ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಶೀಲನೆ ಬಳಿಕ ಹಣ ಬಿಡುಗಡೆ : ಜಿಲ್ಲಾಧಿಕಾರಿ
Team Udayavani, Jun 14, 2022, 3:51 PM IST
ದೋಟಿಹಾಳ: ತಾಲೂಕಿನ 72 ಜನ ಕೊರೋನಾದಿಂದ ಮೃತ ಕುಟುಂಬಗಳಿಗೆ ಪರಿಶೀಲನೆ ಬಳಿಕ ಪರಿಹಾರ ಬಿಡುಗಡೆಗೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ ಕಿಶೋರ್ ತಿಳಿಸಿದರು.
ಜಿಲ್ಲೆಯ ಕುಷ್ಟಗಿ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಜಿಲ್ಲಾಧಿಕಾರಿಗಳು ಮಾತನಾಡಿ, ತಾಲೂಕಿನಲ್ಲಿ 2020-2021 ರಲ್ಲಿ ಒಟ್ಟು ಕೊರೋನಾದಿಂದ 112 ಜನರು ಮತಪಟ್ಟಿದ್ದಾರೆ. ಇದರಲ್ಲಿ ಕೇವಲ 42 ಜನ ಮೃತ ಕುಟುಂಬಗಳಿಗೆ ಮಾತ್ರ ಪರಿಹಾರವಾಗಿ 1.5 ಲಕ್ಷ ರೂ,ಹಣ ಬಿಡುಗಡೆಯಾಗಿದೆ ಎಂದರು.
ಉಳಿದ 70 ಮೃತ ಕುಟುಂಬಗಳಿಗೆ ಪರಿಹಾರ ವಿತರಣೆಯಾಗಿಲ್ಲವೆಂಬ ಪತ್ರಕರ್ತರ ಪ್ರಶ್ನೆಗೆ ಜಿಲ್ಲಾಧಿಕಾರಿಗಳು ಉತ್ತರಿಸಿದರು, ಮೊದಲ ಹಂತದಲ್ಲಿ ಮೃತ ಕುಟುಂಬಗಳಿಗೆ ರಾಜ್ಯ ಸರಕಾರದ 1 ಲಕ್ಷ ರೂಪಾಯಿಗಳು ಹಾಗೂ ಕೇಂದ್ರ ಸರಕಾರ 50 ಸಾವಿರಗಳನ್ನು ಪರಿಹಾರವಾ ಹಣವನ್ನು ವಿತರಿಸಲಾಗಿದೆ. ಆದರೆ, ಎರಡನೇ ಹಂತವಾಗಿ ವಿತರಿಸಬೇಕಾದ ಪರಿಹಾರಕ್ಕಾಗಿ ಇತರೆ ಕಾಯಿಲೆ ಜೊತೆಗೆ ಸ್ಪಷ್ಟವಾದ ಕೊರೋನಾ ವೈರಸ್ ನಿಂದಲೇ ಮೃತಪಟ್ಟ ಬಗ್ಗೆ ದೃಢಿಕರಿಸುವ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಒಂದು ಸಮಿತಿ ರಚನೆ ಮಾಡಲಾಗಿದ್ದು ಈ ಸಮಿತಿ ನೀಡುವ ಪಟ್ಟಿ ಆದಾರರದ ಮೇಲೆ ಪರಿಹಾರ ಹಣ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
ಈ ವೇಳೆ ತಹಶೀಲ್ದಾರ ಎಂ.ಸಿದ್ಧೇಶ, ಉಪ ತಹಶೀಲ್ದಾರ ಮುರಳಿಧರ ಸೇರಿದಂತೆ ಇನ್ನಿತರ ಸಿಬ್ಬಂದಿ ಉಪಸ್ಥಿತರಿದ್ದರು.
-ವರದಿ: ಮಲ್ಲಿಕಾರ್ಜುನ ಮೆದಿಕೇರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ