ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು.

Team Udayavani, Apr 19, 2024, 5:32 PM IST

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

■ ಉದಯವಾಣಿ ಸಮಾಚಾರ
ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರು ನಾಮಪತ್ರ ಸಲ್ಲಿಸಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಆದರೆ ಅವರ ತಂದೆ ಕೆ.ಬಸವರಾಜ ಹಿಟ್ನಾಳ ಅವರು ಮಗನ ವಿರುದ್ಧವೇ ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಬಯಸಿ ಗುರುವಾರ ನಗರದ ಡಿಸಿ ಕಚೇರಿಯ ಜಿಲ್ಲಾ ಚುನಾವಣಾಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಹೌದು.. ಅಚ್ಚರಿಯಾದರೂ ಸತ್ಯದ ಸಂಗತಿ.. ಹಾಗಂತಾ ನೀವು ಇವರಿಗೇನಾಯ್ತಪ್ಪ ತಂದೆ-ಮಗನಿಗೆ ಎಂದು ಭಾವಿಸಬೇಡಿ. ಪ್ರಸ್ತುತ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಜಶೇಖರ ಹಿಟ್ನಾಳ ಅವರು ನಾಮಪತ್ರ ಸಲ್ಲಿಸಿ ಎಂಟೂ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ಆರಂಭಿಸಿ ಪ್ರಚಾರದ ಭರಾಟೆಯಲ್ಲಿದ್ದಾರೆ. ಅವರ ತಂದೆ ಬಸವರಾಜ ಹಿಟ್ನಾಳ ಅವರು ನಾಮಪತ್ರ ಸಲ್ಲಿಸಿದ್ದಾರೆ. ಆದರೆ
ಮಗನ ಪರ ಪ್ರಚಾರ ನಡೆಸುತ್ತಿದ್ದಾರೆ.

ಇದೇನಪ್ಪಾ ಎಂದು ತಲೆ ಕೆರೆದುಕೊಳ್ಳಬೇಡಿ. ಮಗನ ನಾಮಪತ್ರದಲ್ಲಿ ಏನಾದರೂ ದೋಷವಾಗಿ ತಿರಸ್ಕಾರವಾದರೆ ಕನಿಷ್ಟ ಪಕ್ಷೇತರ ಅಭ್ಯರ್ಥಿಯಾದರೂ ಚುನಾವಣಾ ಕಣದಲ್ಲಿ ಇರಬೇಕು ಎನ್ನುವ ಚುನಾವಣೆ ಲೆಕ್ಕಾಚಾರ, ದೂರದೃಷ್ಟಿ, ರಾಜಕೀಯ ಅನುಭವದಿಂದಾಗಿ ಇವರು ನಾಮಪತ್ರ ಸಲ್ಲಿಸಿದ್ದಾರೆ.

ಪ್ರತಿ ಬಾರಿಯ ವಿಧಾನಸಭಾ ಅಥವಾ ಲೋಕಸಭಾ ಚುನಾವಣೆಯಲ್ಲಿ ಹಿಟ್ನಾಳ ಕುಟುಂಬದಲ್ಲಿ ಪಕ್ಷದಿಂದ ಯಾರಾದರೂ
ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಅವರ ಜೊತೆಗೆ ಇವರದ್ದೇ ಕುಟುಂಬದ ಮತ್ತೊಬ್ಬ ಸದಸ್ಯರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದು ವಾಡಿಕೆ. ಕಳೆದ 2023ರ ವಿಧಾನಸಭಾ ಚುನಾವಣೆಯ ವೇಳೆ ರಾಘವೇಂದ್ರ ಹಿಟ್ನಾಳ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ನಾಮಪತ್ರ ಸಲ್ಲಿಸಿದ್ದರೆ, ಅವರ ಸಹೋದರ ರಾಜಶೇಖರ ಹಿಟ್ನಾಳ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

2014ರಲ್ಲಿ ಹಿಂದೆ ಲೋಕಸಭೆಗೆ ಬಸವರಾಜ ಹಿಟ್ನಾಳ ಅವರು ಸ್ಪರ್ಧೆ ಬಯಸಿ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದರೆ, ಆಗ ಅವರ ಪುತ್ರ ರಾಜಶೇಖರ ಹಿಟ್ನಾಳ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರು.

ಹೀಗೆ.. ಪ್ರತಿ ಚುನಾವಣೆಯ ಸಂದರ್ಭದಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಯಾವುದೋ ಕಾರಣಕ್ಕೆ ಅಥವಾ
ದೋಷದಿಂದಲೋ ತಿರಸ್ಕಾರವಾದರೆ ಚುನಾವಣಾ ಕಣದಲ್ಲಿ ಪಕ್ಷೇತರರಾಗಿ ಕಣದಲ್ಲಿ ಉಳಿಯಲು ಸಾಧ್ಯವಾಗಲಿದೆ ಎನ್ನುವ ರಾಜಕೀಯ ಮುಂದಾಲೋಚನೆಯ ಕಾರಣಕ್ಕೆ ಇವರ ಕುಟುಂಬವು ಪ್ರತಿ ಬಾರಿಯೂ ನಾಮಪತ್ರ ಸಲ್ಲಿಸುತ್ತಿದೆ.

ನಾಮಪತ್ರಗಳ ಹಿಂಪಡೆಯುವ ವೇಳೆ ತಮ್ಮ ಪಕ್ಷದ ಅಭ್ಯರ್ಥಿನಾಮಪತ್ರ ಕ್ರಮಬದ್ಧ ಅಧಿಕೃತ ಎಂದು ಘೋಷಿಸಿದ ಬಳಿಕ ಪಕ್ಷೇತರರಾಗಿ ಸ್ಪರ್ಧೆ ಮಾಡಿರುವ ಇವರು ನಾಮಪತ್ರ ವಾಪಾಸ್‌ ಪಡೆಯುತ್ತಾರೆ. ಈ ಪದ್ಧತಿ ಕಳೆದ ಕೆಲವು ಚುನಾವಣೆಯಿಂದ ಆರಂಭ ಮಾಡಿದ್ದಾರೆ. ಹೀಗಾಗಿ ಪ್ರಸ್ತುತ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ರಾಜಶೇಖರ ಹಿಟ್ನಾಳ ಅವರ ಪ್ರತಿ ಸ್ಪರ್ಧಿಯಾಗಿ ತಂದೆ ಕೆ.ಬಸವರಾಜ ಹಿಟ್ನಾಳ ಅವರು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ
ಸಂದರ್ಭದಲ್ಲಿ ಇವರ ನಾಮಪತ್ರ ಸಲ್ಲಿಕೆಯು ಮಾತ್ರ ರಾಜಕೀಯ ಚರ್ಚೆಗಳಿಗೆ ಆಸಕ್ತಿ ಮೂಡಿಸಿದೆ.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.