ಹಕ್ಕಿಪಿಕ್ಕಿ ಜನಾಂಗಕ್ಕೆ ಸೌಲಭ್ಯ ಕಲ್ಪಿಸಿ


Team Udayavani, Feb 9, 2019, 11:03 AM IST

9-february-18.jpg

ಕೊಪ್ಪಳ: ನಗರದ ಸಜ್ಜಿ ಹೊಲದಲ್ಲಿ ಹಲವು ವರ್ಷಗಳಿಂದ ವಾಸ ಮಾಡುತ್ತಿರುವ 25 ಹಕ್ಕಿಪಿಕ್ಕಿ ಕುಟುಂಬಕ್ಕೆ ಜಿಲ್ಲಾಡಳಿತ, ಸರ್ಕಾರ ಶಾಶ್ವತ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಎಂದು ಜಿಲ್ಲಾ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ನಗರಾಭಿವೃದ್ಧಿ ಕೋಶದ ಅಧಿಕಾರಿಗೆ ಮನವಿ ಸಲ್ಲಿಸಿದೆ.

ಸಜ್ಜಿ ಹೊಲದಲ್ಲಿನ ಸ್ಥಳಕ್ಕೆ ಜಿಲ್ಲಾ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಭೇಟಿ ನೀಡಿ ಅಲ್ಲಿನ ಜನರ ಬದಲಾವಣೆಗೆ, ಜಾಗೃತಿಗೆ ಸಮೀಕ್ಷೆ ಕೈಗೊಂಡಿದ್ದು, ಸರಕಾರ ಮಟ್ಟದಲ್ಲಿ ಕೆಲಸ ಮಾಡಲು ನಿರ್ಧರಿಸಿದೆ.

ನಗರದ 12ನೇ ವಾರ್ಡ್‌ನಲ್ಲಿ ಹಕ್ಕಿಪಿಕ್ಕಿ ಸಮುದಾಯವು ಯಾವುದೋ ಒಂದು ಕಾಡಿನಲ್ಲಿ ಬದುಕು ಸಾಗಿಸುವ ರೀತಿಯಲ್ಲಿ ಜೀವನ ನಡೆಸುತ್ತಿದೆ. ಇಲ್ಲಿನ ಜನಾಂಗದ ಬದುಕು ಹಸನ ಮಾಡಲು ತುರ್ತಾಗಿ ಈ ಕೆಲಸಗಳು ಆಗಬೇಕಿದ್ದರೆ ಈ ಎಲ್ಲ ಕುಟುಂಬಗಳಿಗೆ ಅವರು ವಾಸಿಸುತ್ತಿರುವ ಸ್ಥಳದಲ್ಲಿಯೇ ಅವರಿಗೆ ಪಕ್ಕಾ ಮನೆ ನಿರ್ಮಾಣ ಮಾಡಿಕೊಡಬೇಕು. ಸ್ವಚ್ಛ ಭಾರತ್‌ ಮಿಷನ್‌ ಅಥವಾ ಇತರೆ ಯೋಜನೆಯಲ್ಲಿ ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡಬೇಕು. ಇಲ್ಲಿನ 23 ಮಕ್ಕಳು ಕೊಟಗಾರಗೇರಾ ಸ.ಹಿ.ಪ್ರಾ. ಶಾಲೆಯಲ್ಲಿ ಓದುತ್ತಿದ್ದು, ಕೆಲವರನ್ನು ಹೊರತುಪಡಿಸಿ ಉಳಿದ ಮಕ್ಕಳು ನಿರಂತರ ಶಾಲೆಗೆ ಗೈರು ಹಾಜರಾಗಿದ್ದಾರೆ. ಅವರ ಶಿಕ್ಷಣ ತುಂಬಾ ಕೆಳಹಂತದಲ್ಲಿದೆ. ಅವರಿಗೆ ಅವಶ್ಯವಿದ್ದಲ್ಲಿ, ಹಾಸ್ಟೆಲ್‌ ಅನುಕೂಲ ಮಾಡಿಕೊಡಬೇಕು. ಉಚಿತ ವಿದ್ಯುತ್‌ ಸಂಪರ್ಕ, ಉಜ್ವಲ್‌ ಸೌಲಭ್ಯ, ಈ ಸ್ಥಳಕ್ಕೆ ಸಂಪರ್ಕ ರಸ್ತೆ ಮತ್ತು ಅಲ್ಲಿ ಕಾಂಕ್ರೀಟ್ ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡಿಕೊಡಬೇಕು. ಇಲ್ಲಿನ ಸಮುದಾಯಕ್ಕೆ ಉತ್ತಮ ತರಬೇತಿ ಕೊಡಿಸಿ, ಉದ್ಯೋಗ ನೀಡಲು ಸಾಲ ಸೌಲಭ್ಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ನಗರಾಭಿವೃದ್ಧಿ ಕೋಶದ ಕೃಷ್ಣಪ್ಪ ಅವರಿಗೆ ಮನವಿಯಲ್ಲಿ ಸಲ್ಲಿಸಲಾಯಿತು.ಈ ವೇಳೆ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಮುಖ್ಯಸ್ಥೆ ಜ್ಯೋತಿ ಮಂಜುನಾಥ ಗೊಂಡಬಾಳ, ಸರೋಜಾ ಬಾಕಳೆ, ವಿಜಯಲಕ್ಷ್ಮೀ  ಗುಳೇದ್‌, ಅಜುಮುನ್ನಿಸಾ ಬೇಗಂ, ಶಿವಲೀಲಾ ಹಿರೇಮಠ, ಸಲೀಮಾ ಜಾನ್‌, ಮಲ್ಲಪ್ಪ ಹಡಪದ, ಬಸವರಾಜ ದೇಸಾಯಿ, ಲತಾ ಕಲ್ಲೇಶ್‌ ಇತರರಿದ್ದರು.

ಸಜ್ಜಿ ಹೊಲಕ್ಕೆ ಅಧಿಕಾರಿಗಳು ಭೇಟಿ
ಹಕ್ಕಿಪಿಕ್ಕಿ ಸಮುದಾಯವು ತೀರಾ ಕೆಳ ಹಂತದ ಜೀವನ ಸಾಗಿಸುತ್ತಿರುವ ಹಿನ್ನೆಲೆಯಲ್ಲಿ ಮೌಡ್ಯ ಆಚರಣೆ ಈ ಸಮುದಾಯದಲ್ಲಿ ಇನ್ನೂ ಜೀವಂತವಿರುವ ಕುರಿತು ಮಾಧ್ಯಮದಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ. ಕಲ್ಲೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ, ಹಲವು ಕುಟುಂಬಕ್ಕೆ ಸರ್ಕಾರದ ಸೌಲಭ್ಯ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಮಕ್ಕಳನ್ನು ಶಾಲೆಗೆ ದಾಖಲಿಸಿ ಶಿಕ್ಷಣ ಕೊಡಿಸಬೇಕೆಂದು ಸೂಚನೆ ನೀಡಿದರು. ಅಲ್ಲದೇ, ಹಕ್ಕಿಪಿಕ್ಕಿ ಸಮುದಾಯ ಸೌಲಭ್ಯ ಪಡೆಯಬೇಕೆಂದು ಸೂಚನೆ ನೀಡಿದರು. ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಅಮರೇಶ ಕಡಗದ, ಸುಬಾನ್‌ ಸೈಯದ್‌, ಶಿವಕುಮಾರ ಇದ್ದರು.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.