಗಾರಿನಲ್ಲಿ ಬಿತ್ತನೆ ಮಾಡಿದ ಬೆಳೆಯಲ್ಲವೂ ಹಾನಿಯಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಕೈಗೆ ಬರಬೇಕಾದ ತುತ್ತು ಬಾಯಿಗೆ ಬಾರದಂತಾಯಿತಲ್ಲ ಎಂದು ರೈತರು ನೋವು ತೋಡಿಕೊಳ್ಳುತ್ತಿದ್ದಾರೆ. ಇದನ್ನರಿತ ರಾಜ್ಯ ಸರ್ಕಾರ ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ.

ಒಣ ಬೇಸಾಯದ ಬೆಳೆಯ ಪರಿಸ್ಥಿತಿ ಬರಕ್ಕೆ ನಲುಗಿದರೆ, ಇನ್ನೂ ನೀರಾವರಿ ಪ್ರದೇಶದಲ್ಲಿ ಅಲ್ಪ ನೀರಿನಲ್ಲಿ ಬೆಳೆದ ಬೆಳೆಗಳಿಗೆ ಕೊಪ್ಪಳ-ಯಲಬುರ್ಗಾ ಭಾಗದಲ್ಲಿ ಜಿಂಕೆಗಳ ಹಾವಳಿಗೆ ನಲುಗಿದೆ. ಹಸಿರು ಬೆಳೆ ನೋಡಿ ಬೆಳೆಯಲ್ಲಿ ಸುತ್ತಾಡುವ ಜಿಂಕೆಗಳು ಬೆಳೆಯನ್ನು ಹಾನಿ ಮಾಡುತ್ತಿವೆ. ಇದರ ಜೊತೆಗೆ ರೋಗಗಳ ಬಾಧೆಗೆ ಜಿಲ್ಲೆಯ ರೈತ ಸಮೂಹ ಕೃಷಿಯಿಂದ ವಿಮುಖವಾಗುವಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೃಷಿ ಇಲಾಖೆ, ವಿಜ್ಞಾನಿಗಳು ಕೂಡಲೇ ರೈತರ ಜಮೀನುಗಳಿಗೆ ಭೇಟಿ ನೀಡಿ ಸೂಕ್ತ ಸಲಹೆ, ಮಾರ್ಗದರ್ಶನ ನೀಡಬೇಕಿದೆ. ರೋಗ ಬಾಧೆ ನಿಯಂತ್ರಣಕ್ಕೆ ಸಜ್ಜಾಗಬೇಕಿದೆ.

ನಾನು 10 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದು ಆದರೆ ಸುಳಿ ರೋಗ ಹೆಚ್ಚಾಗಿದೆ. ಇದಕ್ಕೆ ಏಷ್ಟೇ ಔಷಧೋಪಚಾರ ಮಾಡಿದರೂ ನಿಯಂತ್ರಣಕ್ಕೆ ಬರಲಿಲ್ಲ. ಹಾಗಾಗಿ ಬಿತ್ತನೆ ಮಾಡಿದ ಬೆಳೆಯನ್ನು ಸಂಪೂರ್ಣ ನಾಶಪಡಿಸಿದ್ದೇನೆ. ಅಂದಾಜು ಲಕ್ಷ ರೂ. ವೆಚ್ಚ ಮಾಡಿದ್ದೇನೆ. ನಮ್ಮ ಕಷ್ಟ ಯಾರು ಕೇಳ್ತಾರೀ.. ಯಾರೂ ಪರಿಹಾರ ಕೊಡಲ್ಲ.
. ಭೀಮಣ್ಣ ಕವಲೂರು, ಬೆಳೆ ನಾಶಪಡಿಸಿದ ರೈತ

ಬೆಳೆಯಲ್ಲಿ ನೀರಿನ ಕೊರತೆ ಕಡಿಮೆಯಾಗುತ್ತಿದೆ. ಹಾಗಾಗಿ ರೋಗಗಳು ಕಾಣಿಸಿಕೊಳ್ಳುತ್ತಿವೆ. ರೈತರು ಪ್ರತಿ ವರ್ಷವೂ ಒಂದೇ ಜಮೀನಿನಲ್ಲಿ ಒಂದೇ ಬೆಳೆ ಬೆಳೆಯಬಾರದು. ಮೆಕ್ಕೆಜೋಳ ಬಿಟ್ಟು ಬೇರೆ ಬೇರೆ ಬೆಳೆ ಬೆಳೆದರೆ, ರೋಗ ನಿಯಂತ್ರಣ ಮಾಡಬಹುದು. ರೈತರು ಜಮೀನುಗಳ ಬದುಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಣ್ಣಿನ ಫಲವತ್ತತೆ ಹೆಚ್ಚಿಸುವಂತಹ ಸಾವಯವ ಗೊಬ್ಬರ ಬಳಕೆ ಮಾಡಬೇಕು. ಅಂದರೆ ರೋಗ ನಿಯಂತ್ರಣ ಮಾಡಲು ಸಾಧ್ಯವಿದೆ.
. ಎಂ.ಬಿ.ಪಾಟೀಲ, ಕೃಷಿ ವಿಸ್ತರಣಾ ಕೇಂದ್ರದ ಮುಖ್ಯಸ್ಥ.

ದತ್ತು ಕಮ್ಮಾರ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.