ತೋಟಗಾರಿಕೆ ಮೇಳ ರೈತರಿಗೆ ಸಹಕಾರಿ
Team Udayavani, Feb 20, 2020, 3:08 PM IST
ಕೊಪ್ಪಳ: ತೋಟಗಾರಿಕೆ ಬೆಳೆಯನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸಲು ಮೇಳವನ್ನು ಆಯೋಜನೆ ಮಾಡಿದೆ. ಇದರಿಂದ ರೈತರಿಗೆ ತುಂಬ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಹೇಳಿದರು.
ನಗರದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ತೋಟಗಾರಿಕೆ ಇಲಾಖೆ, ರಾಜ್ಯ ತೋಟಗಾರಿಕೆ ಮಾರಾಟ ಮಹಾ ಮಂಡಳಿ, ಜಿಲ್ಲಾ ಹಾಪ್ಕಾಮ್ಸ್ ಸಹಯೋಗದಲ್ಲಿ ಬುಧವಾರ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ ಮತ್ತು ಕರಬೂಜ ಬೆಳೆ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗುಣಮಟ್ಟದ ಬೆಳೆಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸಲು ತೋಟಗಾರಿಕೆ ಇಲಾಖೆಯಿಂದ ಈ ಮೇಳ ಆಯೋಜಿಸಲಾಗಿದೆ. ಅಲ್ಲದೇ ಯಾವುದೇ ಮಧ್ಯವರ್ತಿಗಳಿಲ್ಲದೇ ಸೂಕ್ತ ಬೆಲೆಯೊಂದಿಗೆ ರೈತರಿಗೆ ನೇರವಾಗಿ ಲಾಭ ದೊರೆಯಲಿದೆ ಎಂದರು.
ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ ಮತ್ತು ಕರಬೂಜ ಬೆಳೆಯ ಕುರಿತಾದ ತಾಂತ್ರಿಕ ಮಾಹಿತಿ ಕೈಪಿಡಿಯನ್ನು ಜಿಪಂ ಸಿಇಒ ರಘುನಂದನ್ ಮೂರ್ತಿ ಬಿಡುಗಡೆಗೊಳಿಸಿದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ನಜೀರ ಅಹ್ಮದ್, ಕೇಂದ್ರ ಸ್ಥಾನಿಕ ಸಹಾಯಕ ಮಂಜುನಾಥ ಲಿಂಗಣ್ಣನವರ, ಸಹಾಯಕ ತೋಟಗಾರಿಕೆ ನಿರ್ದೇಶಕ ರಮೇಶ ಗುಡಸಲದ, ಮುನಿರಾಬಾದ್ ತರಬೇತಿ ಕೇಂದ್ರದ ಸಹಾಯಕ ತೋಟಗಾರಿಕೆ ನಿರ್ದೇಶಕ ಹನುಮೇಶ ನಾಯಕ, ವಿಷಯ ತಜ್ಞ ವಾಮನ ಮೂರ್ತಿ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್